AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​
ಅಂಕಿತಾ ಲೋಖಂಡೆ, ವಿಕ್ಕಿ ಜೈನ್​
ಮದನ್​ ಕುಮಾರ್​
|

Updated on: Dec 21, 2023 | 6:30 PM

Share

ಬಾಲಿವುಡ್​ ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ (Bigg Boss 17) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಜೊತೆ ಪತಿ ವಿಕ್ಕಿ ಜೈನ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿ ಆಗಿದ್ದಾರೆ. ಹೊರ ಜಗತ್ತಿನಲ್ಲಿ ಬಹಳ ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಇವರಿಬ್ಬರು ಈ ರಿಯಾಲಿಟಿ ಶೋಗೆ ಬಂದ ಬಳಿಕ ಕಿತ್ತಾಡಲು ಆರಂಭಿಸಿದ್ದಾರೆ. ಅವರಿಬ್ಬರ ಜಗಳದಲ್ಲಿ ವಿಚ್ಛೇದನದ ವಿಚಾರ ಪ್ರಸ್ತಾಪ ಆಗಿದೆ. ಅಷ್ಟರಮಟ್ಟಿಗೆ ಮನಸ್ತಾಪ ಬೆಳೆದಿದೆ. ಬಿಗ್​ ಬಾಸ್​ ಮುಗಿದ ನಂತರ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್​ (Vicky Jain) ಅವರು ಡಿವೋರ್ಸ್​ ಪಡೆಯುವುದು ಖಚಿತ ಎಂದು ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ.

ಹಿಂದಿ ಕಿರುತೆರೆಯ ಧಾರಾವಾಹಿಗಳ ಮೂಲಕ ಫೇಮಸ್​ ಆದವರು ಅಂಕಿತಾ ಲೋಖಂಡೆ. ‘ಪವಿತ್ರ ರಿಷ್ತಾ’ ಸೀರಿಯಲ್​ನಲ್ಲಿ ನಟಿಸುವಾಗ ಅವರಿಗೆ ಸುಶಾಂತ್​ ಸಿಂಗ್​ ರಜಪೂತ್​ ಜೊತೆ ಪ್ರೀತಿ ಚಿಗುರಿತ್ತು. ನಂತರ ಅವರಿಬ್ಬರು ಬ್ರೇಕಪ್​ ಮಾಡಿಕೊಂಡರು. ಆ ಬಳಿಕ ಅಂಕಿತಾ ಅವರ ಬದುಕಿನಲ್ಲಿ ಬಂದಿದ್ದೇ ವಿಕ್ಕಿ ಜೈನ್​. ಈಗ ಈ ದಂಪತಿ ಬಿಗ್​ ಬಾಸ್​ ಮನೆಯೊಳಗೆ ಕಿತ್ತಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ. ಹಾಗಾಗಿ ಡಿವೋರ್ಸ್​ ಬಗ್ಗೆ ಅಂಕಿತಾ ಆಲೋಚನೆ ಮಾಡಿದ್ದಾರೆ.

ಇದನ್ನೂ ಓದಿ: Ankita Lokhande: ಬಿಗ್​ ಬಾಸ್​ ಮನೆಯಲ್ಲಿ ಗಂಡನಿಗೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ತಾರಕಕ್ಕೇರಿತು ಕಿತ್ತಾಟ

ಇತ್ತೀಚಿನ ಸಂಚಿಕೆಯಲ್ಲಿ ವಿಕ್ಕಿ ಜೈನ್​ ಅವರು ವಿವಾಹಿತ ಪುರುಷರ ಕಷ್ಟಗಳ ಬಗ್ಗೆ ಮಾತನಾಡುತ್ತಿದ್ದರು. ಮದುವೆ ಬಳಿಕ ಗಂಡಸಿಗೆ ಅಷ್ಟೆಲ್ಲ ಕಷ್ಟ ಆಗುತ್ತೆ ಎಂಬುದಾದರೆ ವಿಚ್ಛೇದನ ಪಡೆಯೋಣ ಎಂದು ಅಂಕಿತಾ ಲೋಖಂಡೆ ಹೇಳಿದ್ದಾರೆ. ಇವರ ಮಾತುಗಳನ್ನು ಕೇಳಿಸಿಕೊಂಡ ಇನ್ನುಳಿದ ಸ್ಪರ್ಧಿಗಳಿಗೆ ಮತ್ತು ಪ್ರೇಕ್ಷಕರಿಗೆ ಶಾಕ್​ ಆಗಿದೆ. ಈ ಕಾರ್ಯಕ್ರಮನ್ನು ಸಲ್ಮಾನ್​ ಖಾನ್​ ನಡೆಸಿಕೊಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ