AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷಾಗೆ ಧರ್ಮ ಕಡೆಯಿಂದ ಸಿಹಿಮುತ್ತು; ಕೊನೆ ಆಯಿತು ಮುನಿಸು

ಅನುಷಾ ಮತ್ತು ಧರ್ಮರ ನಡುವೆ ಮುನಿಸು ಉಂಟಾಯಿತು. ಧರ್ಮ ಅನುಷಾರ ತಂಡವನ್ನು ನಾಮಿನೇಟ್ ಮಾಡಿದ್ದರಿಂದ ಅವರ ನಡುವೆ ಜಗಳವಾಯಿತು. ಒಂದು ರೊಮ್ಯಾಂಟಿಕ್ ಕಿಸ್ ಮೂಲಕ ಅವರ ಮುನಿಸು ಕೊನೆಗೊಂಡಿತು.

ಅನುಷಾಗೆ ಧರ್ಮ ಕಡೆಯಿಂದ ಸಿಹಿಮುತ್ತು; ಕೊನೆ ಆಯಿತು ಮುನಿಸು
ಅನುಷಾ-ಧರ್ಮ
ರಾಜೇಶ್ ದುಗ್ಗುಮನೆ
|

Updated on:Nov 16, 2024 | 7:50 AM

Share

ಅನುಷಾ ರೈ ಹಾಗೂ ಧರ್ಮ ಹಲವು ವರ್ಷಗಳಿಂದ ಗೆಳೆಯರು. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಇವರು ಒಟ್ಟಾಗಿ ಸಿನಿಮಾ ಕೂಡ ಮಾಡಿದ್ದಾರೆ. ಈ ಕಾರಣಕ್ಕೆ ಧರ್ಮ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಧರ್ಮ ಕೂಡ ಅನುಷಾ ಮೇಲೆ ವಿಶೇಷ ಕಾಳಜಿ ತೋರಿಸುತ್ತಾರೆ. ಆದರೆ, ಈ ವಾರ ಎಲ್ಲವೂ ಬದಲಾಗಿತ್ತು. ಧರ್ಮ ಹಾಗೂ ಅನುಷಾ ಮಧ್ಯೆ ಮುನಿಸು ಮೂಡಿತ್ತು. ಈಗ ಸಿಹಿಮುತ್ತಿನಿಂದ ಎಲ್ಲವೂ ತಿಳಿಯಾಗಿದೆ. ಮುನಿಸು ಮರೆಯಾಗಿದೆ.

ಅನುಷಾ ಹಾಗೂ ಧರ್ಮ ಈ ಬಾರಿ ಒಟ್ಟಿಗೆ ಇರೋಕೆ ಸಾಧ್ಯವಾಗಿರಲಿಲ್ಲ. ಅದಕ್ಕೆ ಕಾರಣವಾಗಿದ್ದು ಜೋಡಿ ಟಾಸ್ಕ್. ಅನುಷಾ ಅವರು ಸುರೇಶ್​ಗೆ ಜೊತೆಯಾದರೆ ಧರ್ಮ ಅವರು ಐಶ್ವರ್ಯಾಗೆ ಜೊತೆಯಾದರು. ಇನ್ನು ನೇರ ನಾಮಿನೇಷನ್ ಮಾಡುವಾಗ ಧರ್ಮ ಅವರು ಅನುಷಾ ತಂಡವನ್ನು ನಾಮಿನೇಟ್ ಮಾಡಿದರು. ಇದು ಅನುಷಾ ಕೋಪಕ್ಕೆ ಕಾರಣ ಆಯಿತು. ಅವರು ಇದನ್ನು ಸಹಿಸಿಕೊಳ್ಳಲೇ ಇಲ್ಲ. ಈ ಕಾರಣಕ್ಕೆ ಇಬ್ಬರ ಮಧ್ಯೆ ಕಿತ್ತಾಟ ನಡೆಯಿತು.

ಕೆಲವು ದಿನಗಳ ಕಾಲ ಅನುಷಾ ಹಾಗೂ ಧರ್ಮ ಸರಿಯಾಗಿ ಮಾತನಾಡಿಕೊಳ್ಳಲೇ ಇಲ್ಲ. ಇತ್ತೀಚೆಗೆ ಇಬ್ಬರೂ ಕುಳಿತು ಮಾತನಾಡಿದ್ದರು. ‘ನನಗೆ ಎಲ್ಲರೂ ನಾಲಾಯಕ್ ಎಂದರು. ಹೀಗಾಗಿ, ನಾನು ನನ್ನ ಕೋಪ ನಿಯಂತ್ರಿಸಿಕೊಳ್ಳಲು ಸಾಧ್ಯವಾಗಿಲ್ಲ’ ಎಂದರು ಧರ್ಮ. ಇದನ್ನು ಅನುಷಾ ಅರ್ಥ ಮಾಡಿಕೊಂಡರು. ಈ ಮಾತುಕತೆಯಿಂದ ಪರಿಸ್ಥಿತಿ ಸ್ವಲ್ಪ ತಿಳಿ ಆಯಿತು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಚೈತ್ರಾ; ಪರಿಸ್ಥಿತಿ ಗಂಭೀರ

ಈಗ ಜೋಡಿ ಟಾಸ್ಕ್ ನಡೆಯುವಾಗಲೇ ಕಿಚನ್​ನಲ್ಲಿ ಅನುಷಾ, ಧರ್ಮ, ಸುರೇಶ್ ಹಾಗೂ ಐಶ್ವರ್ಯಾ ನಿಂತಿದ್ದರು. ಈ ವೇಳೆ ಅನುಷಾ ಹಾಗೂ ಧರ್ಮ ರೊಮ್ಯಾಂಟಿಕ್ ಆಗಿ ನಡೆದುಕೊಳ್ಳಬೇಕು ಎಂದು ಕೋರಲಾಯಿತು. ಅದೇ ರೀತಿ ಧರ್ಮ ಹಾಗೂ ಅನುಷಾ ಕ್ಲೋಸ್​ಅಪ್​ನಲ್ಲಿ ಬಂದರು. ಆಗ ಧರ್ಮ ಅವರು ಅನುಷಾರನ್ನು ಎಳೆದುಕೊಂಡು ತಲೆಗೆ ಮುತ್ತಿಟ್ಟರು. ಈ ಮೂಲಕ ಮುನಿಸು ಕೊನೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:49 am, Sat, 16 November 24

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ