AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೊರೊನಾ ಭೀತಿ; ಖ್ಯಾತ ಹಿರಿಯ ಕಿರುತೆರೆ ನಟಿ ಕೊವಿಡ್​ಗೆ ಬಲಿ

‘ಅನುಪಮಾ’ ಧಾರಾವಾಹಿಯಲ್ಲಿ ಅನುಪಮಾ ತಾಯಿ ಆಗಿ ಮಾಧವಿ ಗೋಗಟೆ ಕಾಣಿಸಿಕೊಂಡಿದ್ದರು. ಅದ್ಭುತ ನಟನೆ ಮೂಲಕ ಮನೆ ಮಾತಾಗಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಕೊವಿಡ್ ಕಾಣಿಸಿಕೊಂಡಿತ್ತು.

ಮತ್ತೆ ಕೊರೊನಾ ಭೀತಿ; ಖ್ಯಾತ ಹಿರಿಯ ಕಿರುತೆರೆ ನಟಿ ಕೊವಿಡ್​ಗೆ ಬಲಿ
ಮಾಧವಿ
TV9 Web
| Edited By: |

Updated on: Nov 22, 2021 | 5:11 PM

Share

ಈ ವರ್ಷದ ಆರಂಭದಲ್ಲಿ ಕಾಣಿಸಿಕೊಂಡಿದ್ದ ಕೊವಿಡ್​ ಎರಡನೇ ಅಲೆಯ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಕೊರೊನಾಗೆ ಬಲಿಯಾಗಿದ್ದರು. ಈಗ ಕೊವಿಡ್​ ಎರಡನೇ ಅಲೆ ತಣ್ಣಗಾಗಿದೆ. ಆದಾಗ್ಯೂ ಅಲ್ಲೊಂದು ಇಲ್ಲೊಂದು ಸಾವು ಕೊರೊನಾದಿಂದ ಸಂಭವಿಸುತ್ತಿದೆ. ಈಗ ಕಿರುತೆರೆಯ ಹಿರಿಯ ನಟಿ ಕೊವಿಡ್​ಗೆ ಬಲಿಯಾಗಿದ್ದಾರೆ. ಮಾರಕ ವೈರಸ್​ನಿಂದ ಅವರು ಮೃತಪಟ್ಟಿರುವ ವಿಚಾರ ಸಾಕಷ್ಟು ಮಂದಿಗೆ ನೋವು ತರಿಸಿದೆ. ಈ ಬಗ್ಗೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತಿದೆ.

‘ಅನುಪಮಾ’ ಧಾರಾವಾಹಿಯಲ್ಲಿ ಅನುಪಮಾ ತಾಯಿ ಆಗಿ ಮಾಧವಿ ಗೋಗಟೆ ಕಾಣಿಸಿಕೊಂಡಿದ್ದರು. ಅದ್ಭುತ ನಟನೆ ಮೂಲಕ ಮನೆ ಮಾತಾಗಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಮಾಧವಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಕೊವಿಡ್​ನಿಂದ ಚೇತರಿಸಿಕೊಳ್ಳುತ್ತಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಅವರ ಪರಿಸ್ಥಿತಿ ತುಂಬಾನೇ ಬಿಗಡಾಯಿಸಿತ್ತು. ಕೊನೆಗೂ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ.

‘ಮಾಧವಿ ನೀವು ನನ್ನ ಆತ್ಮೀಯ ಸ್ನೇಹಿತೆ. ನೀವು ನಮ್ಮನ್ನು ಬಿಟ್ಟು ಹೋಗಿದ್ದೀರಿ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ನಿಮ್ಮದು ಇನ್ನೂ ಸಣ್ಣ ವಯಸ್ಸಾಗಿತ್ತು. ನೀವು ನನ್ನ ಮೆಸೇಜ್‌ಗೆ ಉತ್ತರಿಸದಿದ್ದಾಗ ನಾನು ನನ್ನ ಮೊಬೈಲ್​ ತೆಗೆದುಕೊಂಡು ನಿಮಗೆ ಕರೆ ಮಾಡಬೇಕಿತ್ತು. ನಾನೀಗ ಪಶ್ಚಾತ್ತಾಪ ಪಡಲಷ್ಟೇ ಸಾಧ್ಯ’ ಎಂದು ನೀಲು ಕೊಹ್ಲಿ ಬರೆದುಕೊಂಡಿದ್ದಾರೆ. ಇದಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ.

View this post on Instagram

A post shared by Nilu Kohli (@nilukohli)

ಮಾಧವಿ ಸಿನಿಮಾ ಹಾಗೂ ಧಾರಾವಾಹಿ ಮೂಲಕ ಗುರುತಿಸಿಕೊಂಡಿದ್ದರು. ‘ತುಜಾ ಮಜಾ ಕುನಿಕಡೆ’ ಧಾರಾವಾಹಿ ಮೂಲಕ ಅವರು ಮರಾಠಿ ಕಿರುತೆರೆಗೂ ಕಾಲಿಟ್ಟಿದ್ದರು. ‘ಕೋಯಿ ಅಪ್ನಾ ಸಾ’, ‘ಐಸಾ ಕಭಿ ಸೋಚ್​ ನಾ ಥಾ’ ಮೊದಲಾದ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದರು.

ಇದನ್ನೂ ಓದಿ: Payal Rajput: ಫೋಟೋಶೂಟ್​ ವೇಳೆ ಮಿತಿ ಮೀರಿ ವರ್ತಿಸಿದ ಜೋಡಿ; ಕನ್ನಡಕ್ಕೆ ಕಾಲಿಡಲಿರುವ ನಟಿಯ ಹಾಟ್​​ ಫೋಟೋ ವೈರಲ್

ವಿಚಿತ್ರ ಹೆಸರಲ್ಲಿ ಅವಾರ್ಡ್​ ಕೊಡೋಕೆ ಮುಂದಾದ ಮಂಜು ಪಾವಗಡ; ಬಿಗ್​ ಬಾಸ್​ ವಿನ್ನರ್​ಗೆ ಏನಾಯ್ತು?

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ