AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಉತ್ತಮ, ಕಿಚ್ಚನ ಚಪ್ಪಾಳೆ, ಕ್ಯಾಪ್ಟನ್​ ಪಟ್ಟ ದಿವ್ಯಾಗೆ ಸಿಕ್ಕಿಲ್ಲ; ಆದ್ರೂ ಫಿನಾಲೆಗೆ ಹೇಗೆ ಬಂದ್ರು?’: ಗುರೂಜಿ ಪ್ರಶ್ನೆ

Aryavardhan Guruji | BBK 9: ಮಿಡ್​ ವೀಕ್​ ಎಲಿಮಿನೇಷನ್​ನಲ್ಲಿ ಆರ್ಯವರ್ಧನ್​ ಗುರೂಜಿ ಅವರು ದೊಡ್ಮನೆಯಿಂದ ಹೊರಗೆ ಬರಬೇಕಾಯಿತು. ಆದರೆ ದಿವ್ಯಾ ಉರುಡುಗ ಸೇಫ್​ ಆಗಿದ್ದರು. ಇದನ್ನು ಈಗ ಗುರೂಜಿ ಪ್ರಶ್ನಿಸಿದ್ದಾರೆ.

Divya Uruduga: ‘ಉತ್ತಮ, ಕಿಚ್ಚನ ಚಪ್ಪಾಳೆ, ಕ್ಯಾಪ್ಟನ್​ ಪಟ್ಟ ದಿವ್ಯಾಗೆ ಸಿಕ್ಕಿಲ್ಲ; ಆದ್ರೂ ಫಿನಾಲೆಗೆ ಹೇಗೆ ಬಂದ್ರು?’: ಗುರೂಜಿ ಪ್ರಶ್ನೆ
ದಿವ್ಯಾ ಉರುಡುಗ, ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on: Dec 31, 2022 | 4:34 PM

Share

100 ದಿನಗಳ ಕಾಲ ನಡೆದ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋಗೆ ಇಂದು (ಡಿ.31) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ರಾಕೇಶ್​ ಅಡಿಗ, ರೂಪೇಶ್​ ಶೆಟ್ಟಿ, ದೀಪಿಕಾ ದಾಸ್​ ಮತ್ತು ರೂಪೇಶ್​ ರಾಜಣ್ಣ ಅವರು ಫಿನಾಲೆ (BBK 9 Finale) ವೇದಿಕೆ ಏರಿದ್ದಾರೆ. 4ನೇ ರನ್ನರ್​ ಅಪ್​ ಆಗಿ ದಿವ್ಯಾ ಉರುಡುಗ (Divya Uruduga) ಶುಕ್ರವಾರದ (ಡಿ.30) ಸಂಚಿಕೆಯಲ್ಲಿ ಔಟ್​ ಆಗಿದ್ದಾರೆ. ಅವರು ಫಿನಾಲೆ ತನಕ ಬಂದಿದ್ದು ಅದೃಷ್ಟದ ಬಲದಿಂದ ಎಂಬುದು ಕೆಲವರ ವಾದ. ಆದರೆ ತಮ್ಮ ಸ್ವಂತ ಪ್ರಯತ್ನದಿಂದಲೇ ಇದೆಲ್ಲ ಸಾಧ್ಯವಾಗಿದೆ ಎಂಬುದು ದಿವ್ಯಾ ಉರುಡುಗ ಅವರ ನಂಬಿಕೆ. ಇದೇ ವಿಚಾರವಾಗಿ ಶುಕ್ರವಾರದ ಎಪಿಸೋಡ್​ನಲ್ಲಿ ಆರ್ಯವರ್ಧನ್​ ಗುರೂಜಿ (Aryavardhan Guruji) ಮತ್ತು ದಿವ್ಯಾ ಉರುಡುಗ ನಡುವೆ ಮಾತಿನ ಚಕಮಕಿ ನಡೆಯಿತು. ಕಿಚ್ಚ ಸುದೀಪ್​ ಎದುರಿನಲ್ಲೇ ಇಬ್ಬರೂ ಮಾತಿಗೆ ಮಾತು ಬೆಳೆಸಿದರು.

ಆರ್ಯವರ್ಧನ್​ ಗುರೂಜಿ ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ವಿಚಾರಗಳಿಗೆ ಹೈಲೈಟ್​ ಆಗಿದ್ದರು. ಟಾಸ್ಕ್​, ಕಾಮಿಡಿ, ಅಡುಗೆ.. ಹೀಗೆ ಅನೇಕ ವಿಚಾರಗಳಲ್ಲಿ ಅವರು ಮನೆಮಂದಿಯ ಫೇವರಿಟ್​ ಆಗಿದ್ದರು. ಕೊನೇ ವಾರದಲ್ಲಿ ಕಿಚ್ಚನ ಚಪ್ಪಾಳೆ ಕೂಡ ಅವರಿಗೆ ಸಿಕ್ಕಿತ್ತು. ಆದರೂ ಕೂಡ ಮಿಡ್​ ವೀಕ್​ ಎಲಿಮಿನೇಷನ್​ನಲ್ಲಿ ಅವರು ದೊಡ್ಮನೆಯಿಂದ ಹೊರಗೆ ಬರಬೇಕಾಯಿತು. ಆದರೆ ದಿವ್ಯಾ ಸೇಫ್​ ಆಗಿ ಫಿನಾಲೆಗೆ ತಲುಪಿದರು. ಇದನ್ನು ಆರ್ಯವರ್ಧನ್​ ಗುರೂಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Aryavardhan Guruji: ಫಿನಾಲೆಗೆ 3 ದಿನ ಇರುವಾಗ ಆರ್ಯವರ್ಧನ್​ ಗುರೂಜಿ ಔಟ್​; ಅಪ್ಪಾಜಿ ಅಂತ ಕಣ್ಣೀರು ಹಾಕಿದ ರೂಪೇಶ್​ ಶೆಟ್ಟಿ

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

‘ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿಲ್ಲ, ಕ್ಯಾಪ್ಟನ್​ ಆಗಿಲ್ಲ, ಉತ್ತಮ ಕೂಡ ಆಗಿಲ್ಲ. ಕಳಪೆಗೂ ಹೋಗಿಲ್ಲ. ಆದರೂ ಅವರು ಫಿನಾಲೆ ವೇದಿಕೆಯಲ್ಲಿ ಇದ್ದಾರೆ. ಎಲ್ಲವೂ ತೆಗೆದುಕೊಂಡ ನಾವು ಇಲ್ಲಿ ಇದ್ದೀವೆ. ಇದು ಹೇಗೆ ಸಾಧ್ಯ’ ಎಂದು ಆರ್ಯವರ್ಧನ್​ ಗುರೂಜಿ ನೇರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: BBK9: ಎಚ್ಚರಿಕೆ ನೀಡಲು ಬಂದ ಬಿಗ್​ ಬಾಸ್​ಗೆ ಆವಾಜ್​ ಹಾಕಿದ ಆರ್ಯವರ್ಧನ್​ ಗುರೂಜಿ; ಕಾದಿದೆ ಗ್ರಹಚಾರ

ದಿವ್ಯಾ ಉರುಡುಗ ಅವರಿಗೆ ಮನೆಯ ಹೊರಗೆ ಸಪೋರ್ಟ್​ ಮಾಡುವವರು ಜಾಸ್ತಿ ಜನ ಇದ್ದರು ಎಂಬುದು ಗುರೂಜಿ ಅಭಿಪ್ರಾಯ. ಅರವಿಂದ್​ ಕೆ.ಪಿ. ಅವರು ದಿವ್ಯಾ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಪ್ರಚಾರ ಮಾಡಿದ್ದಾರೆ. ಆದ್ದರಿಂದ ದಿವ್ಯಾ ಫಿನಾಲೆ ತನಕ ಬರಲು ಸಾಧ್ಯವಾಗಿರಬಹುದು ಎಂದು ಗುರೂಜಿ ಹೇಳಿದ್ದಾರೆ. ಈ ಮಾತನ್ನು ದಿವ್ಯಾ ಸಂಪೂರ್ಣವಾಗಿ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: BBK9: ‘ರಾಕೇಶ್​ ಎಲ್ಲ ಸುಖ ಅನುಭವಿಸ್ತಾನೆ, ಆದ್ರೆ ಅದನ್ನು ಅನುಭವಿಸುವ ಶಕ್ತಿ ನನಗಿಲ್ಲ’: ಆರ್ಯವರ್ಧನ್​

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿಸಿದ್ದ ದಿವ್ಯಾ ಉರುಡುಗ ಅವರು ಆಗಲೂ ಫಿನಾಲೆ ತನಕ ಬಂದು ಔಟ್​ ಆಗಿದ್ದರು. 9ನೇ ಸೀಸನ್​ನಲ್ಲಾದರೂ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅವರ ಕನಸು ಭಗ್ನವಾಯಿತು. ಒಟ್ಟಿನಲ್ಲಿ ಎರಡು ಬಾರಿ ಫಿನಾಲೆ ತಲುಪಿದ ಏಕೈಕ ಸ್ಪರ್ಧಿ ಎಂಬ ದಾಖಲೆ ಅವರ ಹೆಸರಿನಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್