ಬಿಗ್​ ಬಾಸ್​ ಅರವಿಂದ್​ಗಿದೆ ಸಿನಿಮಾ ಹಿನ್ನೆಲೆ; ಅವರು ನಟಿಸಿರೋ ಚಿತ್ರಗಳಾವವು ಗೊತ್ತಾ?

ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ನಾನು ಮತ್ತು ವರಲಕ್ಷ್ಮೀ' ಸಿನಿಮಾಗೆ ಯುವ ಪ್ರತಿಭೆ ಪೃಥ್ವಿ ಹೀರೋ ಆಗಿದ್ದರು. ಬೈಕ್ ರೇಸ್ ಕಥೆಯನ್ನು ಸಿನಿಮಾ ಹೇಳಿದೆ.

ಬಿಗ್​ ಬಾಸ್​ ಅರವಿಂದ್​ಗಿದೆ ಸಿನಿಮಾ ಹಿನ್ನೆಲೆ; ಅವರು ನಟಿಸಿರೋ ಚಿತ್ರಗಳಾವವು ಗೊತ್ತಾ?
ಅರವಿಂದ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Aug 04, 2021 | 3:53 PM

ಅರವಿಂದ್ ಕೆ.ಪಿ. ಬಿಗ್​ ಬಾಸ್​ಗೆ ಬಂದ ನಂತರದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಸೀಸನ್​ 8ರ ಫಿನಾಲೆಯಲ್ಲಿ ಅವರು ಕೂಡ ಇರೋದು ಬಹುತೇಕ ಖಚಿತವಾಗಿದೆ. ಅಚ್ಚರಿ ಎಂದರೆ, ಅರವಿಂದ್​​ಗೂ ಚಿತ್ರರಂಗಕ್ಕೂ ಒಂದು ಕನೆಕ್ಷನ್​ ಇದೆ. ಈ ವಿಚಾರವನ್ನು ಅರವಿಂದ್ ಅವರೇ ಹೇಳಿಕೊಂಡಿದ್ದಾರೆ.

ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ನಾನು ಮತ್ತು ವರಲಕ್ಷ್ಮೀ’ ಸಿನಿಮಾಗೆ ಯುವ ಪ್ರತಿಭೆ ಪೃಥ್ವಿ ಹೀರೋ ಆಗಿದ್ದರು. ಬೈಕ್ ರೇಸ್ ಕಥೆಯನ್ನು ಸಿನಿಮಾ ಹೇಳಿದೆ. ಬಿಗ್​ ಬಾಸ್​ ಮನೆಯಲ್ಲಿ ಆಗಸ್ಟ್​ 3ರ ಎಪಿಸೋಡ್​ನಲ್ಲಿ ವೇಕ್​ಅಪ್​ ಹಾಡಿಗೆ ಈ ಚಿತ್ರದ ‘ನಾನ್ ಚೆನ್ನಾಗಿದ್ದೆ ಯೆಸ್‌ ಬ್ರೋ..’ ಸಾಂಗ್​ ಪ್ಲೇ ಮಾಡಲಾಯಿತು. ಅರವಿಂದ್​ ಇದು ನಾನು ನಟಿಸಿದ ಸಿನಿಮಾದ ಹಾಡು ಎಂದು ಸಂತಸ ಹೊರ ಹಾಕಿದರು. ಈ ವಿಚಾರ ಮನೆ ಮಂದಿಗೆ ಅಚ್ಚರಿ ಮೂಡಿಸಿತ್ತು. ಅರವಿಂದ್​ ರೇಸಿಂಗ್​ ಹಿನ್ನೆಲೆಯಿಂದ ಬಂದವರು ಎಂಬುದಷ್ಟೇ ಮನೆ ಮಂದಿಗೆ ಗೊತ್ತಿತ್ತು. ಅವರಿಗೂ ಚಿತ್ರರಂಗಕ್ಕೂ ಲಿಂಕ್​ ಇದೆ ಎನ್ನುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿದ್ದವರಿಗೂ ಹಾಗೂ ಅಭಿಮಾನಿಗಳಿಗೆ ಅಚ್ಚರಿ ತಂದಿದೆ.

‘ನಾನು ಮತ್ತು ವರಲಕ್ಷ್ಮೀ’ ಸಿನಿಮಾ ಸಂಪೂರ್ಣವಾಗಿ ಬೈಕ್​ ರೇಸಿಂಗ್​ ಬಗ್ಗೆ ಇದೆ. ಈ ಸಿನಿಮಾದಲ್ಲಿ ಅರವಿಂದ್ ಬೈಕ್​ ಓಡಿಸಿದ್ದಾರೆ. ಅಷ್ಟೇ ಅಲ್ಲ, ಹೀರೋ ರೇಸ್​ನಲ್ಲಿ ಗೆದ್ದಾಗ ಬೈಕರ್​ ಅರವಿಂದ್​ ಕೆಪಿ ಆಗಿಯೇ ಪ್ರಶಸ್ತಿ ನೀಡುತ್ತಾರೆ. ಈ ಚಿತ್ರದಲ್ಲಿ ಮಾಳವಿಕಾ ಮೋಹನನ್, ಪ್ರಕಾಶ್ ರಾಜ್, ಅಚ್ಯುತ್‌ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಪವಿತ್ರಾ ಲೋಕೇಶ್ ಮೊದಲಾದವರು ನಟಿಸಿದ್ದರು. ಇನ್ನು, ಮಲಯಾಳಂನ ‘ಬೆಂಗಳೂರು ಡೇಸ್’ ಸಿನಿಮಾದಲ್ಲೂ ಅರವಿಂದ್ ನಟಿಸಿದ್ದಾರೆ.

ಅರವಿಂದ್ ಕೆ.ಪಿ. ಬಿಗ್​ ಬಾಸ್​ಗೆ ಬಂದಿದ್ದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು. ಬೇರೆ ಕ್ಷೇತ್ರದಿಂದ ಬಂದರೂ ದೊಡ್ಡ ಮಟ್ಟದಲ್ಲಿ ಅವರು ಖ್ಯಾತಿ ಪಡೆದುಕೊಂಡಿದ್ದಾರೆ. ಅವರ ಅಭಿಮಾನಿ ಬಳಗ ಸಾಕಷ್ಟು ವಿಸ್ತರಣೆ ಆಗಿದೆ. ಅರವಿಂದ್ ಗೆಲ್ಲಬೇಕು ಎಂದು ಸಾಕಷ್ಟು ಜನರು ಆಶಿಸುತ್ತಿದ್ದಾರೆ. ಆಗಸ್ಟ್​ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಯಾರು ಸೀಸನ್​ 8 ಗೆಲ್ಲಲಿದ್ದಾರೆ ಎನ್ನುವುದು ಎಲ್ಲರ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ