AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಡಿವೋರ್ಸ್​ ನಿರ್ಧಾರ; ದಂಪತಿ ಜಗಳಕ್ಕೆ ಪ್ರೇಕ್ಷಕರು ಶಾಕ್​
ಅಂಕಿತಾ ಲೋಖಂಡೆ, ವಿಕ್ಕಿ ಜೈನ್​
Follow us
ಮದನ್​ ಕುಮಾರ್​
|

Updated on: Dec 21, 2023 | 6:30 PM

ಬಾಲಿವುಡ್​ ನಟಿ ಅಂಕಿತಾ ಲೋಖಂಡೆ (Ankita Lokhande) ಅವರು ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ (Bigg Boss 17) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ಜೊತೆ ಪತಿ ವಿಕ್ಕಿ ಜೈನ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿ ಆಗಿದ್ದಾರೆ. ಹೊರ ಜಗತ್ತಿನಲ್ಲಿ ಬಹಳ ಪ್ರೀತಿಯಿಂದ ಸಂಸಾರ ಮಾಡುತ್ತಿದ್ದ ಇವರಿಬ್ಬರು ಈ ರಿಯಾಲಿಟಿ ಶೋಗೆ ಬಂದ ಬಳಿಕ ಕಿತ್ತಾಡಲು ಆರಂಭಿಸಿದ್ದಾರೆ. ಅವರಿಬ್ಬರ ಜಗಳದಲ್ಲಿ ವಿಚ್ಛೇದನದ ವಿಚಾರ ಪ್ರಸ್ತಾಪ ಆಗಿದೆ. ಅಷ್ಟರಮಟ್ಟಿಗೆ ಮನಸ್ತಾಪ ಬೆಳೆದಿದೆ. ಬಿಗ್​ ಬಾಸ್​ ಮುಗಿದ ನಂತರ ಅಂಕಿತಾ ಲೋಖಂಡೆ ಮತ್ತು ವಿಕ್ಕಿ ಜೈನ್​ (Vicky Jain) ಅವರು ಡಿವೋರ್ಸ್​ ಪಡೆಯುವುದು ಖಚಿತ ಎಂದು ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ.

ಹಿಂದಿ ಕಿರುತೆರೆಯ ಧಾರಾವಾಹಿಗಳ ಮೂಲಕ ಫೇಮಸ್​ ಆದವರು ಅಂಕಿತಾ ಲೋಖಂಡೆ. ‘ಪವಿತ್ರ ರಿಷ್ತಾ’ ಸೀರಿಯಲ್​ನಲ್ಲಿ ನಟಿಸುವಾಗ ಅವರಿಗೆ ಸುಶಾಂತ್​ ಸಿಂಗ್​ ರಜಪೂತ್​ ಜೊತೆ ಪ್ರೀತಿ ಚಿಗುರಿತ್ತು. ನಂತರ ಅವರಿಬ್ಬರು ಬ್ರೇಕಪ್​ ಮಾಡಿಕೊಂಡರು. ಆ ಬಳಿಕ ಅಂಕಿತಾ ಅವರ ಬದುಕಿನಲ್ಲಿ ಬಂದಿದ್ದೇ ವಿಕ್ಕಿ ಜೈನ್​. ಈಗ ಈ ದಂಪತಿ ಬಿಗ್​ ಬಾಸ್​ ಮನೆಯೊಳಗೆ ಕಿತ್ತಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಅಂತಿಮ ದರ್ಶನಕ್ಕೆ ಹೋಗಲಿಲ್ಲವೇಕೆ? ಮಾಜಿ ಗರ್ಲ್​ಫ್ರೆಂಡ್ ಅಂಕಿತಾ ಕೊಟ್ಟರು ಕಾರಣ

ಬಿಗ್​ ಬಾಸ್​ಗೆ ಬಂದ ಬಳಿಕ ಪರಿಚಯವಾಗಿ, ನಂತರ ಮದುವೆಯಾದವರು ಇದ್ದಾರೆ. ಅದೇ ರೀತಿ ದೊಡ್ಮನೆಗೆ ಜೋಡಿಯಾಗಿ ಬಂದು, ನಂತರ ಸಂಬಂಧ ಕೆಡಿಸಿಕೊಂಡ ಮಂದಿಯೂ ಇದ್ದಾರೆ. ವಿಕ್ಕಿ ಜೈನ್​ ಮತ್ತು ಅಂಕಿತಾ ಲೋಖಂಡೆ ನಡುವಿನ ಕಿರಿಕ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಬ್ಬರ ಅಸಲಿ ಮುಖ ಬಯಲಾಗುತ್ತಿದೆ. ಹಾಗಾಗಿ ಡಿವೋರ್ಸ್​ ಬಗ್ಗೆ ಅಂಕಿತಾ ಆಲೋಚನೆ ಮಾಡಿದ್ದಾರೆ.

ಇದನ್ನೂ ಓದಿ: Ankita Lokhande: ಬಿಗ್​ ಬಾಸ್​ ಮನೆಯಲ್ಲಿ ಗಂಡನಿಗೆ ಚಪ್ಪಲಿಯಲ್ಲಿ ಹೊಡೆದ ಪತ್ನಿ; ತಾರಕಕ್ಕೇರಿತು ಕಿತ್ತಾಟ

ಇತ್ತೀಚಿನ ಸಂಚಿಕೆಯಲ್ಲಿ ವಿಕ್ಕಿ ಜೈನ್​ ಅವರು ವಿವಾಹಿತ ಪುರುಷರ ಕಷ್ಟಗಳ ಬಗ್ಗೆ ಮಾತನಾಡುತ್ತಿದ್ದರು. ಮದುವೆ ಬಳಿಕ ಗಂಡಸಿಗೆ ಅಷ್ಟೆಲ್ಲ ಕಷ್ಟ ಆಗುತ್ತೆ ಎಂಬುದಾದರೆ ವಿಚ್ಛೇದನ ಪಡೆಯೋಣ ಎಂದು ಅಂಕಿತಾ ಲೋಖಂಡೆ ಹೇಳಿದ್ದಾರೆ. ಇವರ ಮಾತುಗಳನ್ನು ಕೇಳಿಸಿಕೊಂಡ ಇನ್ನುಳಿದ ಸ್ಪರ್ಧಿಗಳಿಗೆ ಮತ್ತು ಪ್ರೇಕ್ಷಕರಿಗೆ ಶಾಕ್​ ಆಗಿದೆ. ಈ ಕಾರ್ಯಕ್ರಮನ್ನು ಸಲ್ಮಾನ್​ ಖಾನ್​ ನಡೆಸಿಕೊಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು