AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ankita Lokhande: ಬಿಗ್​ ಬಾಸ್​ ಮನೆಯಲ್ಲಿ ಗಂಡನಿಗೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ತಾರಕಕ್ಕೇರಿತು ಕಿತ್ತಾಟ

Bigg Boss 17: ಊಟದ ವಿಚಾರಕ್ಕೆ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ನಡೆಯುತ್ತಿತ್ತು. ವಿಕ್ಕಿ ಜೈನ್​ ಹೇಳಿದ ಮಾತುಗಳು ಅಂಕಿತಾ ಲೋಖಂಡೆ ಅವರಿಗೆ ಇಷ್ಟ ಆಗಲಿಲ್ಲ. ಅದನ್ನು ಅವರು ವಿರೋಧಿಸಿದರು. ಜಗಳ ಇನ್ನೊಂದು ಹಂತಕ್ಕೆ ಹೋದಾಗ ಅಂಕಿತಾ ಲೋಖಂಡೆ ಅವರು ತಾಳ್ಮೆ ಕಳೆದುಕೊಂಡರು. ಗಂಡನಿಗೆ ಅವರು ಚಪ್ಪಲಿ ಬೀಸಿ ಹೊಡೆದರು.

Ankita Lokhande: ಬಿಗ್​ ಬಾಸ್​ ಮನೆಯಲ್ಲಿ ಗಂಡನಿಗೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ತಾರಕಕ್ಕೇರಿತು ಕಿತ್ತಾಟ
ಅಂಕಿತಾ ಲೋಖಂಡೆ, ವಿಕ್ಕಿ ಜೈನ್​
ಮದನ್​ ಕುಮಾರ್​
|

Updated on: Nov 22, 2023 | 3:36 PM

Share

ಬಿಗ್​ ಬಾಸ್​ ಎಂದರೆ ಹಲವು ಕಿರಿಕ್​ಗಳು ಇದ್ದಿದ್ದೇ. ಎಷ್ಟೇ ಆಪ್ತರಾಗಿದ್ದರೂ ಕೂಡ ದೊಡ್ಮನೆಯಲ್ಲಿ ಗಲಾಟೆಗಳು ಸಹಜ. ಗಂಡ-ಹೆಂಡತಿ ಜೊತೆಯಾಗಿ ಬಿಗ್​ ಬಾಸ್​ (Bigg Boss) ಮನೆಯಲ್ಲಿ ಸ್ಪರ್ಧಿಸಿದರೂ ಸಹ ಕಿತ್ತಾಟ ತಪ್ಪಿಸಲು ಸಾಧ್ಯವಿಲ್ಲ. ಅದಕ್ಕೆ ಬೆಸ್ಟ್​ ಉದಾಹರಣೆ ಎಂದರೆ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್ (Vicky Jain)​. ಬಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ಇವರಿಬ್ಬರು ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ ಶೋನಲ್ಲಿ ಭಾಗವಹಿಸಿದ್ದಾರೆ. ಹೊರಜಗತ್ತಿನಲ್ಲಿ ತುಂಬ ಚೆನ್ನಾಗಿ ಇದ್ದ ಈ ದಂಪತಿಯು ದೊಡ್ಮನೆಗೆ ಬಂದ ಬಳಿಕ ಬದ್ಧ ವೈರಿಗಳಂತೆ ಜಗಳ ಮಾಡಿಕೊಳ್ಳುತ್ತಿದ್ದಾರೆ. ಗಂಡನಿಗೆ ಅಂಕಿತಾ ಲೋಖಂಡೆ (Ankita Lokhande) ಅವರು ಚಪ್ಪಲಿಯಲ್ಲಿ ಹೊಡೆದಿದ್ದಾರೆ.

ಊಟದ ವಿಚಾರಕ್ಕೆ ಬಿಗ್​ ಬಾಸ್​ ಮನೆಯಲ್ಲಿ ಚರ್ಚೆ ನಡೆಯುತ್ತಿತ್ತು. ವಿಕ್ಕಿ ಜೈನ್​ ಹೇಳಿದ ಮಾತುಗಳು ಅಂಕಿತಾ ಲೋಖಂಡೆ ಅವರಿಗೆ ಇಷ್ಟ ಆಗಲಿಲ್ಲ. ಅದನ್ನು ಅವರು ವಿರೋಧಿಸಿದರು. ಜಗಳ ಇನ್ನೊಂದು ಹಂತಕ್ಕೆ ಹೋದಾಗ ಅಂಕಿತಾ ಲೋಖಂಡೆ ಅವರು ತಾಳ್ಮೆ ಕಳೆದುಕೊಂಡರು. ಗಂಡನಿಗೆ ಅವರು ಚಪ್ಪಲಿ ಬೀಸಿ ಹೊಡೆದರು. ವಿಕ್ಕಿ ಜೈನ್​ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕೂಡ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಇವರಿಬ್ಬರ ಸಂಬಂಧ ಇನ್ನಷ್ಟು ಕೆಟ್ಟು ಹೋಗಲಿದೆ ಎಂದು ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ.

ಹೆಂಡತಿಯಿಂದ ಚಪ್ಪಲಿ ಏಟು ತಿಂದರೂ ಕೂಡ ವಿಕ್ಕಿ ಜೈನ್​ ಅವರು ಕೂಲ್​ ಆಗಿ ವರ್ತಿಸಿದ್ದಾರೆ. ಆ ಕ್ಷಣವನ್ನು ಅವರು ತುಂಬ ತಮಾಷೆಯಾಗಿ ಸ್ವೀಕರಿಸಿದ್ದಾರೆ. ‘ಹೆಂಡತಿ ತುಂಬಾ ದುಬಾರಿ ಚಪ್ಪಲಿಯಲ್ಲಿ ಹೊಡೆದಿದ್ದಾಳೆ’ ಎಂದು ಜೋಕ್​ ಮಾಡುತ್ತಾ, ವಾತಾವರಣವನ್ನು ತಿಳಿಗೊಳಿಸಲು ಅವರು ಪ್ರಯತ್ನಿಸಿದ್ದಾರೆ. ಹಾಗಿದ್ದರೂ ಕೂಡ ಅಂಕಿತಾ ಲೋಖಂಡೆ ಅವರು ನಡೆದುಕೊಂಡ ರೀತಿ ನೋಡಿ ಇನ್ನುಳಿದ ಸ್ಪರ್ಧಿಗಳಿಗೆ ಅಚ್ಚರಿ ಆಗಿದೆ. ಈ ಮೊದಲಿನ ಎಪಿಸೋಡ್​ಗಳಲ್ಲೂ ಕೂಡ ಗಂಡನ ಬಗ್ಗೆ ಅಂಕಿತಾ ಅವರು ಹಲವು ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿ: ಸಂಗೀತಾ ದುಡುಕಿನ ನಿರ್ಧಾರ; ಕಾರ್ತಿಕ್​ ಜತೆಗಿನ ಕಿರಿಕ್​ ಬಳಿಕ ಬಿಗ್​ ಬಾಸ್​ ಮನೆಯಿಂದ ಔಟ್​?

ಹಿಂದಿ ಕಿರುತೆರೆಯ ಮೂಲಕ ಅಂಕಿತಾ ಲೋಖಂಡೆ ಗುರುತಿಸಿಕೊಂಡರು. ಸುಶಾಂತ್​ ಸಿಂಗ್​ ರಜಪೂತ್​ ಜೊತೆ ಅವರು ‘ಪವಿತ್ರಾ ರಿಷ್ತಾ’ ಸೀರಿಯಲ್​ನಲ್ಲಿ ನಟಿಸಿದ್ದರು. ಇಬ್ಬರ ನಡುವೆ ನಿಜ ಜೀವನದಲ್ಲೂ ಪ್ರೀತಿ ಮೂಡಿತ್ತು. ಆದರೆ ಒಂದಷ್ಟು ವರ್ಷಗಳ ಬಳಿಕ ಅಂಕಿತಾ ಲೋಖಂಡೆ ಮತ್ತು ಸುಶಾಂತ್​ ಸಿಂಗ್ ರಜಪೂತ್​ ಅವರು ಬ್ರೇಕಪ್​ ಮಾಡಿಕೊಂಡರು. ಆ ನಂತರ ಸುಶಾಂತ್​ ಅವರು ರಿಯಾ ಚರ್ಕವರ್ತಿ ಜೊತೆ ಪ್ರೀತಿಯಲ್ಲಿ ಮುಳುಗಿದರು. ಅಂಕಿತಾ ಅವರು ವಿಕ್ಕಿ ಜೈನ್​ ಜೊತೆ ಮದುವೆಯಾದರು. ಈಗ ಇವರಿಬ್ಬರು ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ