AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

ಪ್ರತಿ ವಾರ ಸ್ಪರ್ಧಿಗಳಿಗೆ ಟಾಸ್ಕ್​ ನೀಡಲಾಗುತ್ತದೆ. ವಾರ ಪೂರ್ತಿ ಟಾಸ್ಕ್​ ಇರುತ್ತದೆ. ಈ ಟಾಸ್ಕ್​ನಲ್ಲಿ ಗೆಲ್ಲೋರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುತ್ತಾರೆ. ಕೊನೆಯಲ್ಲಿ ಟಾಸ್ಕ್​​ನಲ್ಲಿ ಗೆಲ್ಲೋರು ಕ್ಯಾಪ್ಟನ್​ ಆಗುತ್ತಾರೆ.

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ
ಅರವಿಂದ್​
TV9 Web
| Edited By: |

Updated on:Aug 07, 2021 | 4:14 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8 ಫಿನಾಲೆ ಹಂತ ತಲುಪಿದೆ. ವೀಕ್ಷಕರನ್ನು ಸೆಳೆಯುವ ಉದ್ದೇಶದಿಂದ ನಾನಾ ರೀತಿಯ ಟಾಸ್ಕ್​ಗಳನ್ನು ಸ್ಪರ್ಧಿಗಳಿಗೆ ನೀಡಲಾಗಿತ್ತು.  ಈ ಟಾಸ್ಕ್​ ಗೆದ್ದ ಸ್ಪರ್ಧಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎಂದು ಬಿಗ್​ ಬಾಸ್​ ಘೋಷಣೆ ಮಾಡಿದ್ದರು. ಈ ಜಾಕ್​ಪಾಟ್ ಅರವಿಂದ್​ಗೆ ಸಿಕ್ಕಿದೆ. 

ಪ್ರತಿ ವಾರ ಸ್ಪರ್ಧಿಗಳಿಗೆ ಟಾಸ್ಕ್​ ನೀಡಲಾಗುತ್ತದೆ. ವಾರ ಪೂರ್ತಿ ಟಾಸ್ಕ್​ ಇರುತ್ತದೆ. ಈ ಟಾಸ್ಕ್​ನಲ್ಲಿ ಗೆಲ್ಲೋರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುತ್ತಾರೆ. ಕೊನೆಯಲ್ಲಿ ಟಾಸ್ಕ್​​ನಲ್ಲಿ ಗೆಲ್ಲೋರು ಕ್ಯಾಪ್ಟನ್​ ಆಗುತ್ತಾರೆ. ಆದರೆ, ಕೊನೆಯ ವಾರವಾದ್ದರಿಂದ ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್ ಇರಲಿಲ್ಲ. ಆದರೆ, ಬಿಗ್​ ಬಾಸ್​ ಸರ್​ಪ್ರೈಸ್​ ನೀಡಿದ್ದರು.

‘ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು 113 ದಿನಗಳ ಸುದೀರ್ಘ ಪಯಣದಲ್ಲಿ ಎಲ್ಲಾ ಭಾವಗಳನ್ನು ದಾಟಿ ಗುರಿಗೆ ಹತ್ತಿರವಾಗಿದ್ದಾರೆ. ಎರಡು ಲಕ್ಷ ಪಡೆದುಕೊಳ್ಳಲು ಬಿಗ್​ ಬಾಸ್​ ಟಾಸ್ಕ್​ ನೀಡುತ್ತಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಮೊದಲ ಸ್ಥಾನದಲ್ಲಿರುವ ಸ್ಪರ್ಧಿಗೆ 5 ಅಂಕ, ಎರಡನೇ ಸ್ಥಾನದಲ್ಲಿರುವ ಸ್ಪರ್ಧಿಗೆ ಅಂಕ 3 ಹಾಗೂ ಮೂರನೇ ಸ್ಥಾನಕ್ಕೆ 1 ಅಂಕ ಸಿಗುತ್ತದೆ. ವಾರದ ಕೊನೆಯಲ್ಲಿ ಯಾರ ಬಳಿ ಅಂಕ ಹೆಚ್ಚಿರುತ್ತದೆಯೋ ಅವರಿಗೆ ಎರಡು ಲಕ್ಷ ರೂಪಾಯಿ ಸಿಗಲಿದೆ’ ಎಂದು ಬಿಗ್​ ಬಾಸ್​ನಿಂದ ಸುತ್ತೋಲೆ ಬಂದಿತ್ತು.

ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎನ್ನುವ ವಿಚಾರ ತಿಳಿದ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದರು.  ಅಲ್ಲದೆ, ವಾರ ಪೂರ್ತಿ ನಾನಾ ರೀತಿಯ ಟಾಸ್ಕ್​ ಆಡಿದ್ದರು. ಇದನ್ನು ಯಶಸ್ವಿಯಾಗಿ ಆಡಿ ಅರವಿಂದ್ 31 ಅಂಕ ಗಳಿಸಿಕೊಂಡು ಮೊದಲ ಸ್ಥಾನ ಪಡೆದರು. ಮಂಜು ಹಾಗೂ ದಿವ್ಯಾ ಉರುಡುಗ ಎರಡನೇ ಸ್ಥಾನ ಅಲಂಕರಿಸಿದ್ದಾರೆ. ವೈಷ್ಣವಿ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಈ ಟಾಸ್ಕ್​ನಲ್ಲಿ ಮೊದಲ ಸ್ಥಾನ ಪಡೆದ ಅರವಿಂದ್​ಗೆ ಎರಡು ಲಕ್ಷ ರೂಪಾಯಿ ಬಹುಮಾನ ಮೊತ್ತ ಸಿಕ್ಕಿದೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

Published On - 4:10 pm, Sat, 7 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್