AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಫಿನಾಲೆಗೆ 3 ದಿನ ಇರುವಾಗ ಆರ್ಯವರ್ಧನ್​ ಗುರೂಜಿ ಔಟ್​; ಅಪ್ಪಾಜಿ ಅಂತ ಕಣ್ಣೀರು ಹಾಕಿದ ರೂಪೇಶ್​ ಶೆಟ್ಟಿ

BBK9 | Bigg Boss Kannada Finale: ಬಿಗ್​ ಬಾಸ್​ ಮನೆಯಲ್ಲಿ ಮಿಡ್​ ವೀಕ್​ ಎಲಿಮಿನೇಷನ್​ ನಡೆದಿದೆ. ಫಿನಾಲೆಯ ಹೊಸ್ತಿಲಿನಲ್ಲಿ ಆರ್ಯವರ್ಧನ್​ ಗುರೂಜಿ ಅವರು ದೊಡ್ಮನೆಯಿಂದ ಔಟ್​ ಆಗಿದ್ದಾರೆ.

Aryavardhan Guruji: ಫಿನಾಲೆಗೆ 3 ದಿನ ಇರುವಾಗ ಆರ್ಯವರ್ಧನ್​ ಗುರೂಜಿ ಔಟ್​; ಅಪ್ಪಾಜಿ ಅಂತ ಕಣ್ಣೀರು ಹಾಕಿದ ರೂಪೇಶ್​ ಶೆಟ್ಟಿ
ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on:Dec 27, 2022 | 10:33 PM

Share

ಸಂಖ್ಯಾ ಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ (Aryavardhan Guruji) ಅವರು ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಸಾಕಷ್ಟು ಗಮನ ಸೆಳೆದಿದ್ದಾರೆ. ಆದರೆ ಟ್ರೋಫಿ ಗೆಲ್ಲಬೇಕು ಎಂಬ ಅವರ ಕನಸು ಭಗ್ನವಾಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಕೊನೇ ವಾರದಲ್ಲಿ ಅವರು ಎಲಿಮಿನೇಟ್​ ಆಗಿದ್ದಾರೆ. ಫಿನಾಲೆಗೆ ಇನ್ನು ಮೂರು ದಿನ ಇರುವಾಗ ಅವರು ಔಟ್​ ಆಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಪ್ರತಿ ಬಾರಿ ನಾಮಿನೇಟ್​ ಆದಾಗಲೂ ವೀಕ್ಷಕರ ವೋಟ್​ ಬಲದಿಂದಾಗಿ ಆರ್ಯವರ್ಧನ್​ ಗುರೂಜಿ ಸೇಫ್​ ಆಗುತ್ತಿದ್ದರು. ಆದರೆ ಅಂತಿಮ ಘಟ್ಟದಲ್ಲಿ ಅವರು ದೊಡ್ಮನೆ ತೊರೆಯಬೇಕಾಯಿತು. ಆರ್ಯವರ್ಧನ್​ ಜೊತೆ ಹೆಚ್ಚು ಆಪ್ತವಾಗಿದ್ದ ರೂಪೇಶ್​ ಶೆಟ್ಟಿ (Roopesh Shetty) ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಡಿಸೆಂಬರ್​ 30 ಮತ್ತು ಡಿಸೆಂಬರ್​ 31ರಂದು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಈ ಸಂಚಿಕೆಗಳನ್ನು ನೋಡಲು ವೀಕ್ಷಕರು ಕಾದಿದ್ದಾರೆ. ಫಿನಾಲೆ ತನಕ ಆರ್ಯವರ್ಧನ್​ ಗುರೂಜಿ ಬರಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ಅವರ ಜರ್ನಿ ಅಂತ್ಯವಾಗಿದೆ.

ಸದ್ಯ 5 ಜನರು ಫಿನಾಲೆ ತಲುಪಿದ್ದಾರೆ. ರೂಪೇಶ್​ ಶೆಟ್ಟಿ, ರೂಪೇಶ್​ ರಾಜಣ್ಣ, ರಾಕೇಶ್​ ಅಡಿಗ, ದಿವ್ಯಾ ಉರುಡುಗ, ದೀಪಿಕಾ ದಾಸ್​ ಅವರ ನಡುವೆ ಹಣಾಹಣಿ ಮುಂದುವರಿದಿದೆ. ಈ ಪೈಕಿ ರೂಪೇಶ್​ ರಾಜಣ್ಣ ಮಾತ್ರ ಹೊಸಬರು. ದಿವ್ಯಾ ಉರುಡುಗ ಹಾಗೂ ದೀಪಿಕಾ ದಾಸ್​ ಅವರು ಈ ಹಿಂದಿನ ಸೀಸನ್​ಗಳಲ್ಲಿ ಭಾಗವಹಿಸಿದ್ದರು. ರಾಕೇಶ್​ ಅಡಿಗ ಮತ್ತು ರೂಪೇಶ್​ ಶೆಟ್ಟಿ ಅವರು ಒಟಿಟಿ ಸೀಸನ್​ನಿಂದ ಬಂದವರು.

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

ಇದನ್ನೂ ಓದಿ: BBK9: ಎಚ್ಚರಿಕೆ ನೀಡಲು ಬಂದ ಬಿಗ್​ ಬಾಸ್​ಗೆ ಆವಾಜ್​ ಹಾಕಿದ ಆರ್ಯವರ್ಧನ್​ ಗುರೂಜಿ; ಕಾದಿದೆ ಗ್ರಹಚಾರ

ಕೊನೇ ವಾರದಲ್ಲಿ ಆರ್ಯವರ್ಧನ್​ ಗುರೂಜಿ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿತ್ತು. ‘ಆಟ ಚೆನ್ನಾಗಿ ಆಡಿದ್ದೀರಿ. ಎಲ್ಲರ ಜೊತೆ ಬೆರೆತಿದ್ದೀರಿ. ಈ ವಾರ ನೀವು ಇದ್ದ ರೀತಿ ಚೆನ್ನಾಗಿತ್ತು’ ಎಂದು ಕಿಚ್ಚ ಸುದೀಪ್​ ಹೇಳಿದ್ದರು. ಮೆಚ್ಚುಗೆ ಪಡೆದಿದ್ದಕ್ಕೆ ಆರ್ಯವರ್ಧನ್​ ಭಾವುಕರಾಗಿದ್ದರು. ಆದರೂ ಕೂಡ ಅವರು ಫಿನಾಲೆಗೆ ಬರಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ

ಆರ್ಯವರ್ಧನ್​ ಗುರೂಜಿ ಅವರ ಮಾತುಗಳಿಂದ ಬಿಗ್​ ಬಾಸ್​ ಮನೆಯಲ್ಲಿ ಕಾಮಿಡಿ ವಾತಾವರಣ ಸೃಷ್ಟಿ ಆಗುತ್ತಿತ್ತು. ಹೆಚ್ಚು ಕಾಲ ಅವರು ಅಡುಗೆ ಮನೆಯಲ್ಲಿ ಇರುತ್ತಿದ್ದರು. ವೀಕೆಂಡ್​ ಸಂಚಿಕೆಗಳಲ್ಲಿ ಏನೇನೋ ಮಾತನಾಡಿ ಮಸ್ತ್​ ಮನರಂಜನೆ ನೀಡುತ್ತಿದ್ದರು. ಇದರಿಂದ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿದ್ದರು. ಆದರೆ ಕೊನೇ ಹಂತದಲ್ಲಿ ಅವರ ಬಿಗ್​ ಬಾಸ್​ ಜರ್ನಿ ಅಂತ್ಯವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 pm, Tue, 27 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್