ಕಿಚ್ಚನ ಎದುರು ಕಣ್ಣೀರು ಹಾಕಿದ ಅರುಣ್ ಸಾಗರ್​; ಇದಕ್ಕೆ ಕಾರಣ ರೂಪೇಶ್ ಶೆಟ್ಟಿ ತಂದೆ

ವೀಕೆಂಡ್ ಬಂದಿದೆ. ಸುದೀಪ್ ಅವರು ವಾರಾಂತ್ಯದ ಎಪಿಸೋಡ್​ ನಡೆಸಿಕೊಟ್ಟಿದ್ದಾರೆ. ಈ ವೇಳೆ ಅವರು ಒಂದು ಪ್ರಶ್ನೆ ಕೇಳಿದ್ದಾರೆ. ‘ಸ್ಪರ್ಧಿಗಳ ಕುಟುಂಬದವರು ಬಂದು ಹೋದರು. ಈ ಪೈಕಿ ಯಾರು ಆ ಕ್ಷಣವನ್ನು ಬಾಳಿ ಬದುಕಿದರು’ ಎಂದು ಕೇಳಿದ್ದಾರೆ ಸುದೀಪ್.

ಕಿಚ್ಚನ ಎದುರು ಕಣ್ಣೀರು ಹಾಕಿದ ಅರುಣ್ ಸಾಗರ್​; ಇದಕ್ಕೆ ಕಾರಣ ರೂಪೇಶ್ ಶೆಟ್ಟಿ ತಂದೆ
ಅರುಣ್ ಸಾಗರ್-ಸುದೀಪ್
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 03, 2022 | 6:09 PM

ಅರುಣ್ ಸಾಗರ್ (Arun Sagar) ಅವರು ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಮನರಂಜನೆಯಲ್ಲಿ ಎತ್ತಿದ ಕೈ. ಅಷ್ಟೇ ಅಲ್ಲ, ತಪ್ಪಾದಾಗ ಖಂಡಿಸಿ ಅದನ್ನು ಎಲ್ಲರ ಎದುರು ನೇರವಾಗಿ ಮುಖಕ್ಕೆ ಹೊಡೆದಂತೆ ಹೇಳುತ್ತಾರೆ. ಈ ಕಾರಣಕ್ಕೆ ಅನೇಕರಿಗೆ ಅವರು ಇಷ್ಟವಾಗುತ್ತಾರೆ. ಅರುಣ್ ಸಾಗರ್​ ಅವರು ಈಗ ಕಿಚ್ಚ ಸುದೀಪ್ (Kichcha Sudeep) ಎದುರು ಕಣ್ಣಿರು ಹಾಕಿದ್ದಾರೆ. ಇದಕ್ಕೆ ಕಾರಣ ರೂಪೇಶ್ ಶೆಟ್ಟಿ. ಅಷ್ಟಕ್ಕೂ ಆಗಿದ್ದೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಈ ವಾರ ಬಿಗ್ ಬಾಸ್ ಮಂದಿಗೆ ವಿಶೇಷ ಆಗಿತ್ತು. ಇದಕ್ಕೆ ಕಾರಣ ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಬಂದಿದ್ದರು. ಕುಟುಂಬದವರು ಒಂದಷ್ಟು ಸಮಯ ಬಿಗ್ ಬಾಸ್ ಮನೆಯಲ್ಲಿ ಕಳೆದು ಹೋಗಿದ್ದಾರೆ. ಮತ್ತೊಂದು ವಿಶೇಷ ಎಂದರೆ, ಪ್ರತಿ ಸ್ಪರ್ಧಿಯ ಕುಟುಂಬದವರು ಬಂದಾಗಲೂ ಇತರ ಸ್ಪರ್ಧಿಗಳೂ ಖುಷಿ ಪಟ್ಟಿದ್ದಾರೆ. ಇತರ ಸ್ಪರ್ಧಿಗಳ ಕುಟುಂಬ ಸದಸ್ಯರಲ್ಲಿ ತಮ್ಮ ಕುಟುಂಬದವರನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಾರಿ ರೂಪೇಶ್ ಶೆಟ್ಟಿ ಅವರ ತಂದೆ ಬಂದಿದ್ದರು. ಅರುಣ್ ಸಾಗರ್ ಅವರು ರೂಪೇಶ್ ತಂದೆಯಲ್ಲಿ ತಮ್ಮ ತಂದೆಯನ್ನು ಕಂಡಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ಎದುರು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.

ವೀಕೆಂಡ್ ಬಂದಿದೆ. ಸುದೀಪ್ ಅವರು ವಾರಾಂತ್ಯದ ಎಪಿಸೋಡ್​ ನಡೆಸಿಕೊಟ್ಟಿದ್ದಾರೆ. ಈ ವೇಳೆ ಅವರು ಒಂದು ಪ್ರಶ್ನೆ ಕೇಳಿದ್ದಾರೆ. ‘ಸ್ಪರ್ಧಿಗಳ ಕುಟುಂಬದವರು ಬಂದು ಹೋದರು. ಈ ಪೈಕಿ ಯಾರು ಆ ಕ್ಷಣವನ್ನು ಬಾಳಿ ಬದುಕಿದರು’ ಎಂದು ಕೇಳಿದ್ದಾರೆ ಸುದೀಪ್. ಇದಕ್ಕೆ ಉತ್ತರಿಸಿದ ರೂಪೇಶ್ ರಾಜಣ್ಣ ಅವರು, ‘ಅರುಣ್ ಸಾಗರ್ ಅವರ ಪತ್ನಿ ಶೇ.95 ಸಮಯ ಅವರ ಹೆಗಲಮೇಲೆ ಕಳೆದಿದ್ದಾರೆ’ ಎಂದರು.

ಇದನ್ನೂ ಓದಿ: ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್  

ಅರುಣ್ ಸಾಗರ್ ಅವರು ತಮ್ಮ ಅನುಭವ ಹೇಳುವಾಗ ಭಾವುಕರಾದರು. ‘ನಾನು ನನ್ನ ತಂದೆಯನ್ನು ಐದೂವರೆ ವರ್ಷದವನಿದ್ದಾಗ ಕಳೆದುಕೊಂಡಿದ್ದೆ. ರೂಪೇಶ್ ತಂದೆ ಬಂದಾಗ ನನ್ನ ತಂದೆ ತುಂಬಾನೇ ನೆನಪಾಯ್ತು. ತಂದೆ ಪ್ರೀತಿ ಅನ್ನೋದು ತುಂಬಾನೇ ಮುಖ್ಯ. ನಾನು ರೂಪೇಶ್ ರಾಜಣ್ಣ ಅವರ ತಂದೆಯಲ್ಲಿ ನನ್ನ ತಂದೆಯನ್ನು ಕಂಡೆ’ ಎಂದಿದ್ದಾರೆ ಅರುಣ್ ಸಾಗರ್. ಇದನ್ನು ಹೇಳುವಾಗ ಅವರು ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:06 pm, Sat, 3 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ