AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪಿರಿಯಡ್ಸ್ ಆಗಿಲ್ಲ, ನಾನು ಪ್ರೆಗ್ನೆಂಟ್’; ಬಿಗ್ ಬಾಸ್​ನಲ್ಲಿ ಹೊರಬಿತ್ತು ವಿಚಾರ

ಅಂಕಿತಾ ಹಾಗೂ ವಿಕ್ಕಿ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಂಕಿತಾ ಸಿಟ್ಟಲ್ಲಿ ಕೂಗಾಡಿದ್ದಾರೆ. ಎಲ್ಲರ ಎದುರು ಪತಿ ತಮಗೆ ಅವಮಾನ ಮಾಡುತ್ತಾರೆ ಎಂಬುದು ಅಂಕಿತಾ ದೂರು.

‘ನನಗೆ ಪಿರಿಯಡ್ಸ್ ಆಗಿಲ್ಲ, ನಾನು ಪ್ರೆಗ್ನೆಂಟ್’; ಬಿಗ್ ಬಾಸ್​ನಲ್ಲಿ ಹೊರಬಿತ್ತು ವಿಚಾರ
ಅಂಕಿತಾ
ರಾಜೇಶ್ ದುಗ್ಗುಮನೆ
|

Updated on: Nov 18, 2023 | 8:01 AM

Share

ಬಿಗ್ ಬಾಸ್ (Bigg Boss) ಹಲವು ಭಾಷೆಗಳಲ್ಲಿ ಪ್ರಸಾರ ಕಾಣುತ್ತಿದೆ. ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಈ ಶೋ ಮೆಚ್ಚುಗೆ ಪಡೆಯುತ್ತಿದೆ. ಕನ್ನಡದ ರೀತಿಯೇ ಹಿಂದಿ ಬಿಗ್ ಬಾಸ್ ಕೂಡ ಗಮನ ಸೆಳೆಯುತ್ತಿದೆ. 17ನೇ ಸೀಸನ್​ನಲ್ಲಿ ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಈ ಪೈಕಿ ಸುಶಾಂತ್ ಸಿಂಗ್ ರಜಪೂತ್ ಮಾಜಿ ಲವರ್, ನಟಿ ಅಂಕಿತಾ ಲೋಕಂಡೆ ಹಾಗೂ ಅವರ ಪತಿ ವಿಕ್ಕಿ ಜೈನ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇಬ್ಬರೂ ಸಾಕಷ್ಟು ಕಿತ್ತಾಡಿಕೊಳ್ಳುತ್ತಿದ್ದಾರೆ. ಈಗ ಅಂಕಿತಾಗೆ ಪ್ರೆಗ್ನೆಂಟ್ ಆಗಿರುವ ಬಗ್ಗೆ ಅನುಮಾನ ಮೂಡಿದೆ. ಈ ಬಗ್ಗೆ ಪತಿ ವಿಕ್ಕಿ ಜೈನ್ ಬಳಿ ಹೇಳಿಕೊಂಡಿದ್ದಾರೆ.

ಅಂಕಿತಾ ಹಾಗೂ ವಿಕ್ಕಿ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಂಕಿತಾ ಸಿಟ್ಟಲ್ಲಿ ಕೂಗಾಡಿದ್ದಾರೆ. ಎಲ್ಲರ ಎದುರು ಪತಿ ತಮಗೆ ಅವಮಾನ ಮಾಡುತ್ತಾರೆ ಎಂಬುದು ಅಂಕಿತಾ ದೂರು. ವಿಕ್ಕಿ ಅವರು ಕೂಡ ಇದೇ ಮಾದರಿಯಲ್ಲಿ ದೂರು ಹೇಳಿಕೊಂಡಿದ್ದಾರೆ.

‘ನನಗೆ ಮಾನಸಿಕವಾಗಿ ಹಿಂಸೆ ಆಗುತ್ತಿದೆ. ನನಗೆ ಅನಾರೋಗ್ಯ ಆದಂತೆ ಭಾಸ ಆಗುತ್ತಿದೆ. ನನಗೆ ಪಿರಿಯಡ್ಸ್ ಆಗುತ್ತಿಲ್ಲ. ನನಗೆ ಮನೆಗೆ ಹೋಗಬೇಕು. ನಾನು ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಿದ್ದೀನಿ. ನನ್ನ ಭಾವನೆಗಳಲ್ಲಿ ಏರಿಳಿತ ಆಗುತ್ತಿದೆ. ನನಗೆ ಅದನ್ನು ಹೇಳೋಕೆ ಆಗಲ್ಲ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ. ಅದಕ್ಕೆ ನಾನು ನಿನ್ನನ್ನು ದೂಷಿಸುತ್ತಿಲ್ಲ’ ಎಂದಿದ್ದಾರೆ ಅಂಕಿತಾ.

ಇದನ್ನೂ ಓದಿ: ಸುಶಾಂತ್ ಸಿಂಗ್ ಜೊತೆಗಿನ ಬ್ರೇಕಪ್​ಗೆ ಕಾರಣವೇ ಇಲ್ಲ; ಮೌನ ಮುರಿದ ಅಂಕಿತಾ ಲೋಕಂಡೆ

ಸದ್ಯ ಅಂಕಿತಾ ಅವರ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರ ಹೇಳಿಕೆಯನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಅವರು ಈ ಬಗ್ಗೆ ಮಾತನಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿಯ ಹಿಂದಿ ಬಿಗ್ ಬಾಸ್ ಜಿಯೋ ಸಿನಿಮಾ, ಕಲರ್ಸ್​ನಲ್ಲಿ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್