AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupama Gowda: ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಅನುಪಮಾ ಗೌಡ; ನಟಿ-ನಿರೂಪಕಿಯ ದೊಡ್ಮನೆ ಆಟ ಅಂತ್ಯ

BBK9 | Bigg Boss Elimination: ನಟಿ ಅನುಪಮಾ ಗೌಡ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಎಲಿಮಿನೇಟ್​ ಆಗಿದ್ದಾರೆ. 85ನೇ ದಿನಕ್ಕೆ ಅವರ ಜರ್ನಿ ಅಂತ್ಯವಾಗಿದೆ.

Anupama Gowda: ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಅನುಪಮಾ ಗೌಡ; ನಟಿ-ನಿರೂಪಕಿಯ ದೊಡ್ಮನೆ ಆಟ ಅಂತ್ಯ
ಅನುಪಮಾ ಗೌಡ
TV9 Web
| Updated By: ಮದನ್​ ಕುಮಾರ್​|

Updated on: Dec 18, 2022 | 9:49 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಕೊನೇ ಹಂತವನ್ನು ಸಮೀಪಿಸುತ್ತಿದೆ. ಇನ್ನು ಎರಡೇ ವಾರಗಳಲ್ಲಿ ಫಿನಾಲೆ ನಡೆಯಲಿದೆ. ಕೆಲವೇ ಸ್ಪರ್ಧಿಗಳ ನಡುವೆ ಪೈಪೋಟಿ ಮುಂದುವರಿದಿದೆ. 12ನೇ ವಾರದ ಎಲಿಮಿನೇಷನ್​ ಪ್ರಕ್ರಿಯೆಯಲ್ಲಿ ನಟಿ, ನಿರೂಪಕಿ ಅನುಪಮಾ ಗೌಡ (Anupama Gowda) ಅವರು ಔಟ್​ ಆಗಿದ್ದಾರೆ. ಇಷ್ಟು ದಿನಗಳ ಕಾಲ ಫೈಟ್​ ನೀಡಿದ್ದ ಅವರ ದೊಡ್ಮನೆ ಜರ್ನಿ ಈಗ ಅಂತ್ಯವಾಗಿದೆ. ಅನುಪಮಾ ಗೌಡ ಅವರು ಈ ಹಿಂದೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 5’ರಲ್ಲಿ ಸ್ಪರ್ಧಿಸಿದ್ದರು. ಆ ಅನುಭವದ ಆಧಾರದಲ್ಲಿ 9ನೇ ಸೀಸನ್​ನಲ್ಲೂ (BBK9) ಭಾಗವಹಿಸುವ ಚಾನ್ಸ್​ ಅವರಿಗೆ ಸಿಕ್ಕಿತು. ಆದರೆ ಈ ಬಾರಿಯೂ ಟ್ರೋಫಿ ಗೆಲ್ಲಬೇಕು ಎಂಬ ಅವರ ಕನಸು ಭಗ್ನವಾಗಿದೆ.

ಈ ವಾರ ಮನೆಯಲ್ಲಿ ಇದ್ದದ್ದು 9 ಮಂದಿ ಮಾತ್ರ. ಆರ್ಯವರ್ಧನ್​ ಗುರೂಜಿ, ಅಮೂಲ್ಯಾ ಗೌಡ, ರೂಪೇಶ್​ ರಾಜಣ್ಣ, ದಿವ್ಯಾ ಉರುಡುಗ, ಅರುಣ್​ ಸಾಗರ್​, ರಾಕೇಶ್​ ಅಡಿಗ, ರೂಪೇಶ್​ ಅಡಿಗ, ಅನುಪಮಾ ಗೌಡ, ದೀಪಿಕಾ ದಾಸ್​ ನಡುವೆ ಹಣಾಹಣಿ ನಡೆದಿತ್ತು. ಆರ್ಯವರ್ಧನ್​ ಗುರೂಜಿ ಕಳಪೆ ಪಟ್ಟ ಪಡೆದುಕೊಂಡರೆ, ರಾಕೇಶ್​ ಅಡಿಗ ಅವರು ‘ಉತ್ತಮ’ ಪಟ್ಟ ಗಿಟ್ಟಿಸಿಕೊಂಡರು. ಅಂತಿಮವಾಗಿ ಅನುಪಮಾ ಗೌಡ ಅವರು ಎಲಿಮಿನೇಟ್​ ಆದರು.

ಇದನ್ನೂ ಓದಿ: ಪ್ರಶಾಂತ್ ಸಂಬರ್ಗಿ, ಅನುಪಮಾ ಗೌಡಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಿಚ್ಚನ ಚಪ್ಪಾಳೆ ಪಡೆದ ದೀಪಿಕಾ ದಾಸ್​:

ನಟಿ ದೀಪಿಕಾ ದಾಸ್​ ಅವರಿಗೆ ಈ ವಾರದ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಇದರಿಂದ ಅವರಿಗೆ ಹೆಚ್ಚಿನ ಬಲ ಸಿಕ್ಕಂತೆ ಆಗಿದೆ. ‘ನನಗೆ ಇದು ವಿಶೇಷ ಕ್ಷಣ. ಸತತ ಎರಡನೇ ಬಾರಿಗೆ ನನಗೆ ಈ ಚಪ್ಪಾಳೆ ಸಿಕ್ಕಿದೆ’ ಎಂದು ದೀಪಿಕಾ ದಾಸ್​ ಖುಷಿಪಟ್ಟಿದ್ದಾರೆ. ಅದೇ ರೀತಿ, ಅರುಣ್​ ಸಾಗರ್​ ಅವರ ಆಟಕ್ಕೂ ಕಿಚ್ಚ ಭೇಷ್​ ಎಂದಿದ್ದಾರೆ.

ಇದನ್ನೂ ಓದಿ: Anupama Gowda: ಅಭಿಮಾನಿಗಳಿಗೆ ಇಷ್ಟವಾಗ್ತಿದೆ ಅನುಪಮಾ ಗೌಡ ಸಮತೋಲನದ ಆಟ

ಈ ಸೀಸನ್​ನಲ್ಲಿ ಪ್ರವೀಣರು ಮತ್ತು ನವೀನರು ಎಂಬ ಕಾನ್ಸೆಪ್ಟ್​ ಪರಿಚಯಿಸಲಾಯಿತು. ಈ ಹಿಂದಿನ ಸೀಸನ್​ನಲ್ಲಿ ಭಾಗವಹಿಸಿದ್ದ ಅನುಭವಿ ಸ್ಪರ್ಧಿಗಳು ಪ್ರವೀಣರು. ಹೊಸ ಸ್ಪರ್ಧಿಗಳು ನವೀನರು. ನಟಿ ಅನುಪಮಾ ಗೌಡ ಅವರು ಪ್ರವೀಣರ ತಂಡದಲ್ಲಿ ದೊಡ್ಮನೆ ಸೇರಿಕೊಂಡಿದ್ದರು. ಆದರೆ ಅವರು ಅಂತಿಮ ಹಂತ ಸಮೀಪಿಸುವುದಕ್ಕೂ ಮುನ್ನವೇ ಔಟ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್