AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಅರವಿಂದ್​ಗಿದೆ ಸಿನಿಮಾ ಹಿನ್ನೆಲೆ; ಅವರು ನಟಿಸಿರೋ ಚಿತ್ರಗಳಾವವು ಗೊತ್ತಾ?

ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ನಾನು ಮತ್ತು ವರಲಕ್ಷ್ಮೀ' ಸಿನಿಮಾಗೆ ಯುವ ಪ್ರತಿಭೆ ಪೃಥ್ವಿ ಹೀರೋ ಆಗಿದ್ದರು. ಬೈಕ್ ರೇಸ್ ಕಥೆಯನ್ನು ಸಿನಿಮಾ ಹೇಳಿದೆ.

ಬಿಗ್​ ಬಾಸ್​ ಅರವಿಂದ್​ಗಿದೆ ಸಿನಿಮಾ ಹಿನ್ನೆಲೆ; ಅವರು ನಟಿಸಿರೋ ಚಿತ್ರಗಳಾವವು ಗೊತ್ತಾ?
ಅರವಿಂದ್​
TV9 Web
| Edited By: |

Updated on: Aug 04, 2021 | 3:53 PM

Share

ಅರವಿಂದ್ ಕೆ.ಪಿ. ಬಿಗ್​ ಬಾಸ್​ಗೆ ಬಂದ ನಂತರದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಸೀಸನ್​ 8ರ ಫಿನಾಲೆಯಲ್ಲಿ ಅವರು ಕೂಡ ಇರೋದು ಬಹುತೇಕ ಖಚಿತವಾಗಿದೆ. ಅಚ್ಚರಿ ಎಂದರೆ, ಅರವಿಂದ್​​ಗೂ ಚಿತ್ರರಂಗಕ್ಕೂ ಒಂದು ಕನೆಕ್ಷನ್​ ಇದೆ. ಈ ವಿಚಾರವನ್ನು ಅರವಿಂದ್ ಅವರೇ ಹೇಳಿಕೊಂಡಿದ್ದಾರೆ.

ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ನಾನು ಮತ್ತು ವರಲಕ್ಷ್ಮೀ’ ಸಿನಿಮಾಗೆ ಯುವ ಪ್ರತಿಭೆ ಪೃಥ್ವಿ ಹೀರೋ ಆಗಿದ್ದರು. ಬೈಕ್ ರೇಸ್ ಕಥೆಯನ್ನು ಸಿನಿಮಾ ಹೇಳಿದೆ. ಬಿಗ್​ ಬಾಸ್​ ಮನೆಯಲ್ಲಿ ಆಗಸ್ಟ್​ 3ರ ಎಪಿಸೋಡ್​ನಲ್ಲಿ ವೇಕ್​ಅಪ್​ ಹಾಡಿಗೆ ಈ ಚಿತ್ರದ ‘ನಾನ್ ಚೆನ್ನಾಗಿದ್ದೆ ಯೆಸ್‌ ಬ್ರೋ..’ ಸಾಂಗ್​ ಪ್ಲೇ ಮಾಡಲಾಯಿತು. ಅರವಿಂದ್​ ಇದು ನಾನು ನಟಿಸಿದ ಸಿನಿಮಾದ ಹಾಡು ಎಂದು ಸಂತಸ ಹೊರ ಹಾಕಿದರು. ಈ ವಿಚಾರ ಮನೆ ಮಂದಿಗೆ ಅಚ್ಚರಿ ಮೂಡಿಸಿತ್ತು. ಅರವಿಂದ್​ ರೇಸಿಂಗ್​ ಹಿನ್ನೆಲೆಯಿಂದ ಬಂದವರು ಎಂಬುದಷ್ಟೇ ಮನೆ ಮಂದಿಗೆ ಗೊತ್ತಿತ್ತು. ಅವರಿಗೂ ಚಿತ್ರರಂಗಕ್ಕೂ ಲಿಂಕ್​ ಇದೆ ಎನ್ನುವ ವಿಚಾರ ಬಿಗ್​ ಬಾಸ್​ ಮನೆಯಲ್ಲಿದ್ದವರಿಗೂ ಹಾಗೂ ಅಭಿಮಾನಿಗಳಿಗೆ ಅಚ್ಚರಿ ತಂದಿದೆ.

‘ನಾನು ಮತ್ತು ವರಲಕ್ಷ್ಮೀ’ ಸಿನಿಮಾ ಸಂಪೂರ್ಣವಾಗಿ ಬೈಕ್​ ರೇಸಿಂಗ್​ ಬಗ್ಗೆ ಇದೆ. ಈ ಸಿನಿಮಾದಲ್ಲಿ ಅರವಿಂದ್ ಬೈಕ್​ ಓಡಿಸಿದ್ದಾರೆ. ಅಷ್ಟೇ ಅಲ್ಲ, ಹೀರೋ ರೇಸ್​ನಲ್ಲಿ ಗೆದ್ದಾಗ ಬೈಕರ್​ ಅರವಿಂದ್​ ಕೆಪಿ ಆಗಿಯೇ ಪ್ರಶಸ್ತಿ ನೀಡುತ್ತಾರೆ. ಈ ಚಿತ್ರದಲ್ಲಿ ಮಾಳವಿಕಾ ಮೋಹನನ್, ಪ್ರಕಾಶ್ ರಾಜ್, ಅಚ್ಯುತ್‌ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಪವಿತ್ರಾ ಲೋಕೇಶ್ ಮೊದಲಾದವರು ನಟಿಸಿದ್ದರು. ಇನ್ನು, ಮಲಯಾಳಂನ ‘ಬೆಂಗಳೂರು ಡೇಸ್’ ಸಿನಿಮಾದಲ್ಲೂ ಅರವಿಂದ್ ನಟಿಸಿದ್ದಾರೆ.

ಅರವಿಂದ್ ಕೆ.ಪಿ. ಬಿಗ್​ ಬಾಸ್​ಗೆ ಬಂದಿದ್ದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು. ಬೇರೆ ಕ್ಷೇತ್ರದಿಂದ ಬಂದರೂ ದೊಡ್ಡ ಮಟ್ಟದಲ್ಲಿ ಅವರು ಖ್ಯಾತಿ ಪಡೆದುಕೊಂಡಿದ್ದಾರೆ. ಅವರ ಅಭಿಮಾನಿ ಬಳಗ ಸಾಕಷ್ಟು ವಿಸ್ತರಣೆ ಆಗಿದೆ. ಅರವಿಂದ್ ಗೆಲ್ಲಬೇಕು ಎಂದು ಸಾಕಷ್ಟು ಜನರು ಆಶಿಸುತ್ತಿದ್ದಾರೆ. ಆಗಸ್ಟ್​ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಯಾರು ಸೀಸನ್​ 8 ಗೆಲ್ಲಲಿದ್ದಾರೆ ಎನ್ನುವುದು ಎಲ್ಲರ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?