AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚರಿತ್ ಬಾಳಪ್ಪ ವಿರುದ್ಧ ಮತ್ತೊಂದು ದೂರು ದಾಖಲು

Charith Balappa: ಕನ್ನಡದ ‘ಮುದ್ದು ಲಕ್ಷ್ಮಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟ ಚರಿತ್ ಬಾಳಪ್ಪ ವಿರುದ್ಧ ಮತ್ತೊಂದು ಎಫ್​ಐಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ, ಬೆದರಿಕೆ, ಹಣ ವಸೂಲಿ ಮಾಡಿದ ಆರೋಪಗಳನ್ನು ನಟ ಚರಿತ್ ಬಾಳಪ್ಪ ಎದುರಿಸುತ್ತಿದ್ದಾರೆ. ಚರಿತ್ ಬಾಳಪ್ಪ ವಿರುದ್ಧ ಅಮೃತಹಳ್ಳಿಯಲ್ಲಿ ದಾಖಲಾಗಿದ್ದ ದೂರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ.

ನಟ ಚರಿತ್ ಬಾಳಪ್ಪ ವಿರುದ್ಧ ಮತ್ತೊಂದು ದೂರು ದಾಖಲು
Charith Balappa
ಮಂಜುನಾಥ ಸಿ.
|

Updated on: Feb 16, 2025 | 5:29 PM

Share

‘ಮುದ್ದು ಲಕ್ಷ್ಮಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟ ಧ್ರುವಂತ್ ಅಲಿಯಾಸ್ ಚರಿತ್ ಬಾಳಪ್ಪ ವಿರುದ್ದ ಈಗಾಗಲೇ ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದೀಗ ಅದೇ ನಟನ ವಿರುದ್ಧ ಮತ್ತೊಂದು ದೂರು ದಾಖಲು ದಾಖಲಾಗಿದೆ. ಸೀರಿಯಲ್ ಶೂಟಿಂಗ್ ನೋಡಲು ಹೋಗಿದ್ದ ಮಹಿಳೆಯೊಟ್ಟಿಗೆ ಪರಿಚಯ ಬೆಳೆಸಿಕೊಂಡು ಆಕೆಯನ್ನು ಲೈಂಗಿಕ ತೃಷೆಗಾಗಿ ಚರಿತ್ ಬಾಳಪ್ಪ ಬಳಸಿಕೊಂಡಿದ್ದ ಎನ್ನಲಾಗಿದ್ದು, ಇದೀಗ ಸಂತ್ರಸ್ತೆಯಿಂದ ದೂರು ದಾಖಲಾಗಿದೆ.

ಧಾರಾವಾಹಿ ನೋಡಲು ಬಂದಿದ್ದ ಮಹಿಳೆಯೊಟ್ಟಿಗೆ ಪರಿಚಯ ಮಾಡಿಕೊಂಡು ಪ್ರೀತಿಸುವ ನಾಟಕವಾಡಿ ಆ ನಂತರ ಬೇರೆಯವರೊಂದಿಗೆ ಮದುವೆ ಆಗಿದ್ದನಂತೆ ಧ್ರುವಂತ್ ಅಲಿಯಾಸ್ ಚರಿತ್ ಬಾಳಪ್ಪ. ಅದಾದ ಬಳಿಕ ಯುವತಿ, ಚರಿತ್​ನಿಂದ ದೂರವೇ ಉಳಿದಿದ್ದರು. ಆದರೆ ಮದುವೆ ಆದ ಬಳಿಕವೂ ಸಹ ಈ ಯುವತಿಯ ಸಂಪರ್ಕ ಬೆಳೆಸಿ, ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡುತ್ತಿದ್ದನಂತೆ. ಅದಾದ ಬಳಿಕ ಯುವತಿ ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಂದು ಗಲಾಟೆ ಸಹ ಮಾಡಿದ್ದನಂತೆ.

07/09/2020 ರಂದು ಅಗ್ನೇಯ ವಿಭಾಗದ ಸೆನ್ ಠಾಣೆಯಲಿ ದೂರು ನೀಡಿದ್ದ ಚರಿತ್​ ವಿರುದ್ಧ ದೂರು ನೀಡಿದ್ದರು ಸಂತ್ರಸ್ತೆ. ಆಗ ಠಾಣೆಗೆ ಬಂದು ಸಂತ್ರಸ್ತೆ ತಂಟೆಗೆ ಹೋಗಲ್ಲ ಅಂತ ಅಪಾಲಜಿ ಬರೆದುಕೊಟ್ಟಿದ್ದ ಚರಿತ್. ಬಳಿಕ ಎರಡು ವರ್ಷ ಸಂತ್ರಸ್ತ ಮಹಿಳೆ ತಂಟೆಗೆ ಹೋಗಿರಲಿಲ್ಲ, ಆದರೆ 2022ರಲ್ಲಿ ಆತನ ಹೆಂಡತಿಯೊಂದಿಗೆ ಡಿವೋರ್ಸ್ ಪಡೆದ ಬಳಿಕ ಮತ್ತೆ ಸಂತ್ರಸ್ತೆಯನ್ನು ಭೇಟಿ ಮಾಡಿ ಪುನಃ ಪ್ರೀತಿಸುವಂತೆ, ದೈಹಿಕ ಸಂಬಂಧ ಇಟ್ಟುಕೊಳ್ಳುವಂತೆ ಬಲವಂತ ಮಾಡಿದ್ದ. ಆದರೆ ಸಂತ್ರಸ್ತೆ ಒಪ್ಪದ ಕಾರಣ ಆಕೆಯ ಖಾಸಗಿ ಫೋಟೋ ಇಟ್ಟುಕೊಂಡು‌ ಬ್ಲಾಕ್ ಮೇಲ್ ಸಹ ಮಾಡಿದ್ದನಂತೆ.

ಇದನ್ನೂ ಓದಿ:ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಮರ್ಯಾದೆಗೆ ಹೆದರಿದ ಯುವತಿ ತನ್ನ ಬಳಿ ಇದ್ದ ಹಣ, ಚಿನ್ನ, ಬೆಳ್ಳಿಯ ಆಭರಣ, 23 ಕಂಚಿ ರೇಷ್ಮೆ ಸೀರೆಗಳನ್ನು ಚರಿತ್​ಗೆ ನೀಡಿದ್ದರು. ಕೊನೆಗೆ ರೋಸಿ ಹೋಗಿ ಯುವತಿ ಚರಿತ್ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಇದೀಗ ಚರಿತ್ ಬಾಳಪ್ಪ ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ