AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀಗೆ ಕೂಡಿಬಂತು ಕಂಕಣ ಭಾಗ್ಯ, ಮದುವೆಯ ಸುಳಿವು ಕೊಟ್ಟ ನಟಿ

Anchor Anushree: ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರ ಮದುವೆ ಬಗ್ಗೆ ಆಗಾಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಆದರೆ ಪ್ರತಿಬಾರಿಯೂ ಅದು ಗಾಳಿ ಸುದ್ದಿಯಾಗುತ್ತದೆ. ಇದೀಗ ‘ವಿದ್ಯಾಪತಿ’ ಸಿನಿಮಾಕ್ಕಾಗಿ ಅನುಶ್ರೀ ಮಾಡಿದ ಇನ್​ಸ್ಟಾ ಲೈವ್​ನಲ್ಲಿ ಸ್ವತಃ ಅನುಶ್ರೀ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮದುವೆ ಯಾವಾಗ ಎಂಬುದನ್ನು ಅನುಶ್ರೀ ಅವರೇ ಹೇಳಿದ್ದಾರೆ.

ಅನುಶ್ರೀಗೆ ಕೂಡಿಬಂತು ಕಂಕಣ ಭಾಗ್ಯ, ಮದುವೆಯ ಸುಳಿವು ಕೊಟ್ಟ ನಟಿ
Anushree
ಮಂಜುನಾಥ ಸಿ.
|

Updated on: Apr 09, 2025 | 2:48 PM

Share

ಆಂಕರ್ ಅನುಶ್ರೀ (Ancor Anushree), ಮೋಸ್ಟ್ ಎಲಿಜಿಬೆಲ್ ಸಿಂಗಲ್ ನಟಿಯರಲ್ಲಿ ಒಬ್ಬರು. ಬಹಳ ಸಮಯದಿಂದಲೂ ಅವರ ಮದುವೆಯ ಗಾಳಿ ಸುದ್ದಿಗಳು ಹರಿದಾಡುತ್ತಲೇ ಇವೆ. ಆದರೆ ಈ ವರೆಗೂ ಅವರು ಸಿಂಗಲ್ ಆಗಿಯೇ ಇದ್ದಾರೆ. ಅನುಶ್ರೀಗೆ ಅವರ ಅಭಿಮಾನಿಗಳು ಸಹ ಹಲವು ಬಾರಿ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ, ಆದರೆ ಅನುಶ್ರೀ ಅವರದ್ದು ಪ್ರತಿಬಾರಿಯೂ ಹಾರಿಕೆಯ ಉತ್ತರವೇ ಆದರೆ ಈ ಬಾರಿ ಅನುಶ್ರೀ ಮದುವೆಯ (Marriage) ಸುಳಿವು ನೀಡಿದ್ದಾರೆ. ಇದೇ ವರ್ಷದಲ್ಲಿ ಮದುವೆ ಆಗುತ್ತಿರುವುದಾಗಿ ಹೇಳಿದ್ದಾರೆ ಅನುಶ್ರೀ. ಆದರೆ ವರ ಯಾರು?

ಅನುಶ್ರೀ ಅವರು ‘ವಿದ್ಯಾಪತಿ’ ಸಿನಿಮಾಕ್ಕಾಗಿ ವಿಶೇಷ ಇನ್​ಸ್ಟಾಗ್ರಾಂ ಲೈವ್ ಒಂದನ್ನು ಮಾಡಿದ್ದರು. ಲೈವ್​ನಲ್ಲಿ ಹಲವರು ಕಮೆಂಟ್ ಮಾಡಿ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಹಲವರು ಅನುಶ್ರೀ ಅವರನ್ನು ಮದುವೆ ಬಗ್ಗೆ ಸಹ ಪ್ರಶ್ನೆ ಮಾಡಿದ್ದಾರೆ. ‘ವಿದ್ಯಾಪತಿ’ ಸಿನಿಮಾದ ನಾಯಕ ನಟ ನಾಗಭೂಷಣ್ ಸಹ ಅನುಶ್ರೀ ಅವರಿಗೆ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಅನುಶ್ರೀ ಅವರಿಗೆ ಮದುವೆ ಬಗ್ಗೆ ಪ್ರಶ್ನೆ ಮಾಡಿದರು, ಈ ವೇಳೆ ಅವರಿಗೆ ಉತ್ತರ ನೀಡುತ್ತಾ, ತಾವು ಇದೇ ವರ್ಷ ಮದುವೆ ಆಗುವುದಾಗಿ ಹೇಳಿಕೊಂಡಿದ್ದಾರೆ.

ಮಾರ್ಚ್​ನಲ್ಲಿ ಸಿಹಿ ಸುದ್ದಿ ಕೊಡುವುದಾಗಿ ಅನುಶ್ರೀ ಅವರು ಈ ಹಿಂದೆ ಹೇಳಿಕೊಂಡಿದ್ದರು. ಈಗ ಮತ್ತೆ ಮದುವೆ ಬಗ್ಗೆ ಮಾತನಾಡಿ, ಈ ವರ್ಷ ಮುಗಿಯುವುದರ ಒಳಗಾಗಿ ತಾವು ಮದುವೆ ಆಗಿಯೇ ತೀರುವುದಾಗಿ ಅನುಶ್ರೀ ಹೇಳಿಕೊಂಡಿದ್ದಾರೆ. ಆದರೆ ಅನುಶ್ರೀ ಯಾರನ್ನು ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ ಆದರೆ ಈ ವರ್ಷ ಮದುವೆ ಆಗುವುದಾಗಿ ಮಾತ್ರ ಹೇಳಿದ್ದಾರೆ.

ಇದನ್ನೂ ಓದಿ:‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು

ಅನುಶ್ರೀ ನಟಿಯಾಗಿ ಎಂಟ್ರಿ ಕೊಟ್ಟು ಈಗ ಕಿರುತೆರೆಯ ಸ್ಟಾರ್ ನಿರೂಪಕಿ ಆಗಿದ್ದಾರೆ. ಕೆಲವು ಟಾಪ್ ರಿಯಾಲಿಟಿ ಶೋಗಳನ್ನು ಅವರು ಅದ್ಭುತವಾಗಿ ನಿರೂಪಣೆ ಮಾಡುತ್ತಾರೆ. ಹಲವು ಸಿನಿಮಾ ಕಾರ್ಯಕ್ರಮ, ಸರ್ಕಾರಿ ಕಾರ್ಯಕ್ರಮಗಳಿಗೂ ಸಹ ಅನುಶ್ರೀ ನಿರೂಪಣೆ ಮಾಡುತ್ತಾರೆ. ಯೂಟ್ಯೂಬ್ ಚಾನೆಲ್ ಸಹ ನಡೆಸುವ ಅನುಶ್ರೀ, ಸಿನಿಮಾ ನಟ-ನಟಿಯರ ಸಂದರ್ಶನಗಳನ್ನು ಮಾಡುತ್ತಿರುತ್ತಾರೆ. ಈಗ ನಾಗಭೂಷಣ್, ಮಲೈಕಾ ನಟಿಸಿ ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ‘ವಿದ್ಯಾಪತಿ’ ಸಿನಿಮಾದ ಪ್ರಚಾರಕ್ಕಾಗಿ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಸಂದರ್ಶನ ಮಾಡಿದ್ದಾರೆ ಅನುಶ್ರೀ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು