ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

ಪ್ರತಿ ವಾರ ಸ್ಪರ್ಧಿಗಳಿಗೆ ಟಾಸ್ಕ್​ ನೀಡಲಾಗುತ್ತದೆ. ವಾರ ಪೂರ್ತಿ ಟಾಸ್ಕ್​ ಇರುತ್ತದೆ. ಈ ಟಾಸ್ಕ್​ನಲ್ಲಿ ಗೆಲ್ಲೋರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುತ್ತಾರೆ. ಕೊನೆಯಲ್ಲಿ ಟಾಸ್ಕ್​​ನಲ್ಲಿ ಗೆಲ್ಲೋರು ಕ್ಯಾಪ್ಟನ್​ ಆಗುತ್ತಾರೆ.

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ
ಅರವಿಂದ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 07, 2021 | 4:14 PM

ಬಿಗ್​ ಬಾಸ್​ ಕನ್ನಡ ಸೀಸನ್​ 8 ಫಿನಾಲೆ ಹಂತ ತಲುಪಿದೆ. ವೀಕ್ಷಕರನ್ನು ಸೆಳೆಯುವ ಉದ್ದೇಶದಿಂದ ನಾನಾ ರೀತಿಯ ಟಾಸ್ಕ್​ಗಳನ್ನು ಸ್ಪರ್ಧಿಗಳಿಗೆ ನೀಡಲಾಗಿತ್ತು.  ಈ ಟಾಸ್ಕ್​ ಗೆದ್ದ ಸ್ಪರ್ಧಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎಂದು ಬಿಗ್​ ಬಾಸ್​ ಘೋಷಣೆ ಮಾಡಿದ್ದರು. ಈ ಜಾಕ್​ಪಾಟ್ ಅರವಿಂದ್​ಗೆ ಸಿಕ್ಕಿದೆ. 

ಪ್ರತಿ ವಾರ ಸ್ಪರ್ಧಿಗಳಿಗೆ ಟಾಸ್ಕ್​ ನೀಡಲಾಗುತ್ತದೆ. ವಾರ ಪೂರ್ತಿ ಟಾಸ್ಕ್​ ಇರುತ್ತದೆ. ಈ ಟಾಸ್ಕ್​ನಲ್ಲಿ ಗೆಲ್ಲೋರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುತ್ತಾರೆ. ಕೊನೆಯಲ್ಲಿ ಟಾಸ್ಕ್​​ನಲ್ಲಿ ಗೆಲ್ಲೋರು ಕ್ಯಾಪ್ಟನ್​ ಆಗುತ್ತಾರೆ. ಆದರೆ, ಕೊನೆಯ ವಾರವಾದ್ದರಿಂದ ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್ ಇರಲಿಲ್ಲ. ಆದರೆ, ಬಿಗ್​ ಬಾಸ್​ ಸರ್​ಪ್ರೈಸ್​ ನೀಡಿದ್ದರು.

‘ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು 113 ದಿನಗಳ ಸುದೀರ್ಘ ಪಯಣದಲ್ಲಿ ಎಲ್ಲಾ ಭಾವಗಳನ್ನು ದಾಟಿ ಗುರಿಗೆ ಹತ್ತಿರವಾಗಿದ್ದಾರೆ. ಎರಡು ಲಕ್ಷ ಪಡೆದುಕೊಳ್ಳಲು ಬಿಗ್​ ಬಾಸ್​ ಟಾಸ್ಕ್​ ನೀಡುತ್ತಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಮೊದಲ ಸ್ಥಾನದಲ್ಲಿರುವ ಸ್ಪರ್ಧಿಗೆ 5 ಅಂಕ, ಎರಡನೇ ಸ್ಥಾನದಲ್ಲಿರುವ ಸ್ಪರ್ಧಿಗೆ ಅಂಕ 3 ಹಾಗೂ ಮೂರನೇ ಸ್ಥಾನಕ್ಕೆ 1 ಅಂಕ ಸಿಗುತ್ತದೆ. ವಾರದ ಕೊನೆಯಲ್ಲಿ ಯಾರ ಬಳಿ ಅಂಕ ಹೆಚ್ಚಿರುತ್ತದೆಯೋ ಅವರಿಗೆ ಎರಡು ಲಕ್ಷ ರೂಪಾಯಿ ಸಿಗಲಿದೆ’ ಎಂದು ಬಿಗ್​ ಬಾಸ್​ನಿಂದ ಸುತ್ತೋಲೆ ಬಂದಿತ್ತು.

ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎನ್ನುವ ವಿಚಾರ ತಿಳಿದ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದರು.  ಅಲ್ಲದೆ, ವಾರ ಪೂರ್ತಿ ನಾನಾ ರೀತಿಯ ಟಾಸ್ಕ್​ ಆಡಿದ್ದರು. ಇದನ್ನು ಯಶಸ್ವಿಯಾಗಿ ಆಡಿ ಅರವಿಂದ್ 31 ಅಂಕ ಗಳಿಸಿಕೊಂಡು ಮೊದಲ ಸ್ಥಾನ ಪಡೆದರು. ಮಂಜು ಹಾಗೂ ದಿವ್ಯಾ ಉರುಡುಗ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ವೈಷ್ಣವಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಈ ಟಾಸ್ಕ್​ನಲ್ಲಿ ಮೊದಲ ಸ್ಥಾನ ಪಡೆದ ಅರವಿಂದ್​ಗೆ ಎರಡು ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಕ್ಕಿದೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

Published On - 4:10 pm, Sat, 7 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್