AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​
ಅಂಕಿತಾ ಲೋಖಂಡೆ, ವಿಕ್ಕಿ ಜೈನ್​
ಮದನ್​ ಕುಮಾರ್​
|

Updated on: Dec 21, 2023 | 6:30 PM

Share

ಬಾಲಿವುಡ್​ ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ (Bigg Boss 17) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಜೊತೆ ಪತಿ ವಿಕ್ಕಿ ಜೈನ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿ ಆಗಿದ್ದಾರೆ. ಹೊರ ಜಗತ್ತಿನಲ್ಲಿ ಬಹಳ ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಇವರಿಬ್ಬರು ಈ ರಿಯಾಲಿಟಿ ಶೋಗೆ ಬಂದ ಬಳಿಕ ಕಿತ್ತಾಡಲು ಆರಂಭಿಸಿದ್ದಾರೆ. ಅವರಿಬ್ಬರ ಜಗಳದಲ್ಲಿ ವಿಚ್ಛೇದನದ ವಿಚಾರ ಪ್ರಸ್ತಾಪ ಆಗಿದೆ. ಅಷ್ಟರಮಟ್ಟಿಗೆ ಮನಸ್ತಾಪ ಬೆಳೆದಿದೆ. ಬಿಗ್​ ಬಾಸ್​ ಮುಗಿದ ನಂತರ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್​ (Vicky Jain) ಅವರು ಡಿವೋರ್ಸ್​ ಪಡೆಯುವುದು ಖಚಿತ ಎಂದು ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ.

ಹಿಂದಿ ಕಿರುತೆರೆಯ ಧಾರಾವಾಹಿಗಳ ಮೂಲಕ ಫೇಮಸ್​ ಆದವರು ಅಂಕಿತಾ ಲೋಖಂಡೆ. ‘ಪವಿತ್ರ ರಿಷ್ತಾ’ ಸೀರಿಯಲ್​ನಲ್ಲಿ ನಟಿಸುವಾಗ ಅವರಿಗೆ ಸುಶಾಂತ್​ ಸಿಂಗ್​ ರಜಪೂತ್​ ಜೊತೆ ಪ್ರೀತಿ ಚಿಗುರಿತ್ತು. ನಂತರ ಅವರಿಬ್ಬರು ಬ್ರೇಕಪ್​ ಮಾಡಿಕೊಂಡರು. ಆ ಬಳಿಕ ಅಂಕಿತಾ ಅವರ ಬದುಕಿನಲ್ಲಿ ಬಂದಿದ್ದೇ ವಿಕ್ಕಿ ಜೈನ್​. ಈಗ ಈ ದಂಪತಿ ಬಿಗ್​ ಬಾಸ್​ ಮನೆಯೊಳಗೆ ಕಿತ್ತಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ. ಹಾಗಾಗಿ ಡಿವೋರ್ಸ್​ ಬಗ್ಗೆ ಅಂಕಿತಾ ಆಲೋಚನೆ ಮಾಡಿದ್ದಾರೆ.

ಇದನ್ನೂ ಓದಿ: Ankita Lokhande: ಬಿಗ್​ ಬಾಸ್​ ಮನೆಯಲ್ಲಿ ಗಂಡನಿಗೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ತಾರಕಕ್ಕೇರಿತು ಕಿತ್ತಾಟ

ಇತ್ತೀಚಿನ ಸಂಚಿಕೆಯಲ್ಲಿ ವಿಕ್ಕಿ ಜೈನ್​ ಅವರು ವಿವಾಹಿತ ಪುರುಷರ ಕಷ್ಟಗಳ ಬಗ್ಗೆ ಮಾತನಾಡುತ್ತಿದ್ದರು. ಮದುವೆ ಬಳಿಕ ಗಂಡಸಿಗೆ ಅಷ್ಟೆಲ್ಲ ಕಷ್ಟ ಆಗುತ್ತೆ ಎಂಬುದಾದರೆ ವಿಚ್ಛೇದನ ಪಡೆಯೋಣ ಎಂದು ಅಂಕಿತಾ ಲೋಖಂಡೆ ಹೇಳಿದ್ದಾರೆ. ಇವರ ಮಾತುಗಳನ್ನು ಕೇಳಿಸಿಕೊಂಡ ಇನ್ನುಳಿದ ಸ್ಪರ್ಧಿಗಳಿಗೆ ಮತ್ತು ಪ್ರೇಕ್ಷಕರಿಗೆ ಶಾಕ್​ ಆಗಿದೆ. ಈ ಕಾರ್ಯಕ್ರಮನ್ನು ಸಲ್ಮಾನ್​ ಖಾನ್​ ನಡೆಸಿಕೊಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್