AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾರಿ, ಸಾರಿ, ಸಾರಿ’; ಸುದೀಪ್ ಹಾಗೂ ಫ್ಯಾನ್ಸ್ ಬಳಿ ಆರ್ಯವರ್ಧನ್ ಗುರೂಜಿ ಬಹಿರಂಗ ಕ್ಷಮೆ

ಆರ್ಯವರ್ಧನ್ ಗುರೂಜಿ ಸುದೀಪ್ ಮತ್ತು ಬಿಗ್ ಬಾಸ್ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಗಳಿಗೆ ಕ್ಷಮೆ ಕೇಳಿದ್ದಾರೆ. ಅಭಿಮಾನಿಗಳಿಂದ ತೀವ್ರ ವಿರೋಧ ಎದುರಿಸಿದ ನಂತರ, ಗುರೂಜಿ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. "ಮಾತನಾಡುವ ಭರದಲ್ಲಿ ಹೇಳಿದ್ದೇನೆ, ನೋವಾಗಿದ್ದರೆ ಕ್ಷಮಿಸಿ" ಎಂದು ಸುದೀಪ್ ಮತ್ತು ಅವರ ಅಭಿಮಾನಿಗಳಿಗೆ ಆರ್ಯವರ್ಧನ್ ಗುರೂಜಿ ಮನವಿ ಮಾಡಿದ್ದಾರೆ.

‘ಸಾರಿ, ಸಾರಿ, ಸಾರಿ’; ಸುದೀಪ್ ಹಾಗೂ ಫ್ಯಾನ್ಸ್ ಬಳಿ ಆರ್ಯವರ್ಧನ್ ಗುರೂಜಿ ಬಹಿರಂಗ ಕ್ಷಮೆ
ಆರ್ಯವರ್ಧನ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 03, 2026 | 1:10 PM

Share

‘ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು’ ಎಂದು ಫೇಮಸ್ ಆದವರು ಆರ್ಯವರ್ಧನ್ ಗುರೂಜಿ (Aryavardhan Guruji). ತಾವು ಸಂಖ್ಯಾ ಶಾಸ್ತ್ರಜ್ಞ ಎಂದು ಅವರು ಘೋಷಿಸಿಕೊಂಡಿದ್ದಾರೆ. ಅವರು ಅನೇಕ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ಮೊದಲು ಬಿಗ್ ಬಾಸ್​​ಗೂ ಬಂದಿದ್ದರು. ಈಗ ಅವರು ಸುದೀಪ್ ಬಳಿ ಕ್ಷಮೆ ಕೇಳಿದ್ದಾರೆ. ಸುದೀಪ್ ವಿರುದ್ಧ ಆಡಿದ ಮಾತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ತಪ್ಪನ್ನು ತಿದ್ದುಕೊಳ್ಳಲು ಚಾನ್ಸ್ ಕೇಳಿದ್ದಾರೆ.

ಆರ್ಯವರ್ಧನ್ ಯಾವ ಕ್ಷಣದಲ್ಲಿ ಹೇಗಿರುತ್ತಾರೆ ಎಂದು ಊಹಿಸೋದು ನಿಜಕ್ಕೂ ಕಷ್ಟ. ಬಿಗ್ ಬಾಸ್​ ಅಲ್ಲಿ ಸ್ಪರ್ಧಿ ಆಗಿದ್ದಾಗ ಆ ಶೋ ವಿರುದ್ಧವೇ ಗಂಭೀರ ಆರೋಪ ಮಾಡಿದ್ದರು. ‘ಅನುಪಮಾ ಗೌಡ ಅವರನ್ನು ಉಳಿಸಲು ನೀವು ಪ್ರಯತ್ನಿಸುತ್ತಿದ್ದೀರಿ’ ಎಂದು ಸುದೀಪ್ ಎದುರೇ ಹೇಳಿದ್ದರು. ಇದರಿಂದ ಸಿಟ್ಟಾಗಿದ್ದ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದರು.

ಆರ್ಯವರ್ಧನ್ ಮಾತನಾಡಿದ್ದ ವಿಡಿಯೋ

ಬಿಗ್ ಬಾಸ್​ನಿಂದ ಹೊರ ಬಂದ ಅವರು ಅನೇಕ ಬಾರಿ ಶೋ ವಿರುದ್ಧ ಹಾಗು ಸುದೀಪ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು ಇದೆ. ಇದಕ್ಕೆ ಸುದೀಪ್ ವೇದಿಕೆ ಮೇಲೆ ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದರು. ಈಗ ಆರ್ಯವರ್ಧನ್ ಮಾತು ಮತ್ತೂ ಕೆಳಹಂತಕ್ಕೆ ಹೋಗಿತ್ತು. ‘ದರ್ಶನ್ ಹೋದ್ಮೇಲೆ ಸುದೀಪ್ ಎಗರಾಡುತ್ತಿದ್ದಾರೆ’ ಎಂದು ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಆರ್ಯವರ್ಧನ್​​ಗೆ ಸುದೀಪ್ ಅಭಿಮಾನಿಗಳಿಗೆ ಸ್ಟ್ರಾಂಗ್ ಆಗಿಯೇ ಎಚ್ಚರಿಕೆ ಬಂದಿತ್ತು. ದುನಿಯಾ ವಿಜಯ್ ಅವರ ವಾರ್ನಿಂಗ್ ವಿಡಿಯೋ ಎಡಿಟ್ ಮಾಡಿ ಹರಿಬಿಡಲಾಗಿತ್ತು.

ಆರ್ಯವರ್ಧನ್ ಕ್ಷಮೆ ಕೇಳಿದ ವಿಡಿಯೋ

ಫ್ಯಾನ್ಸ್ ಆಕ್ರೋಶದ ಬಳಿಕ ಆರ್ಯವರ್ಧನ್ ಕ್ಷಮೆ ಕೇಳಿದ್ದಾರೆ. ‘ಸುದೀಪ್ ಅವರಿಗೆ ನಮಸ್ಕಾರ. ಅವರ ಜೊತೆ ಕೆಲಸ ಮಾಡಿದ್ದೇನೆ. ಹೊಸ ವರ್ಷ ಅವರಿಗೆ ಹಾಗೂ ಅಭಿಮಾನಿಗಳಿಗೆ ಒಳ್ಳೆದು ಮಾಡಲಿ’ ಎಂದು ಮಾತು ಆರಂಭಿಸಿದ್ದಾರೆ.

ಇದನ್ನೂ ಓದಿ: ‘ಹೊರಗೆ ಹೋದ್ಮೇಲೆ ನಮಗೆ ಇಡ್ತಾರೆ’; ವೇದಿಕೆ ಮೇಲೆ ಆರ್ಯವರ್ಧನ್​​ಗೆ ಸುದೀಪ್ ತಿರುಗೇಟು

‘ಮಾತನಾಡುವ ಭರದಲ್ಲಿ ಏನೋ ಹೇಳಿದ್ದೇನೆ. ನೋವಾಗಿದ್ದರೆ ಅವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ. ಅವರ ಮೇಲೆ ಅಪಾರ ನಂಬಿಕೆ ಇದೆ. ಸಾರಿ ಸಾರಿ ಸಾರಿ.. ದೇವರು ನಿಮ್ಮನ್ನು ಹಾಗೂ ನಿಮ್ಮ ಕುಟುಂಬವನ್ನು ಚೆನ್ನಾಗಿ ಇಟ್ಟಿರಲಿ. ಅವರ ಅಭಿಮಾನಿಗಳಿಗೂ ಒಳ್ಳೆಯದಾಗಲಿ’ ಎಂದು ಆರ್ಯವರ್ಧನ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:03 pm, Sat, 3 January 26

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು