AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ ಮ್ಯೂಸಿಕಲ್​ ನೈಟ್ಸ್​ನ ಉಚಿತವಾಗಿ ನೋಡೋ ಅವಕಾಶ; ಎಲ್ಲಿ, ಯಾವಾಗ?

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ‘ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ಉಚಿತವಾಗಿ ನೋಡುವ ಅವಾಕಾಶ ಸಿಕ್ಕಿದೆ. ಜಸ್ಕರಣ್ ಸಿಂಗ್ ಸೇರಿದಂತೆ ಅನೇಕ ಪ್ರತಿಭಾವಂತ ಗಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕೊಳ್ಳೇಗಾಲದಲ್ಲಿ ಚಿತ್ರೀಕರಿಸಲಾದ ಈ ಕಾರ್ಯಕ್ರಮವು ಸಂಗೀತ ಪ್ರಿಯರಿಗೆ ಖುಷಿ ಕೊಡಲಿದೆ.

ಅರ್ಜುನ್ ಜನ್ಯ ಮ್ಯೂಸಿಕಲ್​ ನೈಟ್ಸ್​ನ ಉಚಿತವಾಗಿ ನೋಡೋ ಅವಕಾಶ; ಎಲ್ಲಿ, ಯಾವಾಗ?
ಅರ್ಜುನ್ ಜನ್ಯ ಮ್ಯೂಸಿಕಲ್​ ನೈಟ್ಸ್​ನ ಉಚಿತವಾಗಿ ನೋಡೋ ಅವಕಾಶ; ಎಲ್ಲಿ, ಯಾವಾಗ?
ರಾಜೇಶ್ ದುಗ್ಗುಮನೆ
|

Updated on:Feb 26, 2025 | 7:35 AM

Share

ಖ್ಯಾತ ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಅನೇಕ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ. ಜಸ್ಕರಣ್ ಸಿಂಗ್ ಬಳಿ ‘ದ್ವಾಪರ..’ ಹಾಡನ್ನು ಹಾಡಿಸಿ ಅವರನ್ನು ಸ್ಟಾರ್ ಆಗಿ ಮಾಡಿದರು. ಈ ರೀತಿ ಅನೇಕ ಗಾಯಕರಿಗೆ ಅವಕಾಶಗಳನ್ನು ಅರ್ಜುನ್ ಜನ್ಯ ನೀಡಿದ್ದಾರೆ. ಈಗ ಅವರು ಮ್ಯೂಸಿಕಲ್​ನೈಟ್ ಮಾಡಿದ್ದಾರೆ. ಇದನ್ನು ಉಚಿತವಾಗಿ ನೋಡುವ ಅವಕಾಶವನ್ನು ಜೀ ಕನ್ನಡ ಕಲ್ಪಿಸಿದೆ. ಈ ಬಗ್ಗೆ ಪ್ರೋಮೋನ ವಾಹಿನಿ ಹಂಚಿಕೊಂಡಿದೆ.

ಕೊಳ್ಳೆಗಾಲದಲ್ಲಿ ‘ಅರ್ಜುನ್ ಜನ್ಯ ಮ್ಯೂಸಿಕಲ್ ನೈಟ್ಸ್’ ನಡೆದಿದೆ. ಇದನ್ನು ಶೂಟ್ ಮಾಡಿ ಇಟ್ಟುಕೊಳ್ಳಲಾಗಿದ್ದು, ಮಾರ್ಚ್ 9ರಂದು ಪ್ರಸಾರ ಕಾಣಲಿದೆ. ಮಧ್ಯಾಹ್ನ 3 ಗಂಟೆಗೆ ಈ ಕಾರ್ಯಕ್ರಮದ ಪ್ರಸಾರ ಆರಂಭ ಆಗಲಿದೆ. ಮನೆಯಲ್ಲೇ ಇದ್ದು ಕೊಂಡು ಮ್ಯೂಸಿಕಲ್ ನೈಟ್​ನ ಎಂಜಾಯ್ ಮಾಡಬಹುದು. ಅದೂ ಉಚಿತವಾಗಿ ಅನ್ನೋದು ವಿಶೇಷ.

ಅರ್ಜುನ್ ಜನ್ಯ ಅವರು ಹಾಡುವುದರ ಮೂಲಕ ಎಲ್ಲರನ್ನೂ ರಂಜಿಸಲಿದ್ದಾರೆ. ಅಲ್ಲದೆ ಜಸ್ಕರಣ್ ಮೊದಲಾದ ಖ್ಯಾತ ಗಾಯಕರು ಕೂಡ ಈ ಕಾನ್ಸರ್ಟ್​​ನಲ್ಲಿ ಭಾಗಿ ಆಗಿದ್ದಾರೆ. ಈ ಮೂಲಕ ಸಂಗೀತ ರಸಸಂಜೆ ಉಣಿಸಲು ಜೀ ವಾಹಿನಿ ಸಿದ್ಧವಾಗಿದೆ.

View this post on Instagram

A post shared by Zee Kannada (@zeekannada)

ಸದ್ಯ ಜೀ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಇದಕ್ಕೆ ‘ಮ್ಯಾಜಿಕಲ್‌ ಕಂಪೋಸರ್ ಸಾರಥ್ಯದಲ್ಲಿ ಕೊಳ್ಳೇಗಾಲದಲ್ಲಿ ಮನರಂಜನೆಯ ಸಂಭ್ರಮ ತಂದ ಮನಸೆಳೆಯೋ ಹಾಡುಗಳ ಹಬ್ಬ. ಅರ್ಜುನ್ ಜನ್ಯ ಮ್ಯೂಸಿಕಲ್ ನೈಟ್ಸ್. ಮಾರ್ಚ್ 9ಕ್ಕೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: ಸುದೀಪ್ ಸಿಕ್ಕ ಮೇಲೆ ಬದುಕು ಬದಲಾಯಿತು; ಅರ್ಜುನ್ ಜನ್ಯ ಹೇಳಿದ ಅಪರೂಪದ ವಿಚಾರ

ಸಿನಿಮಾ ವಿಚಾರಕ್ಕೆ ಬರೋದಾದರೆ ಅರ್ಜುನ್ ಜನ್ಯ ಅವರು ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡುವುದರಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ‘ಸರಿಗಮಪ’ ರಿಯಾಲಿಟಿ ಶೋನಲ್ಲಿ ಜಡ್ಜ್​ ಆಗಿಯೂ ಕಾಣಿಸಿಕೊಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ‘45’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಉಪೇಂದ್ರ, ಶಿವರಾಜ್​ಕುಮಾರ್ ಹಾಗೂ ರಾಜ್ ಬಿ ಶೆಟ್ಟಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ರಿಲೀಸ್ ಡೇಟ್ ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:34 am, Wed, 26 February 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು