AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಉತ್ತಮ, ಕಿಚ್ಚನ ಚಪ್ಪಾಳೆ, ಕ್ಯಾಪ್ಟನ್​ ಪಟ್ಟ ದಿವ್ಯಾಗೆ ಸಿಕ್ಕಿಲ್ಲ; ಆದ್ರೂ ಫಿನಾಲೆಗೆ ಹೇಗೆ ಬಂದ್ರು?’: ಗುರೂಜಿ ಪ್ರಶ್ನೆ

Aryavardhan Guruji | BBK 9: ಮಿಡ್​ ವೀಕ್​ ಎಲಿಮಿನೇಷನ್​ನಲ್ಲಿ ಆರ್ಯವರ್ಧನ್​ ಗುರೂಜಿ ಅವರು ದೊಡ್ಮನೆಯಿಂದ ಹೊರಗೆ ಬರಬೇಕಾಯಿತು. ಆದರೆ ದಿವ್ಯಾ ಉರುಡುಗ ಸೇಫ್​ ಆಗಿದ್ದರು. ಇದನ್ನು ಈಗ ಗುರೂಜಿ ಪ್ರಶ್ನಿಸಿದ್ದಾರೆ.

Divya Uruduga: ‘ಉತ್ತಮ, ಕಿಚ್ಚನ ಚಪ್ಪಾಳೆ, ಕ್ಯಾಪ್ಟನ್​ ಪಟ್ಟ ದಿವ್ಯಾಗೆ ಸಿಕ್ಕಿಲ್ಲ; ಆದ್ರೂ ಫಿನಾಲೆಗೆ ಹೇಗೆ ಬಂದ್ರು?’: ಗುರೂಜಿ ಪ್ರಶ್ನೆ
ದಿವ್ಯಾ ಉರುಡುಗ, ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on: Dec 31, 2022 | 4:34 PM

Share

100 ದಿನಗಳ ಕಾಲ ನಡೆದ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋಗೆ ಇಂದು (ಡಿ.31) ಅದ್ದೂರಿಯಾಗಿ ಫಿನಾಲೆ ನಡೆಯುತ್ತಿದೆ. ರಾಕೇಶ್​ ಅಡಿಗ, ರೂಪೇಶ್​ ಶೆಟ್ಟಿ, ದೀಪಿಕಾ ದಾಸ್​ ಮತ್ತು ರೂಪೇಶ್​ ರಾಜಣ್ಣ ಅವರು ಫಿನಾಲೆ (BBK 9 Finale) ವೇದಿಕೆ ಏರಿದ್ದಾರೆ. 4ನೇ ರನ್ನರ್​ ಅಪ್​ ಆಗಿ ದಿವ್ಯಾ ಉರುಡುಗ (Divya Uruduga) ಶುಕ್ರವಾರದ (ಡಿ.30) ಸಂಚಿಕೆಯಲ್ಲಿ ಔಟ್​ ಆಗಿದ್ದಾರೆ. ಅವರು ಫಿನಾಲೆ ತನಕ ಬಂದಿದ್ದು ಅದೃಷ್ಟದ ಬಲದಿಂದ ಎಂಬುದು ಕೆಲವರ ವಾದ. ಆದರೆ ತಮ್ಮ ಸ್ವಂತ ಪ್ರಯತ್ನದಿಂದಲೇ ಇದೆಲ್ಲ ಸಾಧ್ಯವಾಗಿದೆ ಎಂಬುದು ದಿವ್ಯಾ ಉರುಡುಗ ಅವರ ನಂಬಿಕೆ. ಇದೇ ವಿಚಾರವಾಗಿ ಶುಕ್ರವಾರದ ಎಪಿಸೋಡ್​ನಲ್ಲಿ ಆರ್ಯವರ್ಧನ್​ ಗುರೂಜಿ (Aryavardhan Guruji) ಮತ್ತು ದಿವ್ಯಾ ಉರುಡುಗ ನಡುವೆ ಮಾತಿನ ಚಕಮಕಿ ನಡೆಯಿತು. ಕಿಚ್ಚ ಸುದೀಪ್​ ಎದುರಿನಲ್ಲೇ ಇಬ್ಬರೂ ಮಾತಿಗೆ ಮಾತು ಬೆಳೆಸಿದರು.

ಆರ್ಯವರ್ಧನ್​ ಗುರೂಜಿ ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ವಿಚಾರಗಳಿಗೆ ಹೈಲೈಟ್​ ಆಗಿದ್ದರು. ಟಾಸ್ಕ್​, ಕಾಮಿಡಿ, ಅಡುಗೆ.. ಹೀಗೆ ಅನೇಕ ವಿಚಾರಗಳಲ್ಲಿ ಅವರು ಮನೆಮಂದಿಯ ಫೇವರಿಟ್​ ಆಗಿದ್ದರು. ಕೊನೇ ವಾರದಲ್ಲಿ ಕಿಚ್ಚನ ಚಪ್ಪಾಳೆ ಕೂಡ ಅವರಿಗೆ ಸಿಕ್ಕಿತ್ತು. ಆದರೂ ಕೂಡ ಮಿಡ್​ ವೀಕ್​ ಎಲಿಮಿನೇಷನ್​ನಲ್ಲಿ ಅವರು ದೊಡ್ಮನೆಯಿಂದ ಹೊರಗೆ ಬರಬೇಕಾಯಿತು. ಆದರೆ ದಿವ್ಯಾ ಸೇಫ್​ ಆಗಿ ಫಿನಾಲೆಗೆ ತಲುಪಿದರು. ಇದನ್ನು ಆರ್ಯವರ್ಧನ್​ ಗುರೂಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Aryavardhan Guruji: ಫಿನಾಲೆಗೆ 3 ದಿನ ಇರುವಾಗ ಆರ್ಯವರ್ಧನ್​ ಗುರೂಜಿ ಔಟ್​; ಅಪ್ಪಾಜಿ ಅಂತ ಕಣ್ಣೀರು ಹಾಕಿದ ರೂಪೇಶ್​ ಶೆಟ್ಟಿ

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

‘ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿಲ್ಲ, ಕ್ಯಾಪ್ಟನ್​ ಆಗಿಲ್ಲ, ಉತ್ತಮ ಕೂಡ ಆಗಿಲ್ಲ. ಕಳಪೆಗೂ ಹೋಗಿಲ್ಲ. ಆದರೂ ಅವರು ಫಿನಾಲೆ ವೇದಿಕೆಯಲ್ಲಿ ಇದ್ದಾರೆ. ಎಲ್ಲವೂ ತೆಗೆದುಕೊಂಡ ನಾವು ಇಲ್ಲಿ ಇದ್ದೀವೆ. ಇದು ಹೇಗೆ ಸಾಧ್ಯ’ ಎಂದು ಆರ್ಯವರ್ಧನ್​ ಗುರೂಜಿ ನೇರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: BBK9: ಎಚ್ಚರಿಕೆ ನೀಡಲು ಬಂದ ಬಿಗ್​ ಬಾಸ್​ಗೆ ಆವಾಜ್​ ಹಾಕಿದ ಆರ್ಯವರ್ಧನ್​ ಗುರೂಜಿ; ಕಾದಿದೆ ಗ್ರಹಚಾರ

ದಿವ್ಯಾ ಉರುಡುಗ ಅವರಿಗೆ ಮನೆಯ ಹೊರಗೆ ಸಪೋರ್ಟ್​ ಮಾಡುವವರು ಜಾಸ್ತಿ ಜನ ಇದ್ದರು ಎಂಬುದು ಗುರೂಜಿ ಅಭಿಪ್ರಾಯ. ಅರವಿಂದ್​ ಕೆ.ಪಿ. ಅವರು ದಿವ್ಯಾ ಪರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಪ್ರಚಾರ ಮಾಡಿದ್ದಾರೆ. ಆದ್ದರಿಂದ ದಿವ್ಯಾ ಫಿನಾಲೆ ತನಕ ಬರಲು ಸಾಧ್ಯವಾಗಿರಬಹುದು ಎಂದು ಗುರೂಜಿ ಹೇಳಿದ್ದಾರೆ. ಈ ಮಾತನ್ನು ದಿವ್ಯಾ ಸಂಪೂರ್ಣವಾಗಿ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: BBK9: ‘ರಾಕೇಶ್​ ಎಲ್ಲ ಸುಖ ಅನುಭವಿಸ್ತಾನೆ, ಆದ್ರೆ ಅದನ್ನು ಅನುಭವಿಸುವ ಶಕ್ತಿ ನನಗಿಲ್ಲ’: ಆರ್ಯವರ್ಧನ್​

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿಸಿದ್ದ ದಿವ್ಯಾ ಉರುಡುಗ ಅವರು ಆಗಲೂ ಫಿನಾಲೆ ತನಕ ಬಂದು ಔಟ್​ ಆಗಿದ್ದರು. 9ನೇ ಸೀಸನ್​ನಲ್ಲಾದರೂ ಟ್ರೋಫಿ ಗೆಲ್ಲಬೇಕು ಎಂದುಕೊಂಡಿದ್ದ ಅವರ ಕನಸು ಭಗ್ನವಾಯಿತು. ಒಟ್ಟಿನಲ್ಲಿ ಎರಡು ಬಾರಿ ಫಿನಾಲೆ ತಲುಪಿದ ಏಕೈಕ ಸ್ಪರ್ಧಿ ಎಂಬ ದಾಖಲೆ ಅವರ ಹೆಸರಿನಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ