BBK9: ಎಚ್ಚರಿಕೆ ನೀಡಲು ಬಂದ ಬಿಗ್​ ಬಾಸ್​ಗೆ ಆವಾಜ್​ ಹಾಕಿದ ಆರ್ಯವರ್ಧನ್​ ಗುರೂಜಿ; ಕಾದಿದೆ ಗ್ರಹಚಾರ

Aryavardhan Guruji | Bigg Boss Kannada: ಆರ್ಯವರ್ಧನ್​ ಗುರೂಜಿ ಅವರು ಕೋಪದಲ್ಲಿ ಎದೆ ಬಡಿದುಕೊಂಡಿದ್ದಾರೆ. ಬಿಗ್​ ಬಾಸ್​ ವಿರುದ್ಧವೇ ಏರುಧ್ವನಿಯಲ್ಲಿ ಅವರು ಮಾತನಾಡಿದ್ದಾರೆ.

BBK9: ಎಚ್ಚರಿಕೆ ನೀಡಲು ಬಂದ ಬಿಗ್​ ಬಾಸ್​ಗೆ ಆವಾಜ್​ ಹಾಕಿದ ಆರ್ಯವರ್ಧನ್​ ಗುರೂಜಿ; ಕಾದಿದೆ ಗ್ರಹಚಾರ
ಆರ್ಯವರ್ಧನ್ ಗುರೂಜಿ
Follow us
| Updated By: ಮದನ್​ ಕುಮಾರ್​

Updated on:Dec 06, 2022 | 1:35 PM

‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಶೋ ಈಗ 10 ವಾರಗಳನ್ನು ಪೂರೈಸಿದೆ. ಪ್ರತಿ ಸಂಚಿಕೆಯಲ್ಲೂ ಡ್ರಾಮಾ ಇದ್ದೇ ಇರುತ್ತದೆ. ಹಲವು ಬಗೆಯ ವ್ಯಕ್ತಿತ್ವ ಇರುವ ಸ್ಪರ್ಧಿಗಳ ನಡುವೆ ಹಣಾಹಣಿ ನಡೆಯುತ್ತಿದೆ. ಇನ್ನೇನು ಕೆಲವೇ ವಾರಗಳಲ್ಲಿ ಫಿನಾಲೆ ಸಮೀಪಿಸಲಿದೆ. ಸ್ಪರ್ಧಿಗಳ ಸಂಖ್ಯೆ ಕಡಿಮೆ ಆದಂತೆಲ್ಲ ಪೈಪೋಟಿ ಚುರುಕಾಗುತ್ತಿದೆ. ಇಂಥ ಸಂದರ್ಭದಲ್ಲಿ ಸಾಧ್ಯವಾದಷ್ಟು ಹುಷಾರಾಗಿ ಇರಬೇಕು. ಆರ್ಯವರ್ಧನ್​ ಗುರೂಜಿ (Aryavardhan Guruji) ಅವರಿಗೆ ಈ ವಾರ ಕಳಪೆ ಪಟ್ಟ ಸಿಕ್ಕಿದೆ. ಆ ಕಾರಣದಿಂದ ಅವರು ಜೈಲು ಸೇರಿದ್ದಾರೆ. ಜೈಲಿನಲ್ಲಿ ಇದ್ದುಕೊಂಡೇ ಅವರು ಬಿ​ಗ್​ ಬಾಸ್​ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ಒಂದು ರೀತಿಯಲ್ಲಿ ಆವಾಜ್​ ಹಾಕಿದ್ದಾರೆ ಎಂದೇ ಹೇಳಬಹುದು. ಈ ವಿಚಾರವಾಗಿ ಕಿಚ್ಚ ಸುದೀಪ್​ (Kichcha Sudeep) ಅವರು ವೀಕೆಂಡ್​ ಎಪಿಸೋಡ್​ನಲ್ಲಿ ಕ್ಲಾಸ್​ ತೆಗೆದುಕೊಂಡರೂ ಅಚ್ಚರಿ ಇಲ್ಲ.

ಬಿಗ್​ ಬಾಸ್​ ಮನೆಯಲ್ಲಿ ಒಂದಷ್ಟು ನಿಯಮಗಳಿವೆ. ಅದನ್ನು ಎಲ್ಲರೂ ಪಾಲಿಸಲೇಬೇಕು. ಹಗಲು ಹೊತ್ತಿನಲ್ಲಿ ಯಾರೂ ಕೂಡ ನಿದ್ರೆ ಮಾಡುವಂತಿಲ್ಲ. ಒಂದುವೇಳೆ ತೂಕಡಿಸಿದರೆ, ನಿದ್ರೆ ಮಾಡಿದರೆ ‘ಎದ್ದೇಳು ಮಂಜುನಾಥ..’ ಹಾಡನ್ನು ಜೋರಾಗಿ ಹಾಕಲಾಗುತ್ತದೆ. ನಿದ್ರೆ ಮಾಡಿದವರ ಹೆಸರು ಕೇಳಿ ಎಚ್ಚರಿಕೆ ನೀಡಲಾಗುತ್ತದೆ. ಇತ್ತೀಚೆಗಿನ ಸಂಚಿಕೆಯಲ್ಲಿ ಆರ್ಯವರ್ಧನ್​ ಗುರೂಜಿ ಅವರು ಜೈಲಿನ ಒಳಗೆ ನಿದ್ರೆ ಮಾಡಿರುವುದು ಗೊತ್ತಾಗಿದೆ. ಆದರೆ ಎಚ್ಚರಿಕೆ ನೀಡಲು ಬಂದು ಬಿಗ್​ ಬಾಸ್​ಗೆ ಅವರು ಆವಾಜ್​ ಹಾಕಿದ್ದಾರೆ.

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
Aryavardhan Guruji: ಕನ್ನಡ ಓದಲು ಕಷ್ಟಪಟ್ಟ ಗುರೂಜಿ; ಸಹಾಯ ಮಾಡಿದ ರಾಕೇಶ್​: ಇಲ್ಲಿದೆ ವಿಡಿಯೋ
Image
ಮೀಸೆ, ತಲೆ ಬೋಳಿಸಿಕೊಂಡ ಆರ್ಯವರ್ಧನ್​; ಗುರೂಜಿ ಹೊಸ ಲುಕ್ ಹೇಗಿದೆ ನೋಡಿ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

ಇದನ್ನೂ ಓದಿ: BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ

‘ನಾನು ಬೇಜಾರಾಗಿ ಮಗಲಿದ್ದೇನೆ, ಆದರೆ ನಿದ್ರೆ ಮಾಡಿಲ್ಲ. ನನಗೆ ಒಂದು ಲೋಟ ಕಾಫಿ ನೀಡಿಲ್ಲ ಅಂತ ಬೇಜಾರಾಗಿದೆ. ಒಬ್ಬರ ಮನಸ್ಸಲ್ಲೂ ನನ್ನ ಬಗ್ಗೆ ಕಾಳಜಿ ಇಲ್ಲ. ಆ ದುಃಖವನ್ನು ಹಂಚಿಕೊಳ್ಳೋಕೆ ಆಗುತ್ತಿಲ್ಲ. ಆದಕ್ಕಾಗಿ ಮಲಗಿಕೊಂಡೆ. ನಾನು ನೋವಿನಲ್ಲಿ ಇರುವುದು ನಿಮಗೆ ಕಾಣಿಸದೇ ಇರಬಹುದು. ನನ್ನಾಣೆಗೂ ಮಲಲಿಲ್ಲ’ ಎಂದು ಆರ್ಯವರ್ಧನ್​ ಅವರು ಕೋಪದಲ್ಲಿ ಎದೆ ಬಡಿದುಕೊಂಡಿದ್ದಾರೆ.

ಇದನ್ನೂ ಓದಿ: BBK9: ಆರ್ಯವರ್ಧನ್​ ಗುರೂಜಿ ಆಡಿದ ಮಾತುಗಳಿಗೆ ಈ ಪರಿ ರಿಯಾಕ್ಷನ್​ ಕೊಟ್ರು ಕಿಚ್ಚ ಸುದೀಪ್​

ಹೀಗೆ ಬಿಗ್​ ಬಾಸ್​ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡಿದರೆ ಬಿಗ್​ ಬಾಸ್​ಗೆ ಗೌರವ ಇಲ್ಲದಂತೆ ಆಗುತ್ತದೆ. ಇದನ್ನು ಆಯೋಜಕರು ಗಂಭೀರವಾಗಿ ಪರಿಗಣಿಸಬಹುದು. ಕಳೆದ ಸೀಸನ್​ನಲ್ಲಿ ಈ ರೀತಿ ಮಾಡಿದ್ದಕ್ಕೆ ಶುಭಾ ಪೂಂಜಾ ಅವರಿಗೆ ವಾರ್ನಿಂಗ್​ ನೀಡಲಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:35 pm, Tue, 6 December 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ