Nitesh Pandey Death News: ಕಿರುತೆರೆ ನಟ ನಿತೇಶ್ ಪಾಂಡೆ ನಿಧನ; ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾವಿದ

ಇತ್ತೀಚೆಗೆ ಹಿಂದಿ ಕಿರುತೆರೆಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟರು. ಬಳಿಕ ವೈಭವಿ ಉಪಾಧ್ಯಾಯ ಕೊನೆಯುಸಿರು ಎಳೆದರು. ಈಗ ನಿತೇಶ್ ಮೃತಪಟ್ಟಿದ್ದಾರೆ.

Nitesh Pandey Death News: ಕಿರುತೆರೆ ನಟ ನಿತೇಶ್ ಪಾಂಡೆ ನಿಧನ; ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾವಿದ
ನಿತೇಶ್
Follow us
|

Updated on:May 24, 2023 | 10:31 AM

ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ (Nitesh Pandey) ಅವರು ಇಂದು (ಮೇ 24) ನಿಧನ ಹೊಂದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ನಿತೇಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಕೇವಲ ಕಿರುತೆರೆ ಮಾತ್ರವಲ್ಲದೆ ಹಿರಿತೆರೆಯ ಮೂಲಕವೂ ನಿತೇಶ್ ಪಾಂಡೆ ಫೇಮಸ್ ಆಗಿದ್ದರು. ಅಭಿಮಾನಿಗಳಿಗೆ ಈ ಸಾವಿನ ಸುದ್ದಿ ಸಾಕಷ್ಟು ದುಃಖ ತಂದಿದೆ.

1995ರಿಂದ ನಿತೇಶ್ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಧಾರಾವಾಹಿಗಳ ಜೊತೆ ಸಿನಿಮಾ ಕೂಡ ಮಾಡಿದ್ದಾರೆ. ‘ಅನುಪಮಾ’ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು. ‘ಪ್ಯಾರ್​ ಕ ದರ್ದ್​ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾ’ ಧಾರಾವಾಹಿಯಲ್ಲಿ ನಟಿಸಿ ಫೇಮಸ್ ಆದರು. ಈಗ ನಿತೇಶ್ ಏಕಾಏಕಿ ಮೃತಪಟ್ಟಿದ್ದು ಅನೇಕರಿಗೆ ಆಘಾತ ತಂದಿದೆ.

ನಿತೇಶ್ ಅವರ ಭಾವ, ನಿರ್ಮಾಪಕ ಸಿದ್ದಾರ್ಥ್ ನಗರ್ ಈ ಬಗ್ಗೆ ಮಾತನಾಡಿದ್ದಾರೆ. ‘ನಿತೇಶ್​ ಅವರು ಮೃತಪಟ್ಟಿದ್ದಾರೆ. ಅವರ ಪತ್ನಿ ಅರ್ಪಿತಾ ಪಾಂಡೆ ಶಾಕ್​ನಲ್ಲಿದ್ದಾರೆ. ಅವರ ತಂದೆ ಮೃತದೇಹ ತರಲು ತೆರಳಿದ್ದಾರೆ. ನನ್ನ ಸಹೋದರಿ ಅರ್ಪಿತಾ ಜೊತೆ ನನಗೆ ಮಾತನಾಡಲೂ ಸಾಧ್ಯವಾಗುತ್ತಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು

ಇತ್ತೀಚೆಗೆ ಹಿಂದಿ ಕಿರುತೆರೆಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟರು. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದಾದ ಬೆನ್ನಲ್ಲೇ ಮಂಗಳವಾರ ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಅವರು ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದರು. ಅವರ ಸಾವು ಅನೇಕರಿಗೆ ಆಘಾತ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Wed, 24 May 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ