AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಪಮಾ ಆಟ ನೋಡಿ ಬಿಗ್ ಬಾಸ್​ ಸ್ಕ್ರಿಪ್ಟೆಡ್​ ಎಂದ ಆರ್ಯವರ್ಧನ್; ಇದರ ಅಸಲಿಯತ್ತೇನು?

ಪ್ರತಿ ವೀಕೆಂಡ್​ನಲ್ಲಿ ಸುದೀಪ್ ಅವರು ಸ್ಪರ್ಧಿಗಳಿಗೆ ಒಂದಷ್ಟು ಪ್ರಶ್ನೆ ಕೇಳುತ್ತಾರೆ. ಈ ವಾರ ‘ಈ ಬಾರಿಯ ಬಿಗ್​ ಬಾಸ್​ನಲ್ಲಿ ಟಾಪ್ 2 ಯಾರು ಆಗಬಹುದು’ ಎಂಬ ಪ್ರಶ್ನೆ ಕೇಳಿದರು. ಇದಕ್ಕೆ ಅನೇಕರು ಗುರೂಜಿ ಹೆಸರನ್ನು ತೆಗೆದುಕೊಂಡರು.

ಅನುಪಮಾ ಆಟ ನೋಡಿ ಬಿಗ್ ಬಾಸ್​ ಸ್ಕ್ರಿಪ್ಟೆಡ್​ ಎಂದ ಆರ್ಯವರ್ಧನ್; ಇದರ ಅಸಲಿಯತ್ತೇನು?
ಆರ್ಯವರ್ಧನ್​-ಅನುಪಮಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 17, 2022 | 6:22 PM

Share

‘ಬಿಗ್ ಬಾಸ್’ (Bigg Boss) ಮನೆಯಲ್ಲಿ ನಡೆಯುವ ಎಲ್ಲಾ ಜಗಳಗಳು ಹಾಗೂ ಪ್ರೀತಿ-ಪ್ರೇಮ ಹುಟ್ಟಿಕೊಳ್ಳುವ ವಿಚಾರ ಸ್ಕ್ರಿಪ್ಟೆಡ್ ಎಂಬ ಆರೋಪ ಈ ಮೊದಲಿನಿಂದಲೂ ಕೇಳಿ ಬರುತ್ತಿದೆ. ಆದರೆ, ಇದನ್ನು ವಾಹಿನಿಯವರು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಒಂದು ವರ್ಗದ ವೀಕ್ಷಕರು ಇದನ್ನು ಒಪ್ಪುವುದಿಲ್ಲ. ಈಗ ಅಚ್ಚರಿ ಎಂಬಂತೆ ಮನೆ ಒಳಗೆ ತೆರಳಿದ ಸ್ಪರ್ಧಿಯೇ ಬಿಗ್ ಬಾಸ್ ಸ್ಕ್ರಿಪ್ಟೆಡ್ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಈ ಹೇಳಿಕೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ಈ ರೀತಿ ಹೇಳಿದವರು ಬೇರಾರು ಅಲ್ಲ ಆರ್ಯವರ್ಧನ್ ಗುರೂಜಿ (Aryavardhan Guruji). ಅವರು ಹೀಗೆ ಹೇಳೋಕೆ ಕಾರಣ ಅನುಪಮಾ ಗೌಡ ಅವರು ನೀಡಿದ ಆ ಒಂದು ಹೇಳಿಕೆ.

ಪ್ರತಿ ವೀಕೆಂಡ್​ನಲ್ಲಿ ಸುದೀಪ್ ಅವರು ಸ್ಪರ್ಧಿಗಳಿಗೆ ಒಂದಷ್ಟು ಪ್ರಶ್ನೆ ಕೇಳುತ್ತಾರೆ. ಈ ವಾರ ‘ಈ ಬಾರಿಯ ಬಿಗ್​ ಬಾಸ್​ನಲ್ಲಿ ಟಾಪ್ 2 ಯಾರು ಆಗಬಹುದು’ ಎಂಬ ಪ್ರಶ್ನೆ ಕೇಳಿದರು. ಇದಕ್ಕೆ ಅನೇಕರು ಗುರೂಜಿ ಹೆಸರನ್ನು ತೆಗೆದುಕೊಂಡರು. ಆದರೆ, ಗುರೂಜಿ ಪಾಳಿ ಬಂದಾಗ ಅವರು ನೀಡಿದ ಉತ್ತರ ಶಾಕಿಂಗ್ ಆಗಿತ್ತು. ಸುದೀಪ್ ಎದುರೇ ಈ ರೀತಿ ಅವರು ಹೇಳುತ್ತಾರೆ ಎಂದು ಯಾರೆಂದರೆ ಯಾರೂ ಕೂಡ ಊಹಿಸಿರಲಿಲ್ಲ.

ಕಳೆದ ವಾರ ಚಿನ್ನದ ಗಣಿ ಟಾಸ್ಕ್ ನೀಡಲಾಗಿತ್ತು. ಕ್ಯಾಪ್ಟನ್ಸಿ ಟಾಸ್ಕ್​ಗಾಗಿ ನಡೆದ ಆಟದಿಂದ ಅನುಪಮಾ ಅವರು ಮೊದಲೇ ಔಟ್ ಆಗಿದ್ದರು. ಆದರೆ, ಕೊನೆಯಲ್ಲಿ ಸಿಕ್ಕ ಟ್ವಿಸ್ಟ್​ನಿಂದ ಅನುಪಮಾ ಅವರು ಕ್ಯಾಪ್ಟನ್ಸಿ ರೇಸ್​ಗೆ ಮತ್ತೆ ಎಂಟ್ರಿ ಪಡೆದರು. ಅಂತಿಮವಾಗಿ ಕ್ಯಾಪ್ಟನ್ಸಿ ಟಾಸ್ಕ್​​ನಲ್ಲಿ ದೀಪಿಕಾ ದಾಸ್, ಅನುಪಮಾ ಗೌಡ ಹಾಗೂ ರೂಪೇಶ್ ಶೆಟ್ಟಿ ಇದ್ದರು. ‘ಅನುಪಮಾ ಅವರನ್ನು ಮತ್ತೆ ಕರೆತರಬೇಕು ಎಂಬ ಉದ್ದೇಶದಿಂದಲೇ ಟ್ವಿಸ್ಟ್ ನೀಡಲಾಗಿದೆ. ಇವೆಲ್ಲ ಮ್ಯಾಚ್​​​ಫಿಕ್ಸಿಂಗ್’ ಎಂಬ ಆರೋಪ ಮಾಡಿದರು ಆರ್ಯವರ್ಧನ್. ಗುರೂಜಿ ಮಾತು ಕೇಳಿ ಸುದೀಪ್ ಕೂಡ ಸಿಟ್ಟಾದರು.

ಇದನ್ನೂ ಓದಿ
Image
ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್
Image
‘ಬಿಗ್ ಬಾಸ್ ಶುರುವಾದಾಗ ನಾನು ಬಂದು ಪ್ರೀತಿ ಮಾಡಿ ಅಂತ ಹೇಳಿದ್ನಾ?’; ಸುದೀಪ್ ಪ್ರಶ್ನೆಗೆ ಕಂಗಾಲಾದ ರೂಪೇಶ್
Image
ರೂಪೇಶ್ ಶೆಟ್ಟಿ-ಸಾನ್ಯಾ ಮಧ್ಯೆ ಬಂದ ಕಾವ್ಯಶ್ರೀ ಗೌಡ; ಐಯ್ಯರ್ ಕಣ್ಣಲ್ಲಿ ತುಂಬಿತು ನೀರು
Image
BBK 9: ‘ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿನ್ನರ್’; ಏನಿದು ಸಮಾಚಾರ?

ಇದನ್ನೂ ಓದಿ: ಬಿಗ್ ಬಾಸ್​ನಿಂದ ಹೊರ ನಡೆಯಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ; ಈ ವೀಕೆಂಡ್​ನಲ್ಲೇ ಎಲಿಮಿನೇಷನ್​?

ಗುರೂಜಿ ಈ ರೀತಿ ಹೇಳಿಕೆ ನೀಡೋಕೆ ಕಳೆದವಾರ ಅನುಪಮಾ ಕೊಟ್ಟ ಒಂದು ಹೇಳಿಕೆಯೇ ಕಾರಣ. ಕಳೆದ ವಾರ ಆರ್ಯವರ್ಧನ್ ಗುರೂಜಿ ಕ್ಯಾಪ್ಟನ್ ಆಗಿದ್ದರು. ‘ರೂಪೇಶ್ ಹಾಗೂ ರಾಕೇಶ್ ಸಹಾಯದಿಂದ ಆರ್ಯವರ್ಧನ್ ಕ್ಯಾಪ್ಟನ್ ಆಗಿದ್ದಾರೆ’ ಎಂಬ ಆರೋಪವನ್ನು ಅನುಪಮಾ ಮಾಡಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಆರ್ಯವರ್ಧನ್​ ಮ್ಯಾಚ್​ ಫಿಕ್ಸಿಂಗ್ ಹೇಳಿಕೆ ನೀಡಿದ್ದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ