AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯತ್ವ ಮರೆತು ಅನುಷಾ ರೈಗೆ ಹೊಡೆದ ಬಿಗ್ ಬಾಸ್ ಮನೆಯ ಸದಸ್ಯರು

ಬಿಗ್ ಬಾಸ್​ ಕಾರ್ಯಕ್ರಮವನ್ನು ಕುಟುಂಬ ಸಮೇತ ನೋಡುವ ಕಾರ್ಯಕ್ರಮ ಎಂದು ಕೆಲವರು ಹೇಳುತ್ತಾರೆ. ಆದರೆ ಬಿಗ್ ಬಾಸ್​ ಮನೆಯ ಒಳಗೆ ಸ್ಪರ್ಧಿಗಳು ನಡೆದುಕೊಳ್ಳುವ ರೀತಿ ನೋಡಿದರೆ ಈ ಕಾರ್ಯಕ್ರಮವನ್ನು ಶಾಂತಿ, ಸಮಾಧಾನದಿಂದ ಫ್ಯಾಮಿಲಿ ಆಡಿಯನ್ಸ್​ ನೋಡಲು ಸಾಧ್ಯವಿಲ್ಲ ಎನಿಸುತ್ತದೆ. ಕೆಲವು ಸ್ಪರ್ಧಿಗಳಿಂದ ಅಂತಹ ವರ್ತನೆ ಕಾಣಿಸುತ್ತಿದೆ.

ಮನುಷ್ಯತ್ವ ಮರೆತು ಅನುಷಾ ರೈಗೆ ಹೊಡೆದ ಬಿಗ್ ಬಾಸ್ ಮನೆಯ ಸದಸ್ಯರು
ಬಿಗ್ ಬಾಸ್
ಮದನ್​ ಕುಮಾರ್​
|

Updated on: Oct 22, 2024 | 10:26 PM

Share

ಟಾಸ್ಕ್​ ಆಡುವಾಗ ಬಿಗ್ ಬಾಸ್​ ಸ್ಪರ್ಧಿಗಳು ಮನುಷ್ಯತ್ವ ಮರೆಯುತ್ತಾರೆ. ಟಾಸ್ಕ್ ಗೆಲ್ಲುವುದೇ ಮುಖ್ಯ ಉದ್ದೇಶ ಆದ್ದರಿಂದ ಅದಕ್ಕಾಗಿ ಮಾನವೀಯತೆಯನ್ನು ಪಕ್ಕಕ್ಕೆ ಇಡುತ್ತಾರೆ. ಮಂಗಳವಾರದ (ಅ.22) ಸಂಚಿಕೆಯಲ್ಲಿ ಅದಕ್ಕೆ ಲೇಟೆಸ್ಟ್​ ಉದಾಹರಣೆ ಸಿಕ್ಕಿದೆ. ಅನುಷಾ ರೈ ಅವರು ಟಾಸ್ಕ್​ ಮಾಡುವಾಗ ಅವರ ಗಮನವನ್ನು ಕಡಿಸಲು ಹಲವು ಬಗೆಯ ಪ್ರಯತ್ನ ಮಾಡಲಾಗಿದೆ. ಮೈಗೆ, ಮುಖಕ್ಕೆ ನೀರು ಎರೆಚಲಾಗಿದೆ. ಅಷ್ಟೇ ಅಲ್ಲದೇ ದಿಂಬಿನಿಂದ ಹೊಡೆದು ಬೀಳಿಸಲಾಗಿದೆ. ಬೆನ್ನು ಮೂಳೆಗೆ ಪೆಟ್ಟಾಗುವ ರೀತಿಯಲ್ಲಿ ಅನುಷಾ ಅವರನ್ನು ಹೊಡೆದು ಬೀಳಿಸಿದ್ದಕ್ಕೆ ಭವ್ಯಾ ಗೌಡ ಖಂಡನೆ ವ್ಯಕ್ತಪಡಿಸಿದ್ದಾರೆ.

ಒಂದು ಸುತ್ತಿನ ಆಟ ಮುಗಿಯುವ ವೇಳೆಗಾಗಲೇ ಅನುಷಾ ರೈ ಅವರಿಗೆ ಪೆಟ್ಟಾಗಿತ್ತು. ಹಾಗಿದ್ದರೂ ಕೂಡ ಅವರು ಟಾಸ್ಕ್​ ಅನ್ನು ಬಿಟ್ಟುಕೊಡಬಾರದು ಎಂಬ ಕಾರಣದಿಂದ ಆಟ ಮುಂದುವರಿಸಿದರು. ಈಗಾಗಲೇ ಅವರಿಗೆ ನೋವಾಗಿದೆ ಎಂಬುದು ಗೊತ್ತಿದ್ದರೂ ಕೂಡ ಗೋಲ್ಡ್ ಸುರೇಶ್, ಶಿಶಿರ್, ತ್ರಿವಿಕ್ರಮ್ ಅವರು ಜೋರಾಗಿ ಹೊಡೆದಿದ್ದಾರೆ. ಅನುಷಾ ರೈ ಕೆಳಗೆ ಬಿದ್ದಾಗ ಮೋಕ್ಷಿತಾ ಪೈ, ಗೌತಮಿ ಜಾಧವ್ ಅವರು ಕಣ್ಣೀರು ಹಾಕಿದ್ದಾರೆ.

ಈ ಹೊಡೆದಾಟ ಆಗಿದ್ದರ ಬಗ್ಗೆ ಟಾಸ್ಕ್​ ಮುಗಿದ ಬಳಿಕ ಭವ್ಯಾ ಗೌಡ ಅವರು ಚರ್ಚೆ ಮಾಡಿದ್ದಾರೆ. ಹುಡುಗಿಯರನ್ನು ಟಾರ್ಗೆಟ್​ ಮಾಡಿ ಹೊಡೆದಿದ್ದು ಯಾಕೆ ಎಂದು ಅವರು ಹೇಳಿದ್ದಾರೆ. ಅವರ ಮಾತನ್ನು ತ್ರಿವಿಕ್ರಮ್, ಉಗ್ರಂ ಮಂಜು, ಶಿಶಿರ್ ಮುಂತಾದವರು ವಿರೋಧಿಸಿದ್ದಾರೆ. ಕ್ಯಾಪ್ಟೆನ್ಸಿ ಟಾಸ್ಕ್​ ಸಲುವಾಗಿ ಇಷ್ಟೆಲ್ಲ ಹೊಡೆದಾಟ ನಡೆಯುತ್ತಿದೆ. ಅನುಷಾ ರೈ ಅವರು ಟಾಸ್ಕ್​ ಬಳಿಕ ಜೋರಾಗಿ ಅತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನಡೆದಿದ್ದನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಜಗದೀಶ್

‘ಒಬ್ಬ ವ್ಯಕ್ತಿಗೆ ಆ ರೀತಿ ಹೊಡೆದಾಗ ತುಂಬ ನೋವಾಗುತ್ತದೆ. ಅದರ ಅರಿವು ಇದ್ದರೂ ಕೂಡ ಹೊಡೆದಿದ್ದಾರೆ’ ಎಂದು ಮೋಕ್ಷಿತಾ ಪೈ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಪೆಟ್ಟಾಗುತ್ತದೆ ಎಂಬುದು ಗೊತ್ತಿದ್ದೇ ತಾವು ಹೊಡೆದಿದ್ದು ಎಂದು ತ್ರಿವಿಕ್ರಮ್ ಹೇಳಿದ್ದಾರೆ. ಈ ಮಾತಿನಿಂದ ಮೋಕ್ಷಿತಾ ಹಾಗೂ ಗೌತಮಿ ಅವರಿಗೆ ನೋವಾಗಿದೆ. 10ನೇ ಸೀಸನ್​ನಲ್ಲಿ ಇದೇ ರೀತಿ ಘಟನೆಗಳು ನಡೆದಾಗ ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್ ಅವರ ಕಣ್ಣಿಗೆ ಸಮಸ್ಯೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್