AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ನಡೆಯಲಿದೆ ಅನುಬಂಧ ಅವಾರ್ಡ್ಸ್​; ನೀವು ವೋಟ್​ ಮಾಡಬಹುದು

ಕಲರ್ಸ್​ ಕನ್ನಡ ವಾಹಿನಿ ಪ್ರತಿಬಾರಿಯಂತೆ ಈ ಬಾರಿಯೂ ಅನುಬಂಧ ಅವಾರ್ಡ್ಸ್​​ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಪ್ರತಿಬಾರಿ ಇದನ್ನು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತದೆ.

ಶೀಘ್ರವೇ ನಡೆಯಲಿದೆ ಅನುಬಂಧ ಅವಾರ್ಡ್ಸ್​; ನೀವು ವೋಟ್​ ಮಾಡಬಹುದು
‘ಅನುಬಂಧ ಅವಾರ್ಡ್ಸ್​ಗೆ ನೀವು ವೋಟ್​ ಮಾಡಬಹುದು; ಹೇಗೆ?
TV9 Web
| Edited By: |

Updated on: Sep 16, 2021 | 6:41 AM

Share

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಈಗ ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ವೀಕ್ಷಕರ ಎದುರು ಬರುತ್ತಿದೆ.

ಕಲರ್ಸ್​ ಕನ್ನಡ ವಾಹಿನಿ ಪ್ರತಿಬಾರಿಯಂತೆ ಈ ಬಾರಿಯೂ ಅನುಬಂಧ ಅವಾರ್ಡ್ಸ್​​ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಪ್ರತಿಬಾರಿ ಇದನ್ನು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗುತ್ತದೆ.

ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ, ಜನ ಮೆಚ್ಚಿದ ಜೋಡಿ ಸೇರಿ ಸಾಕಷ್ಟು ಅವಾರ್ಡ್​ಗಳನ್ನು ನೀಡಲಾಗುತ್ತದೆ. ಇದಕ್ಕೆ ವೀಕ್ಷಕರು ವೋಟ್​ ಮಾಡಬೇಕು. ಯಾರು ಹೆಚ್ಚು ವೋಟ್​ ಪಡೆಯುತ್ತಾರೋ ಅವರು ಅನುಬಂಧ ಅವಾರ್ಡ್ಸ್​ಗೆ ಭಾಜನರಾಗುತ್ತಾರೆ.

ವೂಟ್​ ಆ್ಯಪ್​​ನಲ್ಲಿ ವೋಟ್​ ಮಾಡೋಕೆ ಅವಕಾಶ ಕಲ್ಪಿಸಲಾಗಿದೆ. ವೀಕ್ಷಕರು ವೂಟ್​ ಆ್ಯಪ್​ಗೆ ತೆರಳಿ ತಮ್ಮಿಷ್ಟದ ನಟ-ನಟಿಯರಿಗೆ ಹಾಗೂ ಮತ್ತಿತರ ವಿಭಾಗದಲ್ಲಿ ವೋಟ್​ ಮಾಡಿ ಅವರನ್ನು ಗೆಲ್ಲಿಸಬಹುದು. ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ದಿನ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಈ ಬಾರಿಯ ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ದಿನಾಂಕವನ್ನು ವಾಹಿನಿ ಇನ್ನೂ ಘೋಷಣೆ ಮಾಡಿಲ್ಲ. ಕೊವಿಡ್​ ನಿಧಾನವಾಗಿ ತಗ್ಗಿದ್ದರಿಂದ ಈ ಬಾರಿ ಅದ್ದೂರಿಯಾಗಿಯೇ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಇನ್ನು ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಕೂಡ ಇರಲಿವೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬರುತ್ತಿದೆ ಹೊಸ ಧಾರಾವಾಹಿ; ಎಷ್ಟು ಗಂಟೆಗೆ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?