Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​

Bigg Boss Match Fixing: ಕಿಚ್ಚ ಸುದೀಪ್​ ಎದುರಲ್ಲೇ ಆರ್ಯವರ್ಧನ್​ ಗುರೂಜಿ ಅವರು ಈ ರೀತಿ ಮಾತನಾಡಿದ್ದನ್ನು ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಇದರ ಪರಿಣಾಮ ಏನಾಗಲಿದೆ ಎಂಬ ಪ್ರಶ್ನೆ ಮೂಡಿದೆ.

BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
ಆರ್ಯವರ್ಧನ್ ಗುರೂಜಿ, ಕಿಚ್ಚ ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 16, 2022 | 5:10 PM

ಸಂಖ್ಯಾಶಾಸ್ತ್ರದ ಮೂಲಕ ಗುರುತಿಸಿಕೊಂಡಿದ್ದ​ ಆರ್ಯವರ್ಧನ್​ ಗುರೂಜಿ (Aryavardhan Guruji) ಅವರಿಗೆ ಬಿಗ್ ಬಾಸ್​ ಶೋ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಸಿಕ್ಕಿದೆ. ಅನಿಸಿದ್ದನ್ನು ನೇರವಾಗಿ ಹೇಳುವ ಅವರ ಗುಣದ ಬಗ್ಗೆ ಅನೇಕ ಬಾರಿ ಚರ್ಚೆ ಆಗಿದ್ದುಂಟು. ಈಗ ಆರ್ಯವರ್ಧನ್​ ಗುರೂಜಿ ಅವರು ಬಿಗ್​​ ಬಾಸ್​ (Bigg Boss Kannada Season 9) ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ ಹೊರಿಸಿದ್ದಾರೆ. ಇದರಿಂದ ಎಲ್ಲರಿಗೂ ಶಾಕ್​ ಆಗಿದೆ. ‘ಸೂಪರ್​ ಸಂಡೇ ವಿತ್​ ಸುದೀಪ’ ಸಂಚಿಕೆಯಲ್ಲಿ ಈ ಘಟನೆ ನಡೆದಿದೆ. ಆರ್ಯವರ್ಧನ್​ ಗುರೂಜಿ ಮಾಡಿದ ಆರೋಪಕ್ಕೆ ಕಿಚ್ಚ ಸುದೀಪ್​ (Kichcha Sudeep) ಅವರು ಖಡಕ್​ ತಿರುಗೇಟು ನೀಡಿದ್ದಾರೆ. ಇದರ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಸಂಚಿಕೆ ಅ.16ರ ರಾತ್ರಿ 9.30ಕ್ಕೆ ಪ್ರಸಾರ ಆಗಲಿದೆ.

ಬಿಗ್​ ಬಾಸ್​ ಶೋ ಬಗ್ಗೆ ಈಗಾಗಲೇ ಅನೇಕರಿಗೆ ಅನುಮಾನ ಇದೆ. ಇದು ಸ್ಕ್ರಿಪ್ಟೆಡ್​ ಕಾರ್ಯಕ್ರಮ ಎಂದು ಒಂದಷ್ಟು ಮಂದಿ ಆರೋಪ ಮಾಡಿದ ಉದಾಹರಣೆ ಇದೆ. ಈ ಮಾತನ್ನು ಸ್ಪರ್ಧಿಗಳು ಒಪ್ಪುವುದು ವಿರಳ. ಆದರೆ ಆರ್ಯವರ್ಧನ್​ ಗುರೂಜಿ ಅವರು ದೊಡ್ಮನೆಯೊಳಗೆ ಇದ್ದುಕೊಂಡೇ ಬಿಗ್​ ಬಾಸ್ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ ಮಾಡಿದ್ದಾರೆ.

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

ಈಗ ಇರುವ ಸ್ಪರ್ಧಿಗಳ ಪೈಕಿ ಟಾಪ್​ 2 ಯಾರಾಗಬಹುದು ಎಂದು ಕಿಚ್ಚ ಸುದೀಪ್​ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಸ್ಪರ್ಧಿಗಳಿಂದ ಹಲವು ಉತ್ತರಗಳು ಬಂದಿವೆ. ಅನುಪಮಾ ಗೌಡ ಅವರ ಹೆಸರನ್ನು ಆರ್ಯವರ್ಧನ್​ ಗುರೂಜಿ ಹೇಳಿದ್ದಾರೆ. ‘ಅನುಪಮಾ ಗೌಡ ಅವರು ಒಳಗಡೆ ಬರಲಿ ಅಂತ ಬಿಗ್​ ಬಾಸ್​ಗೇ ಆಸೆ ಎನ್ನುವಂತಿತ್ತು’ ಎಂದು ಅವರು​ ಹೇಳಿದ್ದಾರೆ.

ಈ ಹೇಳಿಕೆಯಿಂದ ಕಿರಿಕ್​ ಶುರುವಾಗಿದೆ. ‘ಹಾಗೆಲ್ಲ ಮಾತನಾಡಬೇಡಿ ಸರ್’ ಎಂದು ಕಿಚ್ಚ ಸುದೀಪ್​ ಎಚ್ಚರಿಕೆ ನೀಡಿದರು. ಹಾಗಿದ್ದರೂ ಆರ್ಯವರ್ಧನ್​ ಸುಮ್ಮನಾಗಿಲ್ಲ. ‘ಇಷ್ಟೆಲ್ಲ ಗೊತ್ತಿದ್ದಮೇಲೂ ಇವರನ್ನು ಒಳಗಡೆ ಕರೆಸುತ್ತಾರೆ ಎಂದರೆ ಏನರ್ಥ? ಅದು ಮ್ಯಾಚ್​ ಫಿಕ್ಸಿಂಗ್​ ಇದ್ದಂಗೆ ಇರುತ್ತದೆ’ ಎಂದು ಗುರೂಜಿ ಆರೋಪ ಮಾಡಿದ್ದಾರೆ. ಈ ಮಾತು ಕೇಳಿ ಸುದೀಪ್​ಗೆ ಸಖತ್​ ಕೋಪ ಬಂದಿದೆ. ‘ಮಾತಿನ ಮೇಲೆ ನಿಗಾ ಇರಲಿ. ಏನದು ಮ್ಯಾಚ್​ ಫಿಕ್ಸಿಂಗ್​. ಅಲ್ಲಿ ಕುಳಿತುಕೊಂಡು ಆಡುತ್ತಿರುವವರೆಲ್ಲ ಏನು ಹಾಗಾದ್ರೆ? ಯಾರಿಗೂ ಯೋಗ್ಯತೆ ಇಲ್ಲವಾ? ಎಲ್ಲರೂ ಮೋಸ ಮಾಡಿ ಗೆಲ್ಲುತ್ತಿದ್ದಾರಾ? ಈ ವೇದಿಕೆಗೆ ಏನಾದ್ರೂ ಮರ್ಯಾದೆ ತೆಗೆದರೆ.. ಸತ್ಯವಾಗಿ ಹೇಳುತ್ತೇನೆ, ನಮಗೂ ನಿಮಗೂ ಬೀಳುತ್ತದೆ’ ಎಂದು ಸುದೀಪ್​ ಅವರು ಖಡಕ್​ ಆಗಿ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಆರ್ಯವರ್ಧನ್​ ಗುರೂಜಿ ಅವರು ಈ ರೀತಿ ಮಾತನಾಡಿದ್ದನ್ನು ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಇದರ ಪರಿಣಾಮ ಏನಾಗಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!