AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಿಂದ ಅನುಷಾ ರೈ ಎಲಿಮಿನೇಟ್; ಬಚಾವ್ ಆದ ಧರ್ಮ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಕಾಲಿಡುವಾಗ ಧರ್ಮ ಕೀರ್ತಿರಾಜ್​ ಮತ್ತು ಅನುಷಾ ರೈ ಅವರು ಜೋಡಿಯಾಗಿ ಬಂದಿದ್ದರು. 50ನೇ ದಿನದಲ್ಲಿ ಅವರು ಎಲಿಮಿನೇಷನ್​ನ ಕೊನೆಯ ಹಂತಕ್ಕೂ ಜೋಡಿಯಾಗಿಯೇ ಬಂದರು. ಅಂತಿಮವಾಗಿ ಅನುಷಾ ರೈ ಅವರ ಆಟ ಅಂತ್ಯವಾಗಿದೆ. ಈ ವಾರ ಅವರು ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಿಂದ ಅನುಷಾ ರೈ ಎಲಿಮಿನೇಟ್; ಬಚಾವ್ ಆದ ಧರ್ಮ
ಅನುಷಾ ರೈ
Follow us
ಮದನ್​ ಕುಮಾರ್​
|

Updated on: Nov 17, 2024 | 11:02 PM

ನಟಿ ಅನುಷಾ ರೈ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದಿಂದ ಎಲಿಮಿನೇಟ್​ ಆಗಿದ್ದಾರೆ. ಅವರು ಔಟ್ ಆಗಿದ್ದಕ್ಕೆ ಬಿಗ್ ಬಾಸ್ ಮನೆಯ ಇತರ ಸದಸ್ಯರಿಗೆ ಬೇಸರ ಆಗಿದೆ. ಚೈತ್ರಾ ಕುಂದಾಪುರ, ಧರ್ಮ ಕೀರ್ತಿರಾಜ್, ಶಿಶಿರ್ ಮುಂತಾದವರು ಕಣ್ಣೀರು ಹಾಕಿದ್ದಾರೆ. ಚೈತ್ರಾ ಕುಂದಾಪುರ ಅವರಂತೂ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಎಲಿಮಿನೇಟ್ ಆದ ಬಳಿಕ ಯಾರಿಗೂ ಗುಡ್​ಬೈ ಹೇಳಲು ಅನುಷಾ ರೈ ಅವರಿಗೆ ಅವಕಾಶ ಸಿಗಲಿಲ್ಲ. ಹಾಗಾಗಿ ಎಲ್ಲರಿಗೂ ತುಂಬ ಬೇಸರ ಆಯಿತು. ಅನುಷಾ ಜೊತೆ ಜಾಸ್ತಿ ನಂಟು ಹೊಂದಿದ್ದ ಭವ್ಯಾ ಅವರು ಕಣ್ಣೀರು ಹಾಕಿದ್ದಾರೆ.

ಬಿಗ್ ಬಾಸ್ ಶೋಗೆ ಬರುವುದಕ್ಕೂ ಮುನ್ನ ಧರ್ಮ ಕೀರ್ತಿರಾಜ್​ ಮತ್ತು ಅನುಷಾ ರೈ ಅವರು ಪರಿಚಿತರಾಗಿದ್ದರು. ಒಟ್ಟಿಗೆ ಸಿನಿಮಾಗಳಲ್ಲಿ ಕೆಲಸ ಮಾಡಿದ್ದರು. ಬಿಗ್ ಬಾಸ್ ಶೋಗೆ ಬರುವಾಗ ಅವರು ಜೋಡಿಯಾಗಿ ಬಂದಿದ್ದರು. ಮನೆಯ ಒಳಗೆ ಕೂಡ ಒಟ್ಟಿಗೆ ಇರುತ್ತಿದ್ದರು. ಕಾಕತಾಳೀಯ ಎಂದರೆ ಎಲಿಮಿನೇಷನ್​ ಪ್ರಕ್ರಿಯೆಯಲ್ಲೂ ಅವರು ಜೊತೆಯಲ್ಲಿ ಕೊನೇ ಹಂತ ತಲುಪಿದ್ದರು.

ಧರ್ಮ ಮತ್ತು ಅನುಷಾ ಇಬ್ಬರೂ ಎಲಿಮಿನೇಟ್ ಆಗಬಹುದು ಅಥವಾ ಒಬ್ಬರೇ ಎಲಿಮಿನೇಟ್ ಆಗಬಹುದು ಎಂದು ಸುದೀಪ್ ಹೇಳಿದಾಗ ಅವರಿಬ್ಬರನ್ನು ಇಷ್ಟಪಡುವ ಪ್ರೇಕ್ಷಕರ ಎದೆಯಲ್ಲಿ ಢವ ಢವ ಶುರುವಾಗಿತ್ತು. ಅಂತಿಮವಾಗಿ ಅನುಷಾ ರೈ ಅವರು ಔಟ್ ಆಗಬೇಕಾಯಿತು. ಧರ್ಮ ಕೀರ್ತಿರಾಜ್ ಅವರು ಅಳುತ್ತಾ ವಾಪಸ್ ಬಿಗ್ ಬಾಸ್ ಮನೆಯೊಳಗೆ ಹೋಗಿದ್ದಾರೆ.

ಇದನ್ನೂ ಓದಿ: ಅರ್ಧ ಜನ ತಿಕ್ಕಲು, ಇನ್ನರ್ಧ ಜನ ಪುಕ್ಕಲು: ಕಾಂಟ್ರವರ್ಸಿ ಮೂಲಕವೇ ವೈಲ್ಡ್ ಕಾರ್ಡ್​ ಸ್ಪರ್ಧಿ ಎಂಟ್ರಿ

ಎಲಿಮಿನೇಟ್ ಆದ ಬಳಿಕ ವೇದಿಕೆಗೆ ಬಂದ ಅನುಷಾ ರೈ ಅವರಿಗೆ ಸುದೀಪ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ನಿಮ್ಮ ಪ್ರಕಾರ ಟಾಪ್ 5 ಯಾರು ಆಗಿರುತ್ತಾರೆ ಎಂದು ಕೇಳಿದ್ದಕ್ಕೆ ತ್ರಿವಿಕ್ರಮ್, ಧರ್ಮ ಕೀರ್ತಿರಾಜ್, ಭವ್ಯಾ ಗೌಡ, ಚೈತ್ರಾ ಕುಂದಾಪುರ ಹಾಗೂ ಉಗ್ರಂ ಮಂಜು ಅವರ ಹೆಸರುಗಳನ್ನು ಅನುಷಾ ಹೇಳಿದ್ದಾರೆ. ‘ಇಷ್ಟು ಬೇಗ ನಾನು ಹೊರಗೆ ಬಂದಿದ್ದಕ್ಕೆ ಬೇಜಾರು ಆಗಿದೆ. ನಾನು ಎಮೋಷನಲ್. ಅದರಿಂದ ನಾನು ಆಟದಲ್ಲಿ ಹಿಂದೇಟು ಹಾಕಿದೆ. ಬೇರೆಯವರ ಮನಸ್ಸಿಗೆ ನೋವಾಯಿತು ಅಂತ ನಾನು ಸುಮ್ಮನಾಗಿದ್ದು ನನಗೆ ಹಿನ್ನಡೆ ಆಯಿತು’ ಎಂದು ಅನುಷಾ ರೈ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ