AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ವಂಚನೆ; ಬಿಗ್​ ಬಾಸ್​ ಸ್ಪರ್ಧಿಗೆ ಬಂಧನ ಭೀತಿ

ಈ ಪ್ರಕರಣಕ್ಕೆ ಸಂಬಂಧಿಸಿ ಆಯೋಜಕರಾದ ಜುನಾಯಿದ್​ ಅಹ್ಮದ್​, ನವೀನ್​ ಶರ್ಮಾ, ಇವಾದ್​ ಅಲಿ, ಅಮಿತ್​ ಪಾಂಡೆ, ರತ್ನಾಕರ್​ ಉಪಾಧ್ಯಾಯ್​ ಹಾಗೂ ಸಪ್ನಾ ಚೌಧರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಅಭಿಮಾನಿಗಳಿಗೆ ವಂಚನೆ; ಬಿಗ್​ ಬಾಸ್​ ಸ್ಪರ್ಧಿಗೆ ಬಂಧನ ಭೀತಿ
ಸಪ್ನಾ ಚೌಧರಿ
TV9 Web
| Edited By: |

Updated on: Nov 20, 2021 | 3:40 PM

Share

ಹಿಂದಿ ಬಿಗ್ ಬಾಸ್​ 11ನೇ (Bigg Boss Hindi 11) ಸೀಸನ್​ ಮೂಲಕ ಹೆಚ್ಚು ಖ್ಯಾತಿ ಗಳಿಸಿಕೊಂಡವರು ಸಪ್ನಾ ಚೌಧರಿ (Sapna Choudhary). ಇವರು ಗಾಯನ ಹಾಗೂ ನೃತ್ಯದಲ್ಲಿ ಪಳಗಿದ್ದಾರೆ. ಈಗ ಅವರು ಸಮಸ್ಯೆ ಒಂದರಲ್ಲಿ ಸಿಲುಕಿದ್ದಾರೆ. ಮೂರು ವರ್ಷದ ಹಿಂದಿನ ಕೇಸ್​ನಲ್ಲಿ ಅವರ ವಿರುದ್ಧ ಅರೆಸ್ಟ್​ ವಾರೆಂಟ್​ ಜಾರಿ ಆಗಿದೆ. ಹೀಗಾಗಿ, ಅವರಿಗೆ ಬಂಧನ ಭೀತಿ ಎದುರಾಗಿದೆ. ಲಖನೌನ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅವರನ್ನು ಬಂಧಿಸಿ ತರುವಂತೆ ನ್ಯಾಯಾಧೀಶರು ಹೇಳಿದ್ದಾರೆ. ಹಾಗಾದರೆ ಏನು ಈ ಪ್ರಕರಣ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಮೂರು ವರ್ಷದ ಹಿಂದಿನ ಘಟನೆ. 2018ರ ಅಕ್ಟೋಬರ್​ 13ರದು ಸಪ್ನಾ ಅವರು ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್​ ಮಾಡಬೇಕಿತ್ತು. ಈ ಕಾರ್ಯಕ್ರಮಕ್ಕೆ 300 ರೂಪಾಯಿ ಟಿಕೆಟ್​ ಫಿಕ್ಸ್​ ಮಾಡಲಾಗಿತ್ತು. ಮಧ್ಯಾಹ್ನ 3 ಗಂಟೆಯಿಂದ ಸಂಜೆ 10 ಗಂಟೆ ಅವಧಿಯಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಸಪ್ನಾ ಡ್ಯಾನ್ಸ್​ ಮಾಡುತ್ತಾರೆ ಎನ್ನುವ ಕಾರಣಕ್ಕೆ ಅನೇಕರು ಆಗಮಿಸಿದ್ದರು. ಆದರೆ, ಅವರು ವೇದಿಕೆ ಏರಲೇ ಇಲ್ಲ. ಈ ಕಾರಣಕ್ಕೆ ಅಭಿಮಾನಿಗಳು ಸಿಟ್ಟಿಗೆದ್ದು ಗಲಾಟೆ ಮಾಡಿದ್ದರು. ಅಲ್ಲದೆ, ಟಿಕೆಟ್ ಹಣವನ್ನು ಹಿಂದಿರುಗಿಸುವಂತೆ ಅಭಿಮಾನಿಗಳು ಕೋರಿದ್ದರು. ಆದರೆ, ಇದಕ್ಕೆ ಆಯೋಜಕರು ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ಆಯೋಜಕರಾದ ಜುನಾಯಿದ್​ ಅಹ್ಮದ್​, ನವೀನ್​ ಶರ್ಮಾ, ಇವಾದ್​ ಅಲಿ, ಅಮಿತ್​ ಪಾಂಡೆ, ರತ್ನಾಕರ್​ ಉಪಾಧ್ಯಾಯ್​ ಹಾಗೂ ಸಪ್ನಾ ಚೌಧರಿ ವಿರುದ್ಧ ಪ್ರಕರಣ ದಾಖಲಾಗಿದೆ.  ಸಪ್ನಾ ಅವರು ಪ್ರಕರಣವನ್ನು ಖುಲಾಸೆ ಮಾಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಕೋರ್ಟ್​ ಇದನ್ನು ನಿರಾಕರಿಸಿದೆ. ಪ್ರಕರಣದ ಮುಂದಿನ ವಿಚಾರಣೆ ನವೆಂಬರ್​ 22ಕ್ಕೆ ನಡೆಯಲಿದೆ.

ಸಪ್ನಾ ಹರಿಯಾಣ ಮೂಲದವರು. ಅವರು ವೃತ್ತಿಯಲ್ಲಿ ಡ್ಯಾನ್ಸರ್​ ಹಾಗೂ ನಟಿ. ಬಿಗ್​ ಬಾಸ್​ 11ರ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಈಗ ಅವರಿಗೆ ಬಂಧನ ಭೀತಿ ಎದುರಾಗಿದೆ. ನವೆಂಬರ್​ 22ರಂದು ಸಪ್ನಾ ಕೋರ್ಟ್​ ಮುಂದೆ ಹಾಜರಾಗುತ್ತಾರಾ ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಚಾಕು ಹಿಡಿದು ಹತ್ಯೆ ಮಾಡಿಕೊಳ್ಳಲು ಮುಂದಾದ ಸ್ಪರ್ಧಿ; ವಾಹಿನಿಯಿಂದ ಮಹತ್ವದ ನಿರ್ಧಾರ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್