AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ

ನಟಿ ಮತ್ತು ನಿರೂಪಕಿ ಅನುಪಮಾ ಗೌಡ ಅವರ ನಿಶ್ಚಿತಾರ್ಥದ ಬಗ್ಗೆ ಹರಿದಾಡಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಗೆಳೆಯ ರಾಘವ್ ಜೊತೆಗಿನ ಫೋಟೋ ನೋಡಿ ಎಂಗೇಜ್‌ಮೆಂಟ್ ಎಂದು ಸುದ್ದಿ ಹಬ್ಬಿಸಿದ್ದವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದು ಕೇವಲ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. AI ಬಳಸಿ ನಿಶ್ಚಿತಾರ್ಥದ ಉತ್ತಮ ಫೋಟೋಗಳನ್ನು ಸೃಷ್ಟಿಸುವಂತೆ ಸಲಹೆ ನೀಡಿದ್ದಾರೆ.

‘ನನ್ನ ನಿಶ್ಚಿತಾರ್ಥ ಆಯ್ತು, ಆದ್ರೆ ನನಗೆ ಹೋಗೋಕೆ ಆಗಿಲ್ಲ’; ವದಂತಿಗೆ ಅನುಪಮಾ ಸ್ಪಷ್ಟನೆ
ರಾಘವ್-ಅನುಪಮಾ
ರಾಜೇಶ್ ದುಗ್ಗುಮನೆ
|

Updated on:Mar 23, 2026 | 11:59 AM

Share

ಅನುಪಮಾ ಗೌಡ ಅವರು (Anupama Gowda) ನಟಿ ಹಾಗೂ ನಿರೂಪಕಿ. ಕಲರ್ಸ್​​ ಶೋಗಳನ್ನು ಅವರು ಹೋಸ್ಟ್ ಮಾಡುತ್ತಾರೆ. ಈಗ ಅವರು ನಿರೂಪಣೆಯಲ್ಲಿ ಬ್ಯುಸಿ ಇದ್ದಾರೆ. ಈ ಮೊದಲು ಬಿಗ್ ಬಾಸ್ ಅಲ್ಲೂ ಅನುಪಮಾ ಗೌಡ ಅವರು ಮಿಂಚಿದ್ದರು. ಕಳೆದ ಕೆಲ ದಿನಗಳಿಂದ ಅವರ ನಿಶ್ಚಿತಾರ್ಥ ಎಂಬ ಸುದ್ದಿ ಹರಿದಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಅವರ ಗೆಳೆಯ ರಾಘವ್ ಜೊತೆ ಅನುಪಮಾ ಗೌಡ ಫೋಟೋ ಹಂಚಿಕೊಂಡಿದ್ದರು. ಈ ಫೋಟೋ ನೋಡಿದ ಅನೇಕರು ಅನುಪಮಾ ಗೌಡ ನಿಶ್ಚಿತಾರ್ಥ ಮಾಡಿಕೊಂಡರು ಎಂದೆಲ್ಲ ಸುದ್ದಿ ಹಬ್ಬಿಸಿದರು. ಈ ವಿಷಯದ ಕುರಿತು ಅನುಪಮಾ ಗೌಡ ಅವರು ನೇರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವದಂತಿ ಸುಳ್ಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನುಪಮಾ ಗೌಡ ಅಂದಕ್ಕೆ ಸರಿ ಸಾಟಿಯಾರು? ವಿಡಿಯೋ ನೋಡಿ

‘ಒಂದು ಸೀಕ್ರೆಟ್ ಶೇರ್ ಮಾಡಬೇಕಿತ್ತು. ನಾನು ಸಾಮಾನ್ಯವಾಗಿ ಯಾವುದಕ್ಕೂ ರಿಯಾಕ್ಟ್ ಮಾಡಲ್ಲ. ಆದರೆ, ಶೂಟ್​​ಗೆ ಬಂದಾಗ ಎಲ್ಲರೂ ಕಂಗ್ರಾಜ್ಯುಲೇಷನ್ ಎಂದರು. ಮೆಸೇಜ್ ಕೂಡ ಬರುತ್ತಿತ್ತು. ನನ್ನ ಬೆಸ್ಟ್ ಫ್ರೆಂಡ್ ರಾಘವ್ ಜೊತೆ ಎಂಗೇಜ್​​ಮೆಂಟ್ ಆಯ್ತು. ಆದರೆ ಎಂಗೇಜ್​​ಮೆಂಟ್​ಗೆ ಪಾಲ್ಗೊಳ್ಳಲು ನಮಗೆ ಸಾಧ್ಯವಾಗಿಲ್ಲ. ನಮಗೆ ಯಾರೂ ಮಾಹಿತಿಯೇ ನೀಡಿರಲಿಲ್ಲ. ಒಂದಷ್ಟು ಪೇಜ್​​ನವರು ಈ ರೀತಿ ಸುದ್ದಿ ಹಬ್ಬಿಸುತ್ತಿದ್ದಾರೆ’ ಎಂದು ವ್ಯಂಗವಾಗಿ ಅನುಪಮಾ ಮಾತನಾಡಿದ್ದಾರೆ.

View this post on Instagram

A post shared by Raghava (@_raaghava)

‘ಮುಂದಿನ ಬಾರಿ ಒಳ್ಳೆಯ ಇಮೇಜ್ ಕ್ರಿಯೇಟ್ ಮಾಡಿ. ಉಂಗುರು ಹಾಕುವ ರೀತಿಯ ಫೋಟೋ ಸೃಷ್ಟಿ ಮಾಡಿ. ಈಗ ಹೇಗಿದ್ದರೂ ಎಐ ಬಂದಿದೆ. ಆಗ ಇನ್ನೂ ಖುಷಿ ಆಗುತ್ತದೆ. ಇನ್ನೂ ಟೈಮ್ ಇದೆ. ಮದುವೆನ ಈಗಲೇ ಮಾಡಿಸೋಕೆ ಹೋಗಬೇಡಿ. ಎರಡು ತಿಂಗಳು ಬಿಟ್ಟು ಮಾಡಿ. ಆಗ ಜನರು ನೋಡ್ತಾರೆ. ಟ್ರೆಡಿಷಿನಲ್ ಔಟ್​​ಫಿಟ್ ಹಾಕಿ. ನನ್ನ ರಾಘವ್ ಅವರನ್ನು ಮದುವೆಗೆ ಕರೆಯಿರಿ’ ಎಂದು ಅನುಪಮಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 23 March 26

Follow Us
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ