AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ನಡೆಯಲಿದೆ ಅನುಬಂಧ ಅವಾರ್ಡ್ಸ್​; ನೀವು ವೋಟ್​ ಮಾಡಬಹುದು

ಕಲರ್ಸ್​ ಕನ್ನಡ ವಾಹಿನಿ ಪ್ರತಿಬಾರಿಯಂತೆ ಈ ಬಾರಿಯೂ ಅನುಬಂಧ ಅವಾರ್ಡ್ಸ್​​ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಪ್ರತಿಬಾರಿ ಇದನ್ನು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತದೆ.

ಶೀಘ್ರವೇ ನಡೆಯಲಿದೆ ಅನುಬಂಧ ಅವಾರ್ಡ್ಸ್​; ನೀವು ವೋಟ್​ ಮಾಡಬಹುದು
‘ಅನುಬಂಧ ಅವಾರ್ಡ್ಸ್​ಗೆ ನೀವು ವೋಟ್​ ಮಾಡಬಹುದು; ಹೇಗೆ?
TV9 Web
| Edited By: |

Updated on: Sep 16, 2021 | 6:41 AM

Share

ಕಿರುತೆರೆ ವ್ಯಾಪ್ತಿ ದಿನಕಳೆದಂತೆ ವಿಸ್ತರಣೆ ಆಗುತ್ತಲೇ ಇದೆ. ಸಿನಿಮಾ ನಿರ್ಮಾಣದ ಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂದಕ್ಕಿಂತ ಒಂದು ಧಾರಾವಾಹಿ ಅದ್ದೂರಿಯಾಗಿ ಮೂಡಿ ಬರುತ್ತಿದೆ. ಇದರ ಜತೆಗೆ ವರ್ಷಕ್ಕೆ ಒಂದು ಬಾರಿ ಧಾರಾವಾಹಿ ಕಲಾವಿದರನ್ನು ಒಟ್ಟಿಗೆ ಸೇರಿಸಲಾಗುತ್ತದೆ. ಈಗ ಕಲರ್ಸ್​ ಕನ್ನಡ ವಾಹಿನಿ ಅನುಬಂಧ ಅವಾರ್ಡ್ಸ್​ನೊಂದಿಗೆ ವೀಕ್ಷಕರ ಎದುರು ಬರುತ್ತಿದೆ.

ಕಲರ್ಸ್​ ಕನ್ನಡ ವಾಹಿನಿ ಪ್ರತಿಬಾರಿಯಂತೆ ಈ ಬಾರಿಯೂ ಅನುಬಂಧ ಅವಾರ್ಡ್ಸ್​​ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ. ಪ್ರತಿಬಾರಿ ಇದನ್ನು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳನ್ನು ಇಟ್ಟುಕೊಂಡು ವಿವಿಧ ರೀತಿಯ ಅವಾರ್ಡ್​ ನೀಡಲಾಗುತ್ತದೆ.

ಜನ ಮೆಚ್ಚಿದ ನಾಯಕಿ, ಜನ ಮೆಚ್ಚಿದ ನಾಯಕ, ಜನ ಮೆಚ್ಚಿದ ಜೋಡಿ ಸೇರಿ ಸಾಕಷ್ಟು ಅವಾರ್ಡ್​ಗಳನ್ನು ನೀಡಲಾಗುತ್ತದೆ. ಇದಕ್ಕೆ ವೀಕ್ಷಕರು ವೋಟ್​ ಮಾಡಬೇಕು. ಯಾರು ಹೆಚ್ಚು ವೋಟ್​ ಪಡೆಯುತ್ತಾರೋ ಅವರು ಅನುಬಂಧ ಅವಾರ್ಡ್ಸ್​ಗೆ ಭಾಜನರಾಗುತ್ತಾರೆ.

ವೂಟ್​ ಆ್ಯಪ್​​ನಲ್ಲಿ ವೋಟ್​ ಮಾಡೋಕೆ ಅವಕಾಶ ಕಲ್ಪಿಸಲಾಗಿದೆ. ವೀಕ್ಷಕರು ವೂಟ್​ ಆ್ಯಪ್​ಗೆ ತೆರಳಿ ತಮ್ಮಿಷ್ಟದ ನಟ-ನಟಿಯರಿಗೆ ಹಾಗೂ ಮತ್ತಿತರ ವಿಭಾಗದಲ್ಲಿ ವೋಟ್​ ಮಾಡಿ ಅವರನ್ನು ಗೆಲ್ಲಿಸಬಹುದು. ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ದಿನ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಈ ಬಾರಿಯ ಅನುಬಂಧ ಅವಾರ್ಡ್ಸ್​ ಕಾರ್ಯಕ್ರಮದ ದಿನಾಂಕವನ್ನು ವಾಹಿನಿ ಇನ್ನೂ ಘೋಷಣೆ ಮಾಡಿಲ್ಲ. ಕೊವಿಡ್​ ನಿಧಾನವಾಗಿ ತಗ್ಗಿದ್ದರಿಂದ ಈ ಬಾರಿ ಅದ್ದೂರಿಯಾಗಿಯೇ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಇನ್ನು ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಕೂಡ ಇರಲಿವೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬರುತ್ತಿದೆ ಹೊಸ ಧಾರಾವಾಹಿ; ಎಷ್ಟು ಗಂಟೆಗೆ?

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ