AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬಿತ್ತು ಬಿಗ್​ ಬಾಸ್​ ಸ್ಪರ್ಧಿಯ ಪ್ರೆಗ್ನೆನ್ಸಿ ಟೆಸ್ಟ್ ರಿಸಲ್ಟ್; ಅಭಿಮಾನಿಗಳಿಗೆ ಗುಡ್ ನ್ಯೂಸ್

ಬಿಗ್ ಬಾಸ್​ನಲ್ಲಿ ಇತ್ತೀಚೆಗೆ ಪತಿಯ ಜೊತೆ ಅಂಕಿತಾ ಮಾತನಾಡುತ್ತಿದ್ದರು. ‘ನನಗೆ ಪಿರಿಯಡ್ಸ್ ಆಗಿಲ್ಲ. ನನ್ನ ಭಾವನೆಗಳಲ್ಲಿ ಸಾಕಷ್ಟು ಏರಿಳಿತ ಉಂಟಾಗುತ್ತಿದೆ. ನಾನು ಪ್ರೆಗ್ನೆಂಟ್ ಎನ್ನುವ ಭಾವನೆ ಕಾಡುತ್ತಿದೆ’ ಎಂದು ಅಂಕಿತಾ ಹೇಳಿದ್ದರು.

ಹೊರಬಿತ್ತು ಬಿಗ್​ ಬಾಸ್​ ಸ್ಪರ್ಧಿಯ ಪ್ರೆಗ್ನೆನ್ಸಿ ಟೆಸ್ಟ್ ರಿಸಲ್ಟ್; ಅಭಿಮಾನಿಗಳಿಗೆ ಗುಡ್ ನ್ಯೂಸ್
ಅಂಕಿತಾ-ವಿಕ್ಕಿ
ರಾಜೇಶ್ ದುಗ್ಗುಮನೆ
|

Updated on:Nov 25, 2023 | 3:01 PM

Share

ಅಂಕಿತಾ ಲೋಖಂಡೆ (Ankita Lokhande) ಹಾಗೂ ವಿಕ್ಕಿ ಜೈನ್ ದಂಪತಿ ಹಿಂದಿ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಅಂಕಿತಾ ಅವರು ಇತ್ತೀಚೆಗೆ ಮಾತನಾಡುತ್ತಾ ತಾವು ಪ್ರೆಗ್ನೆಂಟ್ ಆಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆ ಬಳಿಕ ಬಿಗ್ ಬಾಸ್ ಕಡೆಯಿಂದ ಪ್ರೆಗ್ನೆನ್ಸಿ ಟೆಸ್ಟ್ ಮಾಡಲಾಯಿತು. ಟೆಸ್ಟ್​ ವೇಳೆ ರಿಸಲ್ಟ್ ನೆಗೆಟಿವ್ ಬಂದಿದೆ. ಇದರಿಂದ ಅಂಕಿತಾ ಹಾಗೂ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಒಂದೊಮ್ಮೆ ಪ್ರೆಗ್ನೆಂಟ್ ಆಗಿದ್ದರೆ ಅವರು ಮನೆಯಿಂದ ಹೊರ ಹೋಗಬೇಕಾದ ಪರಿಸ್ಥಿತಿ ಬಂದೊದಗುತ್ತಿತ್ತು. ಹೀಗಾಗಿ, ಇದನ್ನು ಸ್ಪರ್ಧಿಗಳು ಗುಡ್ ನ್ಯೂಸ್ ಎಂದು ಕರೆದಿದ್ದಾರೆ.

ಬಿಗ್ ಬಾಸ್​ನಲ್ಲಿ ಇತ್ತೀಚೆಗೆ ಪತಿಯ ಜೊತೆ ಅಂಕಿತಾ ಮಾತನಾಡುತ್ತಿದ್ದರು. ‘ನನಗೆ ಪಿರಿಯಡ್ಸ್ ಆಗಿಲ್ಲ. ನನ್ನ ಭಾವನೆಗಳಲ್ಲಿ ಸಾಕಷ್ಟು ಏರಿಳಿತ ಉಂಟಾಗುತ್ತಿದೆ. ನಾನು ಪ್ರೆಗ್ನೆಂಟ್ ಎನ್ನುವ ಭಾವನೆ ಕಾಡುತ್ತಿದೆ’ ಎಂದು ಅಂಕಿತಾ ಹೇಳಿದ್ದರು. ಇದನ್ನು ಹಾಸ್ಯಕ್ಕೆ ಹೇಳಿಲ್ಲ ಎಂಬುದು ಅವರ ಮುಖದ ಭಾವನೆ ನೋಡಿಯೇ ಅಭಿಮಾನಿಗಳಿಗೆ ಸ್ಪಷ್ಟವಾಗಿತ್ತು. ವಿಕ್ಕಿ ಜೊತೆ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ.

ಅಂಕಿತಾ ಅವರ ಪ್ರೆಗ್ನೆನ್ಸಿ ಟೆಸ್ಟ್​ನ ರಿಸಲ್ಟ್ ಬಂದಿದೆ ಎನ್ನಲಾಗಿದೆ. ಅವರು ಪ್ರೆಗ್ನೆಂಟ್ ಅಲ್ಲ ಅನ್ನೋದು ಖಚಿತವಾಗಿದೆ. ಈ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಶೀಘ್ರವೇ ಘೋಷಣೆ ಆಗುತ್ತದೆಯೇ ಅಥವಾ ಈ ವಿಚಾರವನ್ನು ಗುಟ್ಟಾಗಿಯೇ ಇಡಲಾಗುತ್ತದೆ ಎನ್ನುವ ಕುತೂಹಲ ಮೂಡಿದೆ.

ಅಂಕಿತಾ ಲೋಖಂಡೆ ಅವರು ಸುಶಾಂತ್ ಸಿಂಗ್ ರಜಪೂತ್ ಜೊತೆ ಪ್ರೀತಿಯಲ್ಲಿದ್ದರು. ಇಬ್ಬರೂ ಆರು ವರ್ಷಗಳ ಕಾಲ ಸುತ್ತಾಟ ನಡೆಸಿದ್ದರು. ಸುಶಾಂತ್ ಸಿಂಗ್​ಗೆ ಯಶಸ್ಸು ಸಿಕ್ಕ ಬಳಿಕ ಅವರು ಅಂಕಿತಾ ಇಂದ ದೂರವಾದರು ಎನ್ನಲಾಗಿದೆ. ಅಂಕಿತಾ ಅವರು ನಂತರ ವಿಕ್ಕಿಯನ್ನು ಮದುವೆ ಆದರು. ಇಬ್ಬರ ಮಧ್ಯೆ ಸಾಕಷ್ಟು ಮನಸ್ತಾಪಗಳು ಇವೆ. ಅದು ಬಿಗ್ ಬಾಸ್ ಮನೆಯಲ್ಲಿ ಕಾಣುತ್ತಿದೆ.

ಇದನ್ನೂ ಓದಿ: ‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​

ಅಂಕಿತಾ ಹಾಗೂ ವಿಕ್ಕಿ ಸಾಕಷ್ಟು ಕಿತ್ತಾಟ ನಡೆಸುತ್ತಿದ್ದಾರೆ. ವಿಕ್ಕಿಗೆ ಇತ್ತೀಚೆಗೆ ಅಂಕಿತಾ ಚಪ್ಪಲಿ ಬೀಸಿ ಹೊಡೆದಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಪತ್ನಿ ಚಪ್ಪಲಿ ಎಸೆದಿದ್ದನ್ನು ವಿಕ್ಕಿ ಸಹಜವಾಗಿಯೇ ಸ್ವೀಕರಿಸಿದ್ದರು. ಇವರು ಶೀಘ್ರವೇ ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Sat, 25 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು