AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪಿರಿಯಡ್ಸ್ ಆಗಿಲ್ಲ, ನಾನು ಪ್ರೆಗ್ನೆಂಟ್’; ಬಿಗ್ ಬಾಸ್​ನಲ್ಲಿ ಹೊರಬಿತ್ತು ವಿಚಾರ

ಅಂಕಿತಾ ಹಾಗೂ ವಿಕ್ಕಿ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಂಕಿತಾ ಸಿಟ್ಟಲ್ಲಿ ಕೂಗಾಡಿದ್ದಾರೆ. ಎಲ್ಲರ ಎದುರು ಪತಿ ತಮಗೆ ಅವಮಾನ ಮಾಡುತ್ತಾರೆ ಎಂಬುದು ಅಂಕಿತಾ ದೂರು.

‘ನನಗೆ ಪಿರಿಯಡ್ಸ್ ಆಗಿಲ್ಲ, ನಾನು ಪ್ರೆಗ್ನೆಂಟ್’; ಬಿಗ್ ಬಾಸ್​ನಲ್ಲಿ ಹೊರಬಿತ್ತು ವಿಚಾರ
ಅಂಕಿತಾ
ರಾಜೇಶ್ ದುಗ್ಗುಮನೆ
|

Updated on: Nov 18, 2023 | 8:01 AM

Share

ಬಿಗ್ ಬಾಸ್ (Bigg Boss) ಹಲವು ಭಾಷೆಗಳಲ್ಲಿ ಪ್ರಸಾರ ಕಾಣುತ್ತಿದೆ. ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಈ ಶೋ ಮೆಚ್ಚುಗೆ ಪಡೆಯುತ್ತಿದೆ. ಕನ್ನಡದ ರೀತಿಯೇ ಹಿಂದಿ ಬಿಗ್ ಬಾಸ್ ಕೂಡ ಗಮನ ಸೆಳೆಯುತ್ತಿದೆ. 17ನೇ ಸೀಸನ್​ನಲ್ಲಿ ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಈ ಪೈಕಿ ಸುಶಾಂತ್ ಸಿಂಗ್ ರಜಪೂತ್ ಮಾಜಿ ಲವರ್, ನಟಿ ಅಂಕಿತಾ ಲೋಕಂಡೆ ಹಾಗೂ ಅವರ ಪತಿ ವಿಕ್ಕಿ ಜೈನ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇಬ್ಬರೂ ಸಾಕಷ್ಟು ಕಿತ್ತಾಡಿಕೊಳ್ಳುತ್ತಿದ್ದಾರೆ. ಈಗ ಅಂಕಿತಾಗೆ ಪ್ರೆಗ್ನೆಂಟ್ ಆಗಿರುವ ಬಗ್ಗೆ ಅನುಮಾನ ಮೂಡಿದೆ. ಈ ಬಗ್ಗೆ ಪತಿ ವಿಕ್ಕಿ ಜೈನ್ ಬಳಿ ಹೇಳಿಕೊಂಡಿದ್ದಾರೆ.

ಅಂಕಿತಾ ಹಾಗೂ ವಿಕ್ಕಿ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದರು. ಆಗ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಅಂಕಿತಾ ಸಿಟ್ಟಲ್ಲಿ ಕೂಗಾಡಿದ್ದಾರೆ. ಎಲ್ಲರ ಎದುರು ಪತಿ ತಮಗೆ ಅವಮಾನ ಮಾಡುತ್ತಾರೆ ಎಂಬುದು ಅಂಕಿತಾ ದೂರು. ವಿಕ್ಕಿ ಅವರು ಕೂಡ ಇದೇ ಮಾದರಿಯಲ್ಲಿ ದೂರು ಹೇಳಿಕೊಂಡಿದ್ದಾರೆ.

‘ನನಗೆ ಮಾನಸಿಕವಾಗಿ ಹಿಂಸೆ ಆಗುತ್ತಿದೆ. ನನಗೆ ಅನಾರೋಗ್ಯ ಆದಂತೆ ಭಾಸ ಆಗುತ್ತಿದೆ. ನನಗೆ ಪಿರಿಯಡ್ಸ್ ಆಗುತ್ತಿಲ್ಲ. ನನಗೆ ಮನೆಗೆ ಹೋಗಬೇಕು. ನಾನು ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಿದ್ದೀನಿ. ನನ್ನ ಭಾವನೆಗಳಲ್ಲಿ ಏರಿಳಿತ ಆಗುತ್ತಿದೆ. ನನಗೆ ಅದನ್ನು ಹೇಳೋಕೆ ಆಗಲ್ಲ. ನಾನು ಗೊಂದಲಕ್ಕೆ ಒಳಗಾಗಿದ್ದೇನೆ. ಅದಕ್ಕೆ ನಾನು ನಿನ್ನನ್ನು ದೂಷಿಸುತ್ತಿಲ್ಲ’ ಎಂದಿದ್ದಾರೆ ಅಂಕಿತಾ.

ಇದನ್ನೂ ಓದಿ: ಸುಶಾಂತ್ ಸಿಂಗ್ ಜೊತೆಗಿನ ಬ್ರೇಕಪ್​ಗೆ ಕಾರಣವೇ ಇಲ್ಲ; ಮೌನ ಮುರಿದ ಅಂಕಿತಾ ಲೋಕಂಡೆ

ಸದ್ಯ ಅಂಕಿತಾ ಅವರ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರ ಹೇಳಿಕೆಯನ್ನು ನಾನಾ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಅವರು ಈ ಬಗ್ಗೆ ಮಾತನಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿಯ ಹಿಂದಿ ಬಿಗ್ ಬಾಸ್ ಜಿಯೋ ಸಿನಿಮಾ, ಕಲರ್ಸ್​ನಲ್ಲಿ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ