ಮನುಷ್ಯತ್ವ ಮರೆತು ಅನುಷಾ ರೈಗೆ ಹೊಡೆದ ಬಿಗ್ ಬಾಸ್ ಮನೆಯ ಸದಸ್ಯರು

ಬಿಗ್ ಬಾಸ್​ ಕಾರ್ಯಕ್ರಮವನ್ನು ಕುಟುಂಬ ಸಮೇತ ನೋಡುವ ಕಾರ್ಯಕ್ರಮ ಎಂದು ಕೆಲವರು ಹೇಳುತ್ತಾರೆ. ಆದರೆ ಬಿಗ್ ಬಾಸ್​ ಮನೆಯ ಒಳಗೆ ಸ್ಪರ್ಧಿಗಳು ನಡೆದುಕೊಳ್ಳುವ ರೀತಿ ನೋಡಿದರೆ ಈ ಕಾರ್ಯಕ್ರಮವನ್ನು ಶಾಂತಿ, ಸಮಾಧಾನದಿಂದ ಫ್ಯಾಮಿಲಿ ಆಡಿಯನ್ಸ್​ ನೋಡಲು ಸಾಧ್ಯವಿಲ್ಲ ಎನಿಸುತ್ತದೆ. ಕೆಲವು ಸ್ಪರ್ಧಿಗಳಿಂದ ಅಂತಹ ವರ್ತನೆ ಕಾಣಿಸುತ್ತಿದೆ.

ಮನುಷ್ಯತ್ವ ಮರೆತು ಅನುಷಾ ರೈಗೆ ಹೊಡೆದ ಬಿಗ್ ಬಾಸ್ ಮನೆಯ ಸದಸ್ಯರು
ಬಿಗ್ ಬಾಸ್

Updated on: Oct 22, 2024 | 10:26 PM

ಟಾಸ್ಕ್​ ಆಡುವಾಗ ಬಿಗ್ ಬಾಸ್​ ಸ್ಪರ್ಧಿಗಳು ಮನುಷ್ಯತ್ವ ಮರೆಯುತ್ತಾರೆ. ಟಾಸ್ಕ್ ಗೆಲ್ಲುವುದೇ ಮುಖ್ಯ ಉದ್ದೇಶ ಆದ್ದರಿಂದ ಅದಕ್ಕಾಗಿ ಮಾನವೀಯತೆಯನ್ನು ಪಕ್ಕಕ್ಕೆ ಇಡುತ್ತಾರೆ. ಮಂಗಳವಾರದ (ಅ.22) ಸಂಚಿಕೆಯಲ್ಲಿ ಅದಕ್ಕೆ ಲೇಟೆಸ್ಟ್​ ಉದಾಹರಣೆ ಸಿಕ್ಕಿದೆ. ಅನುಷಾ ರೈ ಅವರು ಟಾಸ್ಕ್​ ಮಾಡುವಾಗ ಅವರ ಗಮನವನ್ನು ಕಡಿಸಲು ಹಲವು ಬಗೆಯ ಪ್ರಯತ್ನ ಮಾಡಲಾಗಿದೆ. ಮೈಗೆ, ಮುಖಕ್ಕೆ ನೀರು ಎರೆಚಲಾಗಿದೆ. ಅಷ್ಟೇ ಅಲ್ಲದೇ ದಿಂಬಿನಿಂದ ಹೊಡೆದು ಬೀಳಿಸಲಾಗಿದೆ. ಬೆನ್ನು ಮೂಳೆಗೆ ಪೆಟ್ಟಾಗುವ ರೀತಿಯಲ್ಲಿ ಅನುಷಾ ಅವರನ್ನು ಹೊಡೆದು ಬೀಳಿಸಿದ್ದಕ್ಕೆ ಭವ್ಯಾ ಗೌಡ ಖಂಡನೆ ವ್ಯಕ್ತಪಡಿಸಿದ್ದಾರೆ.

ಒಂದು ಸುತ್ತಿನ ಆಟ ಮುಗಿಯುವ ವೇಳೆಗಾಗಲೇ ಅನುಷಾ ರೈ ಅವರಿಗೆ ಪೆಟ್ಟಾಗಿತ್ತು. ಹಾಗಿದ್ದರೂ ಕೂಡ ಅವರು ಟಾಸ್ಕ್​ ಅನ್ನು ಬಿಟ್ಟುಕೊಡಬಾರದು ಎಂಬ ಕಾರಣದಿಂದ ಆಟ ಮುಂದುವರಿಸಿದರು. ಈಗಾಗಲೇ ಅವರಿಗೆ ನೋವಾಗಿದೆ ಎಂಬುದು ಗೊತ್ತಿದ್ದರೂ ಕೂಡ ಗೋಲ್ಡ್ ಸುರೇಶ್, ಶಿಶಿರ್, ತ್ರಿವಿಕ್ರಮ್ ಅವರು ಜೋರಾಗಿ ಹೊಡೆದಿದ್ದಾರೆ. ಅನುಷಾ ರೈ ಕೆಳಗೆ ಬಿದ್ದಾಗ ಮೋಕ್ಷಿತಾ ಪೈ, ಗೌತಮಿ ಜಾಧವ್ ಅವರು ಕಣ್ಣೀರು ಹಾಕಿದ್ದಾರೆ.

ಈ ಹೊಡೆದಾಟ ಆಗಿದ್ದರ ಬಗ್ಗೆ ಟಾಸ್ಕ್​ ಮುಗಿದ ಬಳಿಕ ಭವ್ಯಾ ಗೌಡ ಅವರು ಚರ್ಚೆ ಮಾಡಿದ್ದಾರೆ. ಹುಡುಗಿಯರನ್ನು ಟಾರ್ಗೆಟ್​ ಮಾಡಿ ಹೊಡೆದಿದ್ದು ಯಾಕೆ ಎಂದು ಅವರು ಹೇಳಿದ್ದಾರೆ. ಅವರ ಮಾತನ್ನು ತ್ರಿವಿಕ್ರಮ್, ಉಗ್ರಂ ಮಂಜು, ಶಿಶಿರ್ ಮುಂತಾದವರು ವಿರೋಧಿಸಿದ್ದಾರೆ. ಕ್ಯಾಪ್ಟೆನ್ಸಿ ಟಾಸ್ಕ್​ ಸಲುವಾಗಿ ಇಷ್ಟೆಲ್ಲ ಹೊಡೆದಾಟ ನಡೆಯುತ್ತಿದೆ. ಅನುಷಾ ರೈ ಅವರು ಟಾಸ್ಕ್​ ಬಳಿಕ ಜೋರಾಗಿ ಅತ್ತಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನಡೆದಿದ್ದನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಜಗದೀಶ್

‘ಒಬ್ಬ ವ್ಯಕ್ತಿಗೆ ಆ ರೀತಿ ಹೊಡೆದಾಗ ತುಂಬ ನೋವಾಗುತ್ತದೆ. ಅದರ ಅರಿವು ಇದ್ದರೂ ಕೂಡ ಹೊಡೆದಿದ್ದಾರೆ’ ಎಂದು ಮೋಕ್ಷಿತಾ ಪೈ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಪೆಟ್ಟಾಗುತ್ತದೆ ಎಂಬುದು ಗೊತ್ತಿದ್ದೇ ತಾವು ಹೊಡೆದಿದ್ದು ಎಂದು ತ್ರಿವಿಕ್ರಮ್ ಹೇಳಿದ್ದಾರೆ. ಈ ಮಾತಿನಿಂದ ಮೋಕ್ಷಿತಾ ಹಾಗೂ ಗೌತಮಿ ಅವರಿಗೆ ನೋವಾಗಿದೆ. 10ನೇ ಸೀಸನ್​ನಲ್ಲಿ ಇದೇ ರೀತಿ ಘಟನೆಗಳು ನಡೆದಾಗ ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್ ಅವರ ಕಣ್ಣಿಗೆ ಸಮಸ್ಯೆ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us