AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arjun Sarja Remuneration: ‘ದಳಪತಿ 67’ನೇ ಚಿತ್ರಕ್ಕೆ ಅರ್ಜುನ್ ಸರ್ಜಾ, ದಳಪತಿ ವಿಜಯ್ ಪಡೆದ ಸಂಭಾವನೆ ಇಷ್ಟೊಂದಾ?

ದಳಪತಿ 67ನೇ ಸಿನಿಮಾದಲ್ಲಿ ದೊಡ್ಡ ತಾರಾ ಬಳಗ ಇದೆ. ಸಂಜಯ್ ದತ್​, ಗೌತಮ್​ ಮೆನನ್, ನಿವಿನ್ ಪೌಳಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಕೂಡ ಇದ್ದಾರೆ.

Arjun Sarja Remuneration: ‘ದಳಪತಿ 67’ನೇ ಚಿತ್ರಕ್ಕೆ ಅರ್ಜುನ್ ಸರ್ಜಾ, ದಳಪತಿ ವಿಜಯ್ ಪಡೆದ ಸಂಭಾವನೆ ಇಷ್ಟೊಂದಾ?
ವಿಜಯ್-ಅರ್ಜುನ್ ಸರ್ಜಾ
TV9 Web
| Edited By: |

Updated on: Dec 26, 2022 | 11:04 AM

Share

‘ವಾರಿಸು’ ಸಿನಿಮಾ (Varisu Movie) ರಿಲೀಸ್​ಗೆ ರೆಡಿ ಇದೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧಗೊಂಡ ಈ ಸಿನಿಮಾ ಜನವರಿ 12ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ದಳಪತಿ ವಿಜಯ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ. ಇದಾದ ಬಳಿಕ ದಳಪತಿ ವಿಜಯ್ (Thalapathy VIjay) ‘ದಳಪತಿ 67’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರದಲ್ಲಿ ಅರ್ಜುನ್ ಸರ್ಜಾ ವಿಲನ್ ರೋಲ್ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ದಳಪತಿ 67ನೇ ಸಿನಿಮಾದಲ್ಲಿ ದೊಡ್ಡ ತಾರಾ ಬಳಗ ಇದೆ. ಸಂಜಯ್ ದತ್​, ಗೌತಮ್​ ಮೆನನ್, ನಿವಿನ್ ಪೌಳಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಕೂಡ ಇದ್ದಾರೆ. ಈ ಚಿತ್ರಕ್ಕಾಗಿ ಅವರು  4.5-5 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಸಂಜಯ್ ದತ್ ಅವರು ಈ ಚಿತ್ರಕ್ಕಾಗಿ 10 ಕೋಟಿ ರೂ. ಚಾರ್ಜ್ ಮಾಡಿದ್ದಾರೆ. ದಳಪತಿ ವಿಜಯ್ ಅವರು ಈ ಸಿನಿಮಾಗಾಗಿ 120 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಜನವರಿ ವೇಳೆ ಸಿನಿಮಾ ಸೆಟ್ಟೇರಲಿದೆ. ಚೆನ್ನೈನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯಲಿದೆ. ಪ್ರಮುಖ ಭಾಗದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯಲಿದೆ. ‘ದಳಪತಿ 67’ ಬಜೆಟ್ 200 ಕೋಟಿ ರೂಪಾಯಿ ಮೀರಿದೆ ಎನ್ನಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. 2023ರಲ್ಲೇ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ವಾರಿಸು’ ಸಿನಿಮಾದ ಪ್ರಚಾರದಲ್ಲಿ ದಳಪತಿ ವಿಜಯ್ ಬ್ಯುಸಿ ಆಗಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿದೆ. ಅವುಗಳ ಜತೆ ‘ವಾರಿಸು’ ಸಿನಿಮಾ ಸ್ಪರ್ಧೆ ಮಾಡಬೇಕಿದೆ. ಈ ಮೊದಲು ತೆರೆಗೆ ಬಂದ ‘ಬೀಸ್ಟ್’ ಸಿನಿಮಾ ‘ಕೆಜಿಎಫ್ 2’ ಚಿತ್ರದ ಎದುರು ಸೋತಿತ್ತು. ಈ ಕಾರಣಕ್ಕೆ ಅವರು ಗೆಲುವು ಕಾಣಲೇಬೇಕಿದೆ. ‘ವಾರಿಸು’ ಸಿನಿಮಾ ತೆರೆಗೆ ಬಂದ ನಂತರದಲ್ಲಿ 67ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್