AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ

ಅರವಿಂದ್ ಹಾಗೂ ದಿವ್ಯಾ ಒಟ್ಟಿಗೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ರಾ ರಾ ರಕ್ಕಮ್ಮಾ..’ ಹಾಡಿಗೆ ರೀಲ್ಸ್ ಮಾಡಿ ಅದನ್ನು ಪೋಸ್ಟ್​ ಮಾಡಿದ್ದಾರೆ.

 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
ಅರವಿಂದ್​-ದಿವ್ಯಾ
TV9 Web
| Edited By: |

Updated on: May 28, 2022 | 1:31 PM

Share

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ‘ರಾ ರಾ ರಕ್ಕಮ್ಮಾ..’ (Ra Ra Rakkamma Song) ಹಾಡಿನ ಟ್ರೆಂಡ್ ಎಲ್ಲೆಲ್ಲೂ ಜೋರಾಗಿದೆ. ಯೂಟ್ಯೂಬ್​​ನಲ್ಲಿ ಲಕ್ಷಲಕ್ಷ ವೀವ್ಸ್ ಕಂಡ ಈ ಹಾಡು ಇನ್​ಸ್ಟಾಗ್ರಾಮ್​ ರೀಲ್ಸ್​ನಲ್ಲೂ ಟ್ರೆಂಡ್ ಆಗಿದೆ. ಅನೇಕ ಸೆಲೆಬ್ರಿಟಿಗಳು ಈ ಹಾಡಿಗೆ ರೀಲ್ಸ್ ಮಾಡುತ್ತಿದ್ದಾರೆ. ಈ ಮೂಲಕ ಹಾಡಿನ ಹಾಗೂ ಚಿತ್ರದ ಖ್ಯಾತಿಯನ್ನು ಹೆಚ್ಚಿಸುತ್ತಿದ್ದಾರೆ. ಸದ್ಯ, ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ಹಾಗೂ ಅರವಿಂದ್ ಕೆಪಿ. ಈ ರೀಲ್ಸ್​ಗೆ ಲಕ್ಷಾಂತರ ಮಂದಿ ಲೈಕ್ಸ್ ಒತ್ತಿದ್ದಾರೆ.

‘ಬಿಗ್ ಬಾಸ್ ಸೀಸನ್​ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಸ್ಪರ್ಧಿಸಿದ್ದರು. ಒಂದು ಟಾಸ್ಕ್​​ನಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಮಧ್ಯೆ ಒಳ್ಳೆಯ ಗೆಳೆತನ ಬೆಳೆಯಿತು. ಈ ಗೆಳೆತನ ಬಿಗ್​ ಬಾಸ್​ ಮನೆಯಲ್ಲೇ ಪ್ರೀತಿಗೆ ತಿರುಗಿತು. ಇಬ್ಬರೂ ಇದನ್ನು ಓಪನ್ ಆಗಿ ಹೇಳಿಕೊಂಡಿದ್ದಾರೆ. ಮನೆಯಿಂದ ಹೊರ ಬಂದ ನಂತರವೂ ಇಬ್ಬರೂ ಅನ್ಯೋನ್ಯವಾಗಿದ್ದಾರೆ. ಈ ಬಗ್ಗೆ ಫ್ಯಾನ್ಸ್​ಗೆ ಖುಷಿ ಇದೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

ಅರವಿಂದ್ ಹಾಗೂ ದಿವ್ಯಾ ಒಟ್ಟಿಗೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ರಾ ರಾ ರಕ್ಕಮ್ಮಾ..’ ಹಾಡಿಗೆ ರೀಲ್ಸ್ ಮಾಡಿ ಅದನ್ನು ಪೋಸ್ಟ್​ ಮಾಡಿದ್ದಾರೆ. ಈ ಡ್ಯಾನ್ಸ್​ಗೆ ಮೆಚ್ಚುಗೆ ವ್ಯಕ್ತವಾಗಿದೆ. ಇಬ್ಬರೂ ಎನರ್ಜಿಟಿಕ್ ಆಗಿ ಡ್ಯಾನ್ಸ್ ಮಾಡಿದ್ದಾರೆ.

View this post on Instagram

A post shared by Aravind K P (@aravind_kp)

ಕಿಚ್ಚ ಸುದೀಪ್ ಹಾಗೂ ಅರವಿಂದ್​-ದಿವ್ಯಾ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಕಾರಣವಾಗಿದ್ದು ಬಿಗ್ ಬಾಸ್ ಮನೆ. ಪ್ರತಿ ವಾರ ಸುದೀಪ್ ನಿರೂಪಕರಾಗಿ ಬರುತ್ತಿದ್ದರಿಂದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಹೀಗಾಗಿ, ‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರಕ್ಕೆ ಇವರೂ ಸಾಥ್ ನೀಡುತ್ತಿದ್ದಾರೆ.

ಇದನ್ನೂ ಓದಿ: ನನ್ನ ಮದುವೆ ಆಗಿಹೋಗಿದೆ ಅಂತ ಎಲ್ಲರೂ ಹೇಳ್ತಾ ಇದಾರೆ ಎಂದ ಅರವಿಂದ್​ ಕೆಪಿ; ದಿವ್ಯಾ ರಿಯಾಕ್ಷನ್​ ಹೇಗಿತ್ತು?

‘ರಾ ರಾ ರಕ್ಕಮ್ಮಾ’ ಲಿರಿಕಲ್ ವಿಡಿಯೋ ಮಾತ್ರ ರಿಲೀಸ್ ಆಗಿದೆ. ಇದರಲ್ಲಿ ಸುದೀಪ್ ಹಾಗೂ ಜಾಕ್ವೆಲಿನ್ ಡ್ಯಾನ್ಸ್​​ನ ಝಲಕ್ ತೋರಿಸಲಾಗಿದೆ. ಹೀಗಾಗಿ ವಿಡಿಯೋ ಸಾಂಗ್ ನೋಡಬೇಕು ಎಂದು ಫ್ಯಾನ್ಸ್ ಕಾದಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರ ಜುಲೈ 28ರಂದು ತೆರೆಗೆ ಬರುತ್ತಿದೆ. ಅನೂಪ್ ಭಂಡಾರಿ ಅವರು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ