AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಎದುರೇ ಅನುಷಾ ರೈಗೆ ಸಿಕ್ತು ಲಕ್ಷ ಲಕ್ಷ ರೂಪಾಯಿ ಚೆಕ್; ಇಲ್ಲಿದೆ ಬಹುಮಾನ ಮೊತ್ತ

ಅನುಷಾ ರೈ ಅವರು ಬಿಗ್ ಬಾಸ್ ಕನ್ನಡದಿಂದ ಎಲಿಮಿನೇಟ್ ಆಗಿದ್ದಾರೆ. 50 ದಿನಗಳ ಉಳಿದ ಅವರು ಲಕ್ಷ ಲಕ್ಷ ಬಹುಮಾನಗಳನ್ನು ಗಳಿಸಿದ್ದಾರೆ. ಅವರ ಬಿಗ್ ಬಾಸ್ ಸಂಭಾವನೆಯ ಬಗ್ಗೆ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಸುದೀಪ್ ಎದುರೇ ಅನುಷಾ ರೈಗೆ ಸಿಕ್ತು ಲಕ್ಷ ಲಕ್ಷ ರೂಪಾಯಿ ಚೆಕ್; ಇಲ್ಲಿದೆ ಬಹುಮಾನ ಮೊತ್ತ
ಅನುಷಾ ರೈ
ರಾಜೇಶ್ ದುಗ್ಗುಮನೆ
|

Updated on:Nov 18, 2024 | 12:28 PM

Share

ಅನುಷಾ ರೈ ಅವರು ‘ಬಿಗ್ ಬಾಸ್​’ನಿಂದ ಎಲಿಮಿನೇಟ್ ಆಗಿದ್ದಾರೆ. 50 ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಹೊರಕ್ಕೆ ಬಂದಿದ್ದಾರೆ. ಅನುಷಾ ಅವರಿಗೆ ‘ಬಿಗ್ ಬಾಸ್’ ಮನೆಯಲ್ಲಿ ಲಕ್ಷ ಲಕ್ಷ ಸಂಭಾವನೆ ಸಿಕ್ಕಿದೆ. ಅದೇ ರೀತಿ ಅವರಿಗೆ ಸಿಕ್ಕ ಬಹುಮಾನದ ಮೊತ್ತವೂ ತುಂಬಾನೇ ದೊಡ್ಡದಿದೆ. ಅವರು ದೊಡ್ಮನೆಯಿಂದ ಹೊರ ಹೋಗಲು ಕಾರಣವಾದ ಅಂಶ ಹಾಗೂ ಹೊರ ಹೋದ ಅವರಿಗೆ ಸಿಕ್ಕ ಬಹುಮಾನದ ಮೊತ್ತದ ಬಗ್ಗೆ ಇಲ್ಲಿದೆ ವಿವರ.

ಅನುಷಾ ರೈ ಅವರ ಕಿರುತೆರೆ ಹಾಗೂ ಹಿರಿತೆರೆ ಮೂಲಕ ಫೇಮಸ್ ಆದವರು. ಅವರು ದೊಡ್ಮನೆಗೆ ಎಂಟ್ರಿ ಕೊಟ್ಟು ಎಲ್ಲರ ಗಮನ ಸೆಳೆದರು. ಅವರು ಧರ್ಮ ಕೀರ್ತಿರಾಜ್ ಜೊತೆಗಿನ ಗೆಳೆತನದ ಕಾರಣಕ್ಕೆ ಸಾಕಷ್ಟು ಸುದ್ದಿ ಆಗಿದ್ದರು. ಅವರು ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ದೊಡ್ಮನೆಯಿಂದ ಹೊರಕ್ಕೆ ಹೋಗಿದ್ದಾರೆ. ಉಳಿದ ಸ್ಪರ್ಧಿಗಳಿಗ ಹೋಲಿಸಿದರೆ ಅನುಷಾ ವೀಕ್ ಸ್ಪರ್ಧಿ ಎನಿಸಿಕೊಂಡರು. ರ

ಮೂರು ವಾರಗಳ ಹಿಂದೆ ಅನುಷಾ ನಾಮಿನೇಟ್ ಆಗುವ ಹಂತದಲ್ಲಿ ಇದ್ದರು. ಆದರೆ, ಅವರು ಕೊನೆಯ ಹಂತದಲ್ಲಿ ಬಚಾವ್ ಆದರು. ಎರಡು ವಾರಗಳ ಹಿಂದೆ ನಾಮಿನೇಟ್ ಆಗದೆ ಅವರು ಬಚಾವ್ ಆದರು. ಕಳೆದ ವಾರ ಬರೋಬ್ಬರಿ 10 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಹಂತದಲ್ಲಿ ಧರ್ಮ ಹಾಗೂ ಅನುಷಾ ಇದ್ದರು. ಈ ಪೈಕಿ ಅನುಷಾ ಎಲಿಮಿನೇಟ್ ಆಗಿದ್ದಾರೆ.

ಅನುಷಾಗೂ ಸ್ಪಾನ್ಸರ್ಸ್ ಕಡೆಯಿಂದ ಬಹುಮಾನದ ಮೊತ್ತ ಸಿಕ್ಕಿದೆ. ತುಪ್ಪದ ಕಂಪನಿಯೊಂದರಿಂದ 1 ಲಕ್ಷ ರೂಪಾಯಿ ಕ್ಯಾಶ್ ಪ್ರೈಸ್ ಸಿಕ್ಕಿದೆ. ಮೊಬೈಲ್ ಸ್ಟೋರ್ ಒಂದರ ಕಡೆಯಿಂದ 50 ಸಾವಿರ ರೂಪಾಯಿ ಗಿಫ್ಟ್ ವೋಚರ್ ದೊರೆತಿದೆ. ಅದೇ ರೀತಿ ಎಲಿವೇಟರ್ ಸಂಸ್ಥೆ ಕಡೆಯಿಂದ 50 ಸಾವಿ ರೂಪಾಯಿ ದೊರೆತಿದೆ. ಈ ಮೂಲಕ ಅನುಷಾ ಅವರಿಗೆ ಬರೋಬ್ಬರಿ 2 ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: ‘ತೆಲುಗು ಬಿಗ್ ಬಾಸ್ ಕಾದು’; ಮಿತಿಮೀರಿ ನಡೆದುಕೊಂಡ ಶೋಭಾ ಶೆಟ್ಟಿಗೆ ವೇದಿಕೆ ಮೇಲೆ ಸುದೀಪ್ ಕ್ಲಾಸ್

ಇದು ಅನುಷಾಗೆ ಸಿಕ್ಕಿರುವ ಬಹುಮಾನ ಮೊತ್ತ ಮಾತ್ರ. ಇದರ ಜೊತೆಗೆ ಅವರಿಗೆ 50 ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದಿದ್ದಕ್ಕೆ ಸಂಭಾವನೆ ದೊರೆತಿದೆ. ಅದನ್ನು ಅವರು ರಿವೀಲ್ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈಗ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡಲಿದ್ದಾರೆ. ಅದರಲ್ಲಿ ಈ ವಿಚಾರ ರಿವೀಲ್ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:45 am, Mon, 18 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್