AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​
ಅಂಕಿತಾ ಲೋಖಂಡೆ, ವಿಕ್ಕಿ ಜೈನ್​
ಮದನ್​ ಕುಮಾರ್​
|

Updated on: Dec 21, 2023 | 6:30 PM

Share

ಬಾಲಿವುಡ್​ ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ (Bigg Boss 17) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಜೊತೆ ಪತಿ ವಿಕ್ಕಿ ಜೈನ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿ ಆಗಿದ್ದಾರೆ. ಹೊರ ಜಗತ್ತಿನಲ್ಲಿ ಬಹಳ ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಇವರಿಬ್ಬರು ಈ ರಿಯಾಲಿಟಿ ಶೋಗೆ ಬಂದ ಬಳಿಕ ಕಿತ್ತಾಡಲು ಆರಂಭಿಸಿದ್ದಾರೆ. ಅವರಿಬ್ಬರ ಜಗಳದಲ್ಲಿ ವಿಚ್ಛೇದನದ ವಿಚಾರ ಪ್ರಸ್ತಾಪ ಆಗಿದೆ. ಅಷ್ಟರಮಟ್ಟಿಗೆ ಮನಸ್ತಾಪ ಬೆಳೆದಿದೆ. ಬಿಗ್​ ಬಾಸ್​ ಮುಗಿದ ನಂತರ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್​ (Vicky Jain) ಅವರು ಡಿವೋರ್ಸ್​ ಪಡೆಯುವುದು ಖಚಿತ ಎಂದು ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ.

ಹಿಂದಿ ಕಿರುತೆರೆಯ ಧಾರಾವಾಹಿಗಳ ಮೂಲಕ ಫೇಮಸ್​ ಆದವರು ಅಂಕಿತಾ ಲೋಖಂಡೆ. ‘ಪವಿತ್ರ ರಿಷ್ತಾ’ ಸೀರಿಯಲ್​ನಲ್ಲಿ ನಟಿಸುವಾಗ ಅವರಿಗೆ ಸುಶಾಂತ್​ ಸಿಂಗ್​ ರಜಪೂತ್​ ಜೊತೆ ಪ್ರೀತಿ ಚಿಗುರಿತ್ತು. ನಂತರ ಅವರಿಬ್ಬರು ಬ್ರೇಕಪ್​ ಮಾಡಿಕೊಂಡರು. ಆ ಬಳಿಕ ಅಂಕಿತಾ ಅವರ ಬದುಕಿನಲ್ಲಿ ಬಂದಿದ್ದೇ ವಿಕ್ಕಿ ಜೈನ್​. ಈಗ ಈ ದಂಪತಿ ಬಿಗ್​ ಬಾಸ್​ ಮನೆಯೊಳಗೆ ಕಿತ್ತಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ. ಹಾಗಾಗಿ ಡಿವೋರ್ಸ್​ ಬಗ್ಗೆ ಅಂಕಿತಾ ಆಲೋಚನೆ ಮಾಡಿದ್ದಾರೆ.

ಇದನ್ನೂ ಓದಿ: Ankita Lokhande: ಬಿಗ್​ ಬಾಸ್​ ಮನೆಯಲ್ಲಿ ಗಂಡನಿಗೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ತಾರಕಕ್ಕೇರಿತು ಕಿತ್ತಾಟ

ಇತ್ತೀಚಿನ ಸಂಚಿಕೆಯಲ್ಲಿ ವಿಕ್ಕಿ ಜೈನ್​ ಅವರು ವಿವಾಹಿತ ಪುರುಷರ ಕಷ್ಟಗಳ ಬಗ್ಗೆ ಮಾತನಾಡುತ್ತಿದ್ದರು. ಮದುವೆ ಬಳಿಕ ಗಂಡಸಿಗೆ ಅಷ್ಟೆಲ್ಲ ಕಷ್ಟ ಆಗುತ್ತೆ ಎಂಬುದಾದರೆ ವಿಚ್ಛೇದನ ಪಡೆಯೋಣ ಎಂದು ಅಂಕಿತಾ ಲೋಖಂಡೆ ಹೇಳಿದ್ದಾರೆ. ಇವರ ಮಾತುಗಳನ್ನು ಕೇಳಿಸಿಕೊಂಡ ಇನ್ನುಳಿದ ಸ್ಪರ್ಧಿಗಳಿಗೆ ಮತ್ತು ಪ್ರೇಕ್ಷಕರಿಗೆ ಶಾಕ್​ ಆಗಿದೆ. ಈ ಕಾರ್ಯಕ್ರಮನ್ನು ಸಲ್ಮಾನ್​ ಖಾನ್​ ನಡೆಸಿಕೊಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?