AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷ ಕರ್ನಾಟಕವನ್ನು ಚಕ್ರವರ್ತಿಯಾಗಿ ಆಳಿದ್ದೇನೆ ಎಂದ ಆರ್ಯವರ್ಧನ್​ ಗುರೂಜಿ

ಆರ್ಯವರ್ಧನ್ ಅವರು ಯಾವ ರೀತಿ ಎಂಬುದನ್ನು ತಿಳಿದುಕೊಳ್ಳೋಕೆ ಅನೇಕರಿಂದ ಸಾಧ್ಯವೇ ಆಗಿಲ್ಲ. ಇದಕ್ಕೆ ಕಾರಣವೂ ಇದೆ. ಅವರು ಒಂದೊಂದು ಕ್ಷಣಕ್ಕೂ ಒಂದೊಂದು ರೀತಿ ಇರುತ್ತಾರೆ.

12 ವರ್ಷ ಕರ್ನಾಟಕವನ್ನು ಚಕ್ರವರ್ತಿಯಾಗಿ ಆಳಿದ್ದೇನೆ ಎಂದ ಆರ್ಯವರ್ಧನ್​ ಗುರೂಜಿ
ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on: Nov 17, 2022 | 6:30 AM

Share

ಆರ್ಯವರ್ಧನ್ ಗುರೂಜಿ (Aryavardan Guruji) ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಕಳೆದ ವಾರ ಅವರು ಬಿಗ್ ಬಾಸ್​ ಮನೆಯಿಂದ ಎಲಿಮಿನೇಟ್ ಆಗಿದ್ದರು. ಆದರೆ, ನೋ ಎಲಿಮಿನೇಷನ್ ವೀಕ್ ಆದ ಕಾರಣ ಆರ್ಯವರ್ಧನ್ ಅವರು ಬಚಾವ್ ಆಗಿದ್ದಾರೆ. ಮನೆಯ ಬಾಗಿಲವರೆಗೆ ಹೋಗಿದ್ದ ಅವರು ಬಚಾವ್ ಆಗಿ ಮರಳಿದ್ದರು. ಈಗ ಬಿಗ್ ಬಾಸ್ ಮನೆಯಲ್ಲಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಆರ್ಯವರ್ಧನ್ ಅವರು ಯಾವ ರೀತಿ ಎಂಬುದನ್ನು ತಿಳಿದುಕೊಳ್ಳೋಕೆ ಅನೇಕರಿಂದ ಸಾಧ್ಯವೇ ಆಗಿಲ್ಲ. ಇದಕ್ಕೆ ಕಾರಣವೂ ಇದೆ. ಅವರು ಒಂದೊಂದು ಕ್ಷಣಕ್ಕೂ ಒಂದೊಂದು ರೀತಿ ಇರುತ್ತಾರೆ. ಕೆಲವೊಮ್ಮೆ ಮುಗ್ಧರಂತೆ ಕಾಣುವ ಅವರು ಮತ್ತೊಂದು ಕ್ಷಣ ಪ್ರಬುದ್ಧರಾಗಿ ಕಾಣುತ್ತಾರೆ. ಒಮ್ಮೆ ಬುದ್ಧಿವಂತರಂತೆ ಕಾಣಿಸುವ ಅವರು ಕೆಲವೊಮ್ಮೆ ದಡ್ಡರ ರೀತಿ ಕಾಣಿಸುತ್ತಾರೆ.

ಈಗ ಬಿಗ್ ಬಾಸ್ ಮನೆಯಲ್ಲಿ ಅವರು ರೂಪೇಶ್ ಶೆಟ್ಟಿ ಜತೆ ಮಾತನಾಡಿದ್ದಾರೆ. ಮನೆ ಮಂದಿಗೆ ತಾನು ಕೇರ್ ಮಾಡಲ್ಲ ಎಂಬ ವಿಚಾರವನ್ನು ಅವರು ಹೇಳಿದ್ದಾರೆ. ‘12 ವರ್ಷ ಕರ್ನಾಟಕವನ್ನು ಚಕ್ರವರ್ತಿಯಾಗಿ ಆಳಿದ್ದೇನೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ನಾನು ಯಾರು ಅಂತ ಗೊತ್ತು. ಇವರತ್ರಲ್ಲ ಸುಮ್ನೆ ಯಾಕೆ ದ್ವೇಷ ಕಟ್ಟಿಕೊಳ್ಳಬೇಕು? ಎಂದು ಗುರೂಜಿ ಹೇಳಿದ್ದಾರೆ. ಅವರ ಮಾತನ್ನು ಕೇಳಿ ರೂಪೇಶ್ ಶೆಟ್ಟಿ ತಲೆ ಆಡಿಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಬಿಗ್ ಬಾಸ್ ಮನೆಯಲ್ಲಿ ವೈಲೆಂಟ್ ಆದ ಗುರೂಜಿ

ಬಿಗ್ ಬಾಸ್ ಮನೆಯಲ್ಲಿ ಗೊಂಬೆ ಮಾಡುವ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್​ ಆಡುವ ವೇಳೆ ಇಡೀ ಮನೆ ರಣರಂಗವಾಗಿದೆ. ಆರ್ಯವರ್ಧನ್ ಗುರೂಜಿ ಕೂಡ ಸಿಟ್ಟಾಗಿದ್ದಾರೆ. ರೂಪೇಶ್ ರಾಜಣ್ಣ ಹಾಗೂ ಆರ್ಯವರ್ಧನ್ ಮಧ್ಯೆ ದೊಡ್ಡ ವಾಗ್ವಾದ ಏರ್ಪಟ್ಟಿದೆ.

ಇದನ್ನೂ ಓದಿ: ‘ಬ್ರಹ್ಮದೇವ ಯಾಕಿಂಗೆ ಮಾಡಿದೆ, ಇನ್ನು ಈ ತಪ್ಪು ಮಾಡಲ್ಲ’; ನೆಲದಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್

ಆರ್ಯವರ್ಧನ್ ಕೈ ಹಿಡಿದು ಎಳೆದರು ಎಂದು ಅರುಣ್ ಸಾಗರ್ ಅವರು ಆರೋಪ ಮಾಡಿದರು. ಈ ವಿಚಾರದಲ್ಲೂ ಗುರೂಜಿ ಹಾಗೂ ಅರುಣ್ ಸಾಗರ್ ಮಧ್ಯೆ ವಾಗ್ವಾದ ನಡೆಯಿತು. ಅರುಣ್ ಸಾಗರ್ ಅವರು ಟೆಂಪರ್ ಕಳೆದುಕೊಂಡು ಅತೀ ಸಿಟ್ಟಲ್ಲಿ ವರ್ತಿಸಿದರು. ಅವರನ್ನು ನೋಡಿ ಮನೆ ಮಂದಿ ಒಮ್ಮೆ ಭಯಗೊಂಡರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್