AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಸುಬ್ಬಯ್ಯಗೆ ಬಿಗ್​ ಬಾಸ್​ ವೇದಿಕೆ ಮೇಲೆ ಕ್ಷಮೆ ಕೇಳಿದ ಅರವಿಂದ್​

ಈ ವಿಚಾರದಲ್ಲಿ ಮಂಜು-ಅರವಿಂದ್ ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದರು. ಆಗ ಅರವಿಂದ್, ‘ನಾನು ಕ್ಯಾಪ್ಟನ್​ ಜತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳಿ’ ಎಂದಿದ್ದರು.

ನಿಧಿ ಸುಬ್ಬಯ್ಯಗೆ ಬಿಗ್​ ಬಾಸ್​ ವೇದಿಕೆ ಮೇಲೆ ಕ್ಷಮೆ ಕೇಳಿದ ಅರವಿಂದ್​
ಅರವಿಂದ್​ ಕೆಪಿ- ನಿಧಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 07, 2021 | 9:34 PM

Share

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಕೆ.ಪಿ. ತಾವಾಗಿಯೇ ಯಾರ ತಂಟೆಗೂ ಹೋದವರಲ್ಲ. ಪ್ರತಿ ಬಾರಿ ಆಟವನ್ನು ಅವರು ಸ್ಪೋರ್ಟಿವ್​ ಆಗಿ ತೆಗೆದುಕೊಳ್ಳುತ್ತಾರೆ. ಆದರೆ, ಜೂನ್​ 29ರ ಎಪಿಸೋಡ್​ನಲ್ಲಿ ಅವರು ಮೊದಲಿನ ಅರವಿಂದ್ ಆಗಿರಲಿಲ್ಲ. ಅವರು ಬಾಯ್ತಪ್ಪಿ ಶಬ್ದವೊಂದನ್ನು ಹೇಳಿದ್ದರು. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ, ಅರವಿಂದ್ ಫಿನಾಲೆಯಲ್ಲಿ ಕ್ಷಮೆ ಕೇಳಿದ್ದಾರೆ. 

ಬಿಗ್​ ಬಾಸ್ ಸ್ಪರ್ಧಿಗಳಿಗೆ​ ಟಾಸ್ಕ್ ಒಂದನ್ನು ನೀಡಿದ್ದರು. ಇದರ ಅನುಸಾರ ಎರಡು ಟೀಂಗಳನ್ನು ಮಾಡಲಾಗಿತ್ತು. ಒಂದು ತಂಡಕ್ಕೆ ಅರವಿಂದ್ ಕ್ಯಾಪ್ಟನ್​ ಆದರೆ, ಮತ್ತೊಂದು ಟೀಂಅನ್ನು ಮಂಜು ಮುನ್ನಡೆಸುತ್ತಿದ್ದರು. ಟಾಸ್ಕ್​ ನಿಯಮದ ಅನುಸಾರ ಟಿಶ್ಯೂ ರೋಲ್​ಗಳನ್ನು ಸ್ಟೋರ್ ರೂಮ್​ನಿಂದ ತಂದು ಗುರುತಿಸಿದ ಜಾಗದಲ್ಲಿ ಒಂದರ ಮೇಲೆ ಒಂದನ್ನು ಎತ್ತರವಾಗಿ ನಿಲ್ಲಿಸಬೇಕಿತ್ತು. ಈ ಟಾಸ್ಕ್​ ಆಡುವಾಗ ದಾರಿಯಲ್ಲಿ ಬಿದ್ದ ಟಿಶ್ಯುರೋಲ್​ಗಳನ್ನು ನಿಧಿ ತೆಗೆದುಕೊಂಡಿದ್ದರು. ಇದು ಅರವಿಂದ್ ಕೋಪಕ್ಕೆ ಕಾರಣವಾಗಿತ್ತು.

ಈ ವಿಚಾರದಲ್ಲಿ ಮಂಜು-ಅರವಿಂದ್ ಮಾತನಾಡುವಾಗ ನಿಧಿ ಮಧ್ಯ ಪ್ರವೇಶಿಸಿದ್ದರು. ಆಗ ಅರವಿಂದ್, ‘ನಾನು ಕ್ಯಾಪ್ಟನ್​ ಜತೆ ಮಾತನಾಡುತ್ತಿದ್ದೇನೆ. ನೀವು ಸ್ವಲ್ಪ ಮುಚ್ಕೊಳಿ’ ಎಂದಿದ್ದರು.

ನಂತರ ಅರವಿಂದ್​ ಅವರು ಹೋಗಿ ನಿಧಿಗೆ ಕ್ಷಮೆ ಕೇಳಿದ್ದರು. ಆದರೆ, ನಿಧಿ ಇದನ್ನು ಒಪ್ಪಿರಲಿಲ್ಲ. ಇಬ್ಬರ ನಡುವೆ ಈ ವಿಚಾರಕ್ಕೆ ಮಾತಿನ ಚಕಮಕಿ ಏರ್ಪಟ್ಟಿತ್ತು. ‘ನೀವು ಏನು ಎಂಬುದು ನಂಗೆ ಗೊತ್ತು ಎಂದು ಪದೇಪದೇ ಹೇಳಿದ್ದೀರಿ. ಈ ಆಟದಿಂದ ನಾನು ಏನು ಎಂಬುದು ಗೊತ್ತಾಗುತ್ತದೆಯೇ? ನಾನು ಎಲ್ಲ ಬೈಗುಳಗಳನ್ನು ತೆಗೆದುಕೊಳ್ಳೋಕೆ ರೆಡಿ ಇಲ್ಲ. ನೀವು ಸಾರಿ ಎಂದು ಕೇಳುತ್ತೀರಿ. ಮತ್ತೆ ನನಗೆ ಕ್ಯಾರೆಕ್ಟರ್​ ಇಲ್ಲ ಎಂದು ಹೇಳುತ್ತೀರಿ. ನನಗೆ ಕ್ಯಾರೆಕ್ಟರ್​ ಇದೆ ಅರವಿಂದ್. ನಿಮಗೆ  ಕ್ರೀಡಾಸ್ಫೂರ್ತಿ ​ ಇಲ್ಲ. ಸೋಲನ್ನು ಒಪ್ಪಿಕೊಳ್ಳೋಕೆ ನಿನಗೆ ಆಗಲ್ಲ’ ಎಂದು ನಿಧಿ ಗರಂ ಆಗಿದ್ದರು. ಈ ವಿಚಾರ ವೀಕೆಂಡ್​ನಲ್ಲೂ ಚರ್ಚೆಗೆ ಬಂದಿತ್ತು.

ಈಗ ಫಿನಾಲೆಗೂ ಮೊದಲು ಪತ್ರ ಬರೆಯೋಕೆ ಅವಕಾಶ ನೀಡಲಾಗಿತ್ತು. ಎಲ್ಲರೂ ಒಂದೊಂದು ಪತ್ರವನ್ನು ಬರೆದಿದ್ದರು. ಅರವಿಂದ್ ಅವರು ನಿಧಿಗೆ ಪತ್ರ ಬರೆದಿದ್ದರು. ‘ಹಾಯ್​ ಗೆಳತಿ. ಬಿಗ್​ ಬಾಸ್ ನೀಡಿರುವ ಈ ಅವಕಾಶವನ್ನು ನಿನ್ನಲ್ಲಿ ಕ್ಷಮೆ ಕೇಳಲು ಇಚ್ಛಿಸುತ್ತೇನೆ. ನಿನ್ನಲ್ಲಿ ಒಳ್ಳೆಯ ಸ್ನೇಹಿತೆ ಕಂಡಿದ್ದೇನೆ. ನನ್ನ ಮಾತು ನಿನಗೆ ನೋವುಂಟು ಮಾಡಿದೆ. ನೀನು ನೀಡಿದ ಸಲುಗೆ ದುರುಪಯೋಗ ಮಾಡಿಕೊಂಡ ಬೇಜಾರು ನನಗಿದೆ. ಎಲ್ಲಾ ಸಂದರ್ಭದಲ್ಲಿ ಸಲುಗೆಯಿಂದ ಮಾತನಾಡಬಾರದು ಎಂಬ ಅರಿವು ನನಗಾಗಿದೆ. ಈ ಸ್ನೇಹ ಜೀವನಪರ್ಯಂತ ಸಾಗಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದು ಪತ್ರ ಬರೆದಿದ್ದಾರೆ ಅರವಿಂದ್.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ