AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಿಂದ ಅನುಷಾ ರೈ ಎಲಿಮಿನೇಟ್; ಬಚಾವ್ ಆದ ಧರ್ಮ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಕಾಲಿಡುವಾಗ ಧರ್ಮ ಕೀರ್ತಿರಾಜ್​ ಮತ್ತು ಅನುಷಾ ರೈ ಅವರು ಜೋಡಿಯಾಗಿ ಬಂದಿದ್ದರು. 50ನೇ ದಿನದಲ್ಲಿ ಅವರು ಎಲಿಮಿನೇಷನ್​ನ ಕೊನೆಯ ಹಂತಕ್ಕೂ ಜೋಡಿಯಾಗಿಯೇ ಬಂದರು. ಅಂತಿಮವಾಗಿ ಅನುಷಾ ರೈ ಅವರ ಆಟ ಅಂತ್ಯವಾಗಿದೆ. ಈ ವಾರ ಅವರು ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಿಂದ ಅನುಷಾ ರೈ ಎಲಿಮಿನೇಟ್; ಬಚಾವ್ ಆದ ಧರ್ಮ
ಅನುಷಾ ರೈ
ಮದನ್​ ಕುಮಾರ್​
|

Updated on: Nov 17, 2024 | 11:02 PM

Share

ನಟಿ ಅನುಷಾ ರೈ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದಿಂದ ಎಲಿಮಿನೇಟ್​ ಆಗಿದ್ದಾರೆ. ಅವರು ಔಟ್ ಆಗಿದ್ದಕ್ಕೆ ಬಿಗ್ ಬಾಸ್ ಮನೆಯ ಇತರ ಸದಸ್ಯರಿಗೆ ಬೇಸರ ಆಗಿದೆ. ಚೈತ್ರಾ ಕುಂದಾಪುರ, ಧರ್ಮ ಕೀರ್ತಿರಾಜ್, ಶಿಶಿರ್ ಮುಂತಾದವರು ಕಣ್ಣೀರು ಹಾಕಿದ್ದಾರೆ. ಚೈತ್ರಾ ಕುಂದಾಪುರ ಅವರಂತೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಎಲಿಮಿನೇಟ್ ಆದ ಬಳಿಕ ಯಾರಿಗೂ ಗುಡ್​ಬೈ ಹೇಳಲು ಅನುಷಾ ರೈ ಅವರಿಗೆ ಅವಕಾಶ ಸಿಗಲಿಲ್ಲ. ಹಾಗಾಗಿ ಎಲ್ಲರಿಗೂ ತುಂಬ ಬೇಸರ ಆಯಿತು. ಅನುಷಾ ಜೊತೆ ಜಾಸ್ತಿ ನಂಟು ಹೊಂದಿದ್ದ ಭವ್ಯಾ ಅವರು ಕಣ್ಣೀರು ಹಾಕಿದ್ದಾರೆ.

ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನ ಧರ್ಮ ಕೀರ್ತಿರಾಜ್​ ಮತ್ತು ಅನುಷಾ ರೈ ಅವರು ಪರಿಚಿತರಾಗಿದ್ದರು. ಒಟ್ಟಿಗೆ ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ಬಿಗ್ ಬಾಸ್ ಶೋಗೆ ಬರುವಾಗ ಅವರು ಜೋಡಿಯಾಗಿ ಬಂದಿದ್ದರು. ಮನೆಯ ಒಳಗೆ ಕೂಡ ಒಟ್ಟಿಗೆ ಇರುತ್ತಿದ್ದರು. ಕಾಕತಾಳೀಯ ಎಂದರೆ ಎಲಿಮಿನೇಷನ್​ ಪ್ರಕ್ರಿಯೆಯಲ್ಲೂ ಅವರು ಜೊತೆಯಲ್ಲಿ ಕೊನೇ ಹಂತ ತಲುಪಿದ್ದರು.

ಧರ್ಮ ಮತ್ತು ಅನುಷಾ ಇಬ್ಬರೂ ಎಲಿಮಿನೇಟ್ ಆಗಬಹುದು ಅಥವಾ ಒಬ್ಬರೇ ಎಲಿಮಿನೇಟ್ ಆಗಬಹುದು ಎಂದು ಸುದೀಪ್ ಹೇಳಿದಾಗ ಅವರಿಬ್ಬರನ್ನು ಇಷ್ಟಪಡುವ ಪ್ರೇಕ್ಷಕರ ಎದೆಯಲ್ಲಿ ಢವ ಢವ ಶುರುವಾಗಿತ್ತು. ಅಂತಿಮವಾಗಿ ಅನುಷಾ ರೈ ಅವರು ಔಟ್ ಆಗಬೇಕಾಯಿತು. ಧರ್ಮ ಕೀರ್ತಿರಾಜ್ ಅವರು ಅಳುತ್ತಾ ವಾಪಸ್ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ.

ಇದನ್ನೂ ಓದಿ: ಅರ್ಧ ಜನ ತಿಕ್ಕಲು, ಇನ್ನರ್ಧ ಜನ ಪುಕ್ಕಲು: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ

ಎಲಿಮಿನೇಟ್ ಆದ ಬಳಿಕ ವೇದಿಕೆಗೆ ಬಂದ ಅನುಷಾ ರೈ ಅವರಿಗೆ ಸುದೀಪ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ನಿಮ್ಮ ಪ್ರಕಾರ ಟಾಪ್ 5 ಯಾರು ಆಗಿರುತ್ತಾರೆ ಎಂದು ಕೇಳಿದ್ದಕ್ಕೆ ತ್ರಿವಿಕ್ರಮ್, ಧರ್ಮ ಕೀರ್ತಿರಾಜ್, ಭವ್ಯಾ ಗೌಡ, ಚೈತ್ರಾ ಕುಂದಾಪುರ ಹಾಗೂ ಉಗ್ರಂ ಮಂಜು ಅವರ ಹೆಸರುಗಳನ್ನು ಅನುಷಾ ಹೇಳಿದ್ದಾರೆ. ‘ಇಷ್ಟು ಬೇಗ ನಾನು ಹೊರಗೆ ಬಂದಿದ್ದಕ್ಕೆ ಬೇಜಾರು ಆಗಿದೆ. ನಾನು ಎಮೋಷನಲ್. ಅದರಿಂದ ನಾನು ಆಟದಲ್ಲಿ ಹಿಂದೇಟು ಹಾಕಿದೆ. ಬೇರೆಯವರ ಮನಸ್ಸಿಗೆ ನೋವಾಯಿತು ಅಂತ ನಾನು ಸುಮ್ಮನಾಗಿದ್ದು ನನಗೆ ಹಿನ್ನಡೆ ಆಯಿತು’ ಎಂದು ಅನುಷಾ ರೈ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ