AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಕಿರುತೆರೆ ನಟಿಗೆ ‘ಆರ್​​ ಯೂ ಎ ವರ್ಜಿನ್?’ ಎಂದು ಕೇಳಿದ ಫ್ಯಾನ್​; ಎಲ್ಲರ ಎದುರು ಮಾನ ಕಳೆದ ಹೀರೋಯಿನ್

ಮಲಯಾಳಂ ಕಿರುತೆರೆ ನಟಿ ಅಥಿರಾ ಮಾಧವ್​ ಅವರು ಇತ್ತೀಚೆಗೆ ರಾಜೀವ್​ ಎಂಬುವವರನ್ನು ಮದುವೆ ಆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ.

ವಿವಾಹಿತ ಕಿರುತೆರೆ ನಟಿಗೆ ‘ಆರ್​​ ಯೂ ಎ ವರ್ಜಿನ್?’ ಎಂದು ಕೇಳಿದ ಫ್ಯಾನ್​; ಎಲ್ಲರ ಎದುರು ಮಾನ ಕಳೆದ ಹೀರೋಯಿನ್
ಪತಿ ರಾಜೀವ್​ ಜತೆ ಅಥಿರಾ ಮಾಧವ್​
TV9 Web
| Edited By: |

Updated on:Sep 30, 2021 | 8:15 PM

Share

ನಟನಾ ಲೋಕಕ್ಕೆ ಕಾಲಿಟ್ಟ ನಂತರದಲ್ಲಿ ಸೆಲೆಬ್ರಿಟಿಗಳಿಗೆ ಖಾಸಗಿತನ ಸಿಗುವುದಿಲ್ಲ. ಪಬ್ಲಿಕ್​ನಲ್ಲಿ ಕಾಣಿಸಿಕೊಂಡರೆ ಜನ ಅವರನ್ನು ಮುತ್ತಿಕೊಳ್ಳುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚಾಗುತ್ತದೆ. ಇದರ ಜತೆಗೆ ಅವರಿಗೆ ಎದುರಾಗುವ ಪ್ರಶ್ನೆಗಳು ಕೂಡ ಚಿತ್ರ ವಿಚಿತ್ರವಾಗಿರುತ್ತದೆ. ಕೆಲವೊಮ್ಮೆ ಮುಜುಗರಕ್ಕೆ ಒಳಗಾಗುವಂತ ಪ್ರಶ್ನೆಗಳು ಕೂಡ ಅಭಿಮಾನಿಗಳಿಂದ ತೂರಿ ಬರುತ್ತದೆ. ಬಹುತೇಕ ಸಂದರ್ಭದಲ್ಲಿ ಇದನ್ನು ಸೆಲೆಬ್ರಿಟಿಗಳು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ, ಮಲಯಾಳಂನ ಕಿರುತೆರೆ ನಟಿ ಈ ರೀತಿ ಮಾಡಿಲ್ಲ. ಆರ್​ ಯೂ ಎ ವರ್ಜಿನ್​ ಎಂದು ಕೇಳಿದ ಅಭಿಮಾನಿಗೆ ನೀರಿಳಿಸಿದ್ದಾರೆ.

ಮಲಯಾಳಂ ಕಿರುತೆರೆ ನಟಿ ಅಥಿರಾ ಮಾಧವ್​ ಅವರು ಇತ್ತೀಚೆಗೆ ರಾಜೀವ್​ ಎಂಬುವವರನ್ನು ಮದುವೆ ಆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ. ಇದಾದ ನಂತರ ಅವರು ಇನ್​ಸ್ಟ್ರಾಗ್ರಾಮ್​ನಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋಕೆ ಮುಂದಾಗಿದ್ದರು. ಈ ಕಾರಣಕ್ಕೆ ಆಸ್ಕ್​ ಮಿ ಎನಿಥಿಂಗ್​ ಸೆಶನ್​ ಪ್ರಾರಂಭಿಸಿದ್ದರು. ಅವರ ಮದುವೆ ಜೀವನ ಹೇಗಿದೆ? ಅವರ ಪತಿ ಹೇಗಿದ್ದಾರೆ? ಸದ್ಯ ಏನು ಮಾಡುತ್ತಿದ್ದೀರಿ? ಮುಂದಿನ ಪ್ರಾಜೆಕ್ಟ್​ಗಳು ಏನು ಎಂಬಿತ್ಯಾದಿ ಪ್ರಶ್ನೆಗಳು ಅವರಿಗೆ ಕೇಳಲಾಗಿತ್ತು. ಇದಕ್ಕೆ ಅವರು ಉತ್ತರಿಸಿದ್ದರು.

ಇದೇ ವೇಳೆ ‘ಆರ್​ ಯೂ ಎ ವರ್ಜಿನ್​’ ಎನ್ನುವ ಪ್ರಶ್ನೆಯನ್ನು ಅಥಿರಾಗೆ ಅಭಿಮಾನಿ ಕೇಳಿದ್ದ. ಇದಕ್ಕೆ ಅವರ ಕಡೆಯಿಂದ ಖಡಕ್​ ಉತ್ತರ ಬಂದಿದೆ. ‘ಈ ರೀತಿಯ ಪ್ರಶ್ನೆ ಕೇಳುವುದರಿಂದ ನಿಮಗೆ ಯಾವ ರೀತಿಯ ಸಂತಸ ಸಿಗುತ್ತದೆ? ಈ ಬಗ್ಗೆ ನಿಮ್ಮ ಕುಟುಂಬವನ್ನು ಕೇಳಿ. ಈ ರೀತಿಯ ಪ್ರಶ್ನೆಗಳನ್ನು ತಡೆಯೋಕೆ ನಾನೇನು ಮಾಡಬೇಕು’ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇಷ್ಟಕ್ಕೇ ನಿಂತಿಲ್ಲ. ಪ್ರಶ್ನೆ ಮಾಡಿದ ವ್ಯಕ್ತಿಯನ್ನು ಕೂಡ ಅವರು ಟ್ಯಾಗ್​ ಮಾಡಿದ್ದಾರೆ. ಈ ಮೂಲಕ ಸಾರ್ವಜನಿಕವಾಗಿ ಮಾನ ಹರಾಜು ಹಾಕಿದ್ದಾರೆ.

ಇದನ್ನೂ ಓದಿ: ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ 

ಆತ್ಮಹತ್ಯೆ ಮಾಡಿಕೊಂಡ ನಟಿ ಸವಿ ಮಾದಪ್ಪ ಡೆತ್​ ನೋಟ್​ ಪತ್ತೆ; ಎಲ್ಲರಲ್ಲೂ ಕ್ಷಮೆ ಕೇಳಿದ್ದೇಕೆ?

Published On - 6:00 pm, Thu, 30 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!