AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ಗಾಗಿ ಸಿನಿಮಾ ಕಥೆ ಮಾಡಿದ ಆರ್ಯವರ್ಧನ್​ ಗುರೂಜಿ; ಸ್ಟೋರಿ ಕೇಳಿ ತಲೆಕೆಡಿಸಿಕೊಂಡ ಕಿಚ್ಚ

ಈ ಚಿತ್ರದಲ್ಲಿ ದೆವ್ವ ಹಾಗೂ ಹೀರೋ ಎರಡೂ ಸುದೀಪ್ ಅವರಂತೆ! ಈ ವಿಚಾರವನ್ನು ಕೂಡ ಆರ್ಯವರ್ಧನ್ ಹೇಳಿದ್ದಾರೆ. ಇಷ್ಟೆಲ್ಲ ಕೇಳಿದ ನಂತರದಲ್ಲಿ ಸಿನಿಮಾದ ಕಥೆ ಏನಿರಬಹುದು ಎನ್ನುವ ಕುತೂಹಲ ಅನೇಕರಲ್ಲಿ ಮೂಡಿತು. ಇದಕ್ಕೆ ರಾಕೇಶ್ ಉತ್ತರಿಸಿದರು.

ಸುದೀಪ್​ಗಾಗಿ ಸಿನಿಮಾ ಕಥೆ ಮಾಡಿದ ಆರ್ಯವರ್ಧನ್​ ಗುರೂಜಿ; ಸ್ಟೋರಿ ಕೇಳಿ ತಲೆಕೆಡಿಸಿಕೊಂಡ ಕಿಚ್ಚ
ಆರ್ಯವರ್ಧನ್​-ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 19, 2022 | 11:32 AM

Share

ಬಿಗ್ ಬಾಸ್ (Bigg Boss) ಕೊನೆಯ ಹಂತ ತಲುಪಿದೆ. ಕೆಲವೇ ದಿನಗಳಲ್ಲಿ ಈ ಶೋ ಪೂರ್ಣಗೊಳ್ಳಲಿದೆ. ಮನೆಯಲ್ಲಿ ಸದ್ಯ ಎಂಟು ಸ್ಪರ್ಧಿಗಳಿದ್ದಾರೆ. ಈ ಪೈಕಿ ಆರ್ಯವರ್ಧನ್ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಒಟಿಟಿ ಸೀಸನ್ ಮೂಲಕ ಬಿಗ್ ಬಾಸ್ ಜರ್ನಿ ಆರಂಭಿಸಿದರು. ಟಿವಿ ಸೀಸನ್​ಗೆ ಕಾಲಿಟ್ಟು ಆರ್ಯವರ್ಧನ್ ತಮ್ಮ ಜನಪ್ರಿಯತೆ ಹೆಚ್ಚಿಸಿಕೊಂಡರು. ಏನು ಮಾತನಾಡುತ್ತಾರೆ ಎನ್ನುವ ವಿಚಾರ ಕೆಲವೊಮ್ಮೆ ಅವರಿಗೇ ಗೊತ್ತಿರುವುದಿಲ್ಲ. ಈಗ ಅವರು ಸಿನಿಮಾ ಮಾಡಲು ಮುಂದಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಈ ವಿಚಾರ ಹೇಳಿದ್ದಾರೆ. ಆರ್ಯವರ್ಧನ್ ಅವರ ಕಥೆ ಕೇಳಿ ಕಿಚ್ಚ ಸುದೀಪ್ (Kichcha Sudeep) ತಲೆಕೆಡಿಸಿಕೊಂಡಿದ್ದಾರೆ.

ವೀಕೆಂಡ್ ಎಪಿಸೋಡ್​ಗೆ ಕಿಚ್ಚ ಸುದೀಪ್ ಬರುತ್ತಾರೆ. ಈ ವೇಳೆ ಸ್ಪರ್ಧಿಗಳಿಗೆ ಕಿಚ್ಚ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಇದರ ಜತೆಗೆ ಒಂದಷ್ಟು ಫನ್ ಕೂಡ ಇರುತ್ತದೆ. ಕಳೆದ ವಾರದ ಎಪಿಸೋಡ್​ನಲ್ಲೂ ಅದು ಮುಂದುವರಿದಿದೆ. ‘ಬಿಗ್ ಬಾಸ್​ನಲ್ಲಿ 50 ಲಕ್ಷ ರೂಪಾಯಿ ವಿನ್ ಆದರೆ ಆ ಹಣವನ್ನು ಏನು ಮಾಡ್ತೀರಿ’ ಎಂದು ಪ್ರಶ್ನೆ ಮಾಡಿದರು ಸುದೀಪ್. ಇದಕ್ಕೆ ಆರ್ಯವರ್ಧನ್ ಉತ್ತರ ಕೊಟ್ಟರು.

‘ನಾನು ಹಣ ಗೆದ್ದರೆ ಊಟಕ್ಕೆ ಖರ್ಚು ಮಾಡಲ್ಲ. ಈ ಹಣವನ್ನು ನೆನಪಿನ ಕಾಣಿಕೆ ಎಂದುಕೊಳ್ಳುತ್ತೇನೆ. ಒಂದು ದೇವಸ್ಥಾನ ಕಟ್ಟಿಸ್ತೀನಿ. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೊಂದು ಕಥೆ ಬರ್ದಿದೀನಿ. ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನನ್ನ ಫ್ರೆಂಡ್. ಬಿಗ್ ಬಾಸ್​ನಿಂದ ಹೊರ ಬಂದ ನಂತರದಲ್ಲಿ ಅವರನ್ನು ಕರೆದುಕೊಂಡು ನಿಮ್ಮ ಮನೆಗೆ ಬಂದು ಕಥೆ ಹೇಳ್ತೀನಿ. ಇದು 300 ಕೋಟಿ ರೂಪಾಯಿ ಬಜೆಟ್ ಸಿನಿಮಾ’ ಎಂದರು ಆರ್ಯವರ್ಧನ್.

ಇದನ್ನೂ ಓದಿ
Image
Prashanth Sambargi: ಹನ್ನೆರಡನೇ ವಾರಕ್ಕೆ ಬಿಗ್​ ಬಾಸ್​ ಆಟ ಮುಗಿಸಿ ಮನೆಯಿಂದ ಹೊರ ನಡೆದ ಪ್ರಶಾಂತ್‌ ಸಂಬರ್ಗಿ
Image
ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹೊರಿಸಿದ ವಿನೋದ್​ ಗೊಬ್ಬರಗಾಲ: ಪಾಠ ಹೇಳಿದ ಕಿಚ್ಚ ಸುದೀಪ್​​ 
Image
ಮಿತಿ ಮೀರಿದ ಬಜೆಟ್​; ‘ಬ್ರಹ್ಮಾಸ್ತ್ರ’ ಚಿತ್ರಕ್ಕಾಗಿ ಸಂಭಾವನೆಯನ್ನೇ ಪಡೆದಿಲ್ಲ ರಣಬೀರ್ ಕಪೂರ್

ಈ ಚಿತ್ರದಲ್ಲಿ ದೆವ್ವ ಹಾಗೂ ಹೀರೋ ಎರಡೂ ಸುದೀಪ್ ಅವರಂತೆ! ಈ ವಿಚಾರವನ್ನು ಕೂಡ ಆರ್ಯವರ್ಧನ್ ಹೇಳಿದ್ದಾರೆ. ಇಷ್ಟೆಲ್ಲ ಕೇಳಿದ ನಂತರದಲ್ಲಿ ಸಿನಿಮಾದ ಕಥೆ ಏನಿರಬಹುದು ಎನ್ನುವ ಕುತೂಹಲ ಅನೇಕರಲ್ಲಿ ಮೂಡಿತು. ಇದಕ್ಕೆ ರಾಕೇಶ್ ಉತ್ತರಿಸಿದರು.

ಇದನ್ನೂ ಓದಿ: ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹೊರಿಸಿದ ವಿನೋದ್​ ಗೊಬ್ಬರಗಾಲ: ಪಾಠ ಹೇಳಿದ ಕಿಚ್ಚ ಸುದೀಪ್​​ 

‘ಹೀರೋ ವಿದೇಶದಿಂದ ಹಳ್ಳಿಗೆ ಬರ್ತಾನೆ. ಹಳ್ಳಿಯಲ್ಲಿ ದೆವ್ವದ ಕಾಟ. ದೆವ್ವ ಮನೆನೇ ಎತ್ತಿ ಬೇರೆ ಕಡೆ ಇಡುತ್ತದೆ. ದೆವ್ವನ ಸಾಯಿಸಿದರೆ ಆ ದೆವ್ವಕ್ಕಿಂತ ಪವರ್​ಫುಲ್ ಆಗಬಹುದು ಎನ್ನುವ ವಿಚಾರ ಹೀರೋಗೆ ಗೊತ್ತಾಗುತ್ತದೆ. ಹೀಗಾಗಿ, ಹೀರೋ ದೆವ್ವನ ಕೊಲ್ಲೋಕೆ ಹೋಗುತ್ತಾನೆ. ಹೀಗೆ ಕೊಲ್ಲುವಾಗ ಫೌಲ್ ಆಗುತ್ತದೆ..’ ಎಂದು ರಾಕೇಶ್ ಅವರು ಆರ್ಯವರ್ಧನ್ ಹೇಳಿದ ಕಥೆ ವಿವರಿಸುತ್ತಾ ಹೋದರು. ಇದನ್ನು ಕೇಳಿ ಸುದೀಪ್​ಗೆ ಶಾಕ್ ಆಗಿದೆ. ಅವರು ತಲೆಕೆಡಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:12 am, Mon, 19 December 22

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್