AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ

Aravind Kp: ರೂಪೇಶ್ ರಾಜಣ್ಣ ಅವರು ಬಿಗ್ ಬಾಸ್ ಮನೆಯಲ್ಲಿ ಸಾಂಗ್ ಒಂದನ್ನು ಮಾಡಿದ್ದರು. ಈ ಹಾಡನ್ನು ಎಲ್ಲ ಕಡೆಗಳಲ್ಲಿ ದಿವ್ಯಾ ಹಾಡಿದ್ದರು. ಆದರೆ, ಅವರು ಕ್ರೆಡಿಟ್ ಕೊಟ್ಟಿಲ್ಲ ಎಂದು ರೂಪೇಶ್ ರಾಜಣ್ಣ ಕೊಂಕು ತೆಗೆದಿದ್ದರು.

ದಿವ್ಯಾ ಉರುಡುಗಗೆ ಕಣ್ಣೀರು ಹಾಕಿಸಿದ್ದ ರೂಪೇಶ್ ರಾಜಣ್ಣ; ದೊಡ್ಮನೆಯಲ್ಲಿ ಟಾಂಗ್ ಕೊಟ್ಟ ಅರವಿಂದ್ ಕೆಪಿ
ದಿವ್ಯಾ-ಅರವಿಂದ್​-ರೂಪೇಶ್
TV9 Web
| Edited By: |

Updated on:Dec 29, 2022 | 9:08 AM

Share

ಬಿಗ್ ಬಾಸ್ (Bigg Boss)ಈ ಸೀಸನ್​ ಆರಂಭವಾದ ಸಮಯದಲ್ಲಿ ರೂಪೇಶ್ ರಾಜಣ್ಣ ಅವರು ಅಷ್ಟಾಗಿ ಗಮನ ಸೆಳೆದಿರಲಿಲ್ಲ. ಕೆಲವೇ ವಾರಗಳಲ್ಲಿ ಅವರು ಔಟ್ ಆಗಲಿದ್ದಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಈಗ ಫಿನಾಲೆ ತಲುಪಿದ್ದಾರೆ. ಟಾಪ್​ ಐದರಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದಾರೆ. ಇದು ರೂಪೇಶ್ ರಾಜಣ್ಣ (Roopesh Rajanna) ಫ್ಯಾನ್ಸ್​​ಗೆ ಖಷಿ ನೀಡಿದೆ. ರೂಪೇಶ್ ರಾಜಣ್ಣ ಹಾಗೂ ದಿವ್ಯಾ ಉರುಡುಗ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿತ್ತು. ಆದರೆ, ಒಂದು ಘಟನೆಯಿಂದ ಎಲ್ಲವೂ ಬದಲಾಗಿತ್ತು. ಈ ವಿಚಾರವನ್ನು ಅರವಿಂದ್ ಕೆಪಿ ಪರೋಕ್ಷವಾಗಿ ಮಾತನಾಡಿದ್ದಾರೆ.

ರೂಪೇಶ್ ರಾಜಣ್ಣ ಅವರು ಬಿಗ್ ಬಾಸ್ ಮನೆಯಲ್ಲಿ ಸಾಂಗ್ ಒಂದನ್ನು ಮಾಡಿದ್ದರು. ಈ ಸಾಂಗ್​ಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದು ಕೂಡ ಅವರೇ ಆಗಿತ್ತು. ಈ ಹಾಡನ್ನು ಎಲ್ಲ ಕಡೆಗಳಲ್ಲಿ ದಿವ್ಯಾ ಹಾಡಿದ್ದರು. ಆದರೆ, ಅವರು ಕ್ರೆಡಿಟ್ ಕೊಟ್ಟಿಲ್ಲ ಎಂದು ರೂಪೇಶ್ ರಾಜಣ್ಣ ಕೊಂಕು ತೆಗೆದಿದ್ದರು. ಈ ವಿಚಾರವನ್ನು ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು ಅವರು. ಇದೇ ವಿಷಯಕ್ಕೆ ಕಣ್ಣೀರು ಹಾಕಿದ್ದರು ದಿವ್ಯಾ. ಈ ಘಟನೆ ನೆನಪಿಸಿಕೊಂಡು ಅರವಿಂದ್ ಕೆಪಿ ಟಾಂಗ್ ನೀಡಿದ್ದಾರೆ.

ಅರವಿಂದ್ ಅವರು ಡಿಸೆಂಬರ್ 28ರ ಎಪಿಸೋಡ್​ನಲ್ಲಿ ಬಿಗ್ ಬಾಸ್ ಮನೆ ಒಳಗೆ ಬಂದಿದ್ದರು. ಈ ವೇಳೆ ಅರವಿಂದ್ ಕೆಪಿಗೋಸ್ಕರ ಮಾಡಿದ ಹಾಡನ್ನು ದಿವ್ಯಾ ಹೇಳಲು ಮುಂದಾದರು. ‘ದಿವ್ಯಾ ಯಾರಿಗಾದರೂ ಕ್ರೆಡಿಟ್ ಕೊಡೋದಾದರೆ ಕೊಡಿ. ಆಮೇಲೆ ಸಮಸ್ಯೆ ಆಗೋದು ಬೇಡ’ ಎಂದರು. ಅರವಿಂದ್ ಕೆಪಿ ಮಾತನ್ನು ಎಲ್ಲರೂ ಹಾಸ್ಯವಾಗಿ ತೆಗೆದುಕೊಂಡರು. ರೂಪೇಶ್ ರಾಜಣ್ಣ ಕೂಡ ಈ ಮಾತಿಗೆ ನಕ್ಕರು.

ಇದನ್ನೂ ಓದಿ
Image
Aryavardhan Guruji: ಫಿನಾಲೆಗೆ 3 ದಿನ ಇರುವಾಗ ಆರ್ಯವರ್ಧನ್​ ಗುರೂಜಿ ಔಟ್​; ಅಪ್ಪಾಜಿ ಅಂತ ಕಣ್ಣೀರು ಹಾಕಿದ ರೂಪೇಶ್​ ಶೆಟ್ಟಿ
Image
BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ

ಇದನ್ನೂ ಓದಿ: ಅಂದು ಹಾಗೆ, ಇಂದು ಹೀಗೆ; ‘ಬಿಗ್ ಬಾಸ್​’ ಮೇಲಿದ್ದ ಅಭಿಪ್ರಾಯ ಬದಲಿಸಿಕೊಂಡ ರೂಪೇಶ್ ರಾಜಣ್ಣ

ಅರವಿಂದ್ ಕೆಪಿ ಸೀಸನ್​ 8ರಲ್ಲಿ ಸ್ಪರ್ಧಿ ಆಗಿ ಭಾಗಿ ಆಗಿದ್ದರು. ಈ ವೇಳೆ ದಿವ್ಯಾ ಉರುಡುಗ ಜತೆ ಒಳ್ಳೆಯ ಕನೆಕ್ಷನ್ ಬೆಳೆಯಿತು. ಇಬ್ಬರ ಮಧ್ಯೆ ಲವ್ ಕೂಡ ಆಯಿತು. ಇವರು ಆದಷ್ಟು ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Thu, 29 December 22

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್