AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಿಂದ ಹೊರ ನಡೆಯಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ; ಈ ವೀಕೆಂಡ್​ನಲ್ಲೇ ಎಲಿಮಿನೇಷನ್​?

ಸದ್ಯ ಆರ್ಯವರ್ಧನ್ ಅವರ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ವೀಕೆಂಡ್ ಎಲಿಮಿನೇಷ​ನ್​ನಲ್ಲಿ ಸುದೀಪ್ ಬಳಿ ಆರ್ಯವರ್ಧನ್ ಈ ವಿಚಾರ ಪ್ರಸ್ತಾಪ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಬಿಗ್ ಬಾಸ್​ನಿಂದ ಹೊರ ನಡೆಯಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ; ಈ ವೀಕೆಂಡ್​ನಲ್ಲೇ ಎಲಿಮಿನೇಷನ್​?
ಆರ್ಯವರ್ಧನ್
TV9 Web
| Edited By: |

Updated on: Oct 11, 2022 | 3:52 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 8’ಕ್ಕೆ (BBK 8) ನಟಿ ವೈಜಯಂತಿ ಅಡಿಗ ಅವರು ವೈಲ್ಡ್ ಕಾರ್ಡ್​ ಎಂಟ್ರಿ ಮೂಲಕ ಬಿಗ್ ಬಾಸ್ ಮನೆಗೆ ಬಂದಿದ್ದರು. ದೊಡ್ಮನೆಗೆ ಬಂದ ಕೆಲವೇ ದಿನಗಳಲ್ಲಿ ಅವರು ಹೊರ ನಡೆದಿದ್ದರು. ಆ ವಾರ ಶಮಂತ್ ಬ್ರೋ ಗೌಡ ಅವರು ಎಲಿಮಿನೇಟ್ ಆಗಬೇಕಿತ್ತು. ಆದರೆ, ಅವರನ್ನು ಉಳಿಸಿ ವೈಜಯಂತಿ ಅವರು ಸ್ವ ಇಚ್ಛೆಯಿಂದ ಹೊರ ಬಂದರು. ಈ ಬಾರಿ ಆರ್ಯವರ್ಧನ್ ಗುರೂಜಿ ಅವರು ಇದೇ ರೀತಿಯಲ್ಲಿ ಬಿಗ್ ಬಾಸ್​ನಿಂದ ಹೊರ ಬರಲು ನಿರ್ಧರಿಸಿದಂತಿದೆ. ರೂಪೇಶ್ ಶೆಟ್ಟಿ (Roopesh Shetty) ಬಳಿ ಈ ವಿಚಾರವನ್ನು ಆರ್ಯವರ್ಧನ್ ಹಂಚಿಕೊಂಡಿದ್ದಾರೆ. ಇದನ್ನು ಕೇಳಿ ರೂಪೇಶ್ ಶೆಟ್ಟಿ ಅಚ್ಚರಿಗೊಂಡಿದ್ದಾರೆ.

ಈ ವಾರ ಆರ್ಯವರ್ಧನ್ ಅವರು ಕ್ಯಾಪ್ಟನ್ ಆಗಿದ್ದಾರೆ. ಹೀಗಾಗಿ, ಅವರ ಹೆಸರನ್ನು ನಾಮಿನೇಷನ್​ಗೆ ತೆಗೆದುಕೊಳ್ಳುವಂತಿರಲಿಲ್ಲ. ಈ ವಾರ ರೂಪೇಶ್ ರಾಜಣ್ಣ, ಪ್ರಶಾಂತ್ ಸಂಬರ್ಗಿ, ದರ್ಶ್ ಚಂದ್ರಪ್ಪ, ದಿವ್ಯಾ ಉರುಡುಗ, ಮಯೂರಿ, ವಿನೋದ್ ಗೊಬ್ಬರಗಾಲ, ದೀಪಿಕಾ ದಾಸ್, ರೂಪೇಶ್ ಶೆಟ್ಟಿ, ಅಮೂಲ್ಯ ಗೌಡ ಹಾಗೂ ಅನುಪಮಾ ಗೌಡ ಅವರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈ ಪೈಕಿ ಅತಿ ಕಡಿಮೆ ವೋಟ್ ಪಡೆದ ಒಬ್ಬರು ಮನೆಯಿಂದ ಹೊರ ಹೋಗಲಿದ್ದಾರೆ. ಆದರೆ, ಈ ವಾರ ಗುರೂಜಿ ತಾವು ಮನೆಯಿಂದ ಹೊರ ಹೋಗಲು ನಿರ್ಧರಿಸಿದ್ದಾರೆ.

‘ಈ ವಾರ ನನ್ನನ್ನು ಕಳಿಸಿಕೊಡಿ ಅಂತ ಕೇಳ್ತೀನಿ’ ಎಂದು ರೂಪೇಶ್ ಬಳಿ ಹೇಳಿದರು ಗುರೂಜಿ. ‘ಆರಾಮಾಗಿ ಇದೀರಲ್ಲ. ಮತ್ಯಾಕೆ ಹೋಗೋ ಚಿಂತೆ? ಈಗ ಮನೆಯಿಂದ ಔಟ್ ಆದ್ರೆ ಮತ್ತೆ ನೀವು ಬರೋಕೆ ಆಗಲ್ಲ’ ಎಂದು ಹೇಳಿದರು ರೂಪೇಶ್. ‘ಆಯ್ಕೆ ಇದ್ರೆ ಕಳಿಸಿಕೊಡಿ ಎಂದು ಕೇಳ್ತಿನಿ. ಹಾಗೆ ಆಯ್ಕೆ ಇಲ್ಲ ಅಂದ್ರೆ ಇಲ್ಲೇ ಮುಂದುವರಿಯುತ್ತೀನಿ. ನಾನು ಮನೆಯಿಂದ ಹೊರಹೋಗಬೇಕು. ಇಲ್ಲಿ​ಗೆ ಬಂದು ಏನು ಆಗಬೇಕಿಲ್ಲ. 10 ವಾರ ಇದ್ರೂ ನನ್ನ ವೈಕ್ತಿತ್ವ ಇರೋದು ಹೀಗೆ. ಇನ್ನೂ 10 ವಾರ ಇದ್ರೂ ನಾನು ಹೀಗೆ ಇರೋದು. ಇಷ್ಟು ದಿನ ಇದ್ದಿದ್ದು ಖುಷಿ ನೀಡಿದೆ. ಇಲ್ಲೇನು ನಾವು ಎಂಜಾಯ್ ಮಾಡ್ತಿದೀವಲ್ಲ ಅದಕ್ಕೆ ಬೆಲೆ ಇಲ್ಲ’ ಎಂದು ಆರ್ಯವರ್ಧನ್ ಹೇಳಿದ್ದಾರೆ.

ಇದನ್ನೂ ಓದಿ
Image
ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್
Image
‘ಬಿಗ್ ಬಾಸ್ ಶುರುವಾದಾಗ ನಾನು ಬಂದು ಪ್ರೀತಿ ಮಾಡಿ ಅಂತ ಹೇಳಿದ್ನಾ?’; ಸುದೀಪ್ ಪ್ರಶ್ನೆಗೆ ಕಂಗಾಲಾದ ರೂಪೇಶ್
Image
ರೂಪೇಶ್ ಶೆಟ್ಟಿ-ಸಾನ್ಯಾ ಮಧ್ಯೆ ಬಂದ ಕಾವ್ಯಶ್ರೀ ಗೌಡ; ಐಯ್ಯರ್ ಕಣ್ಣಲ್ಲಿ ತುಂಬಿತು ನೀರು
Image
BBK 9: ‘ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿನ್ನರ್’; ಏನಿದು ಸಮಾಚಾರ?

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಚಿನ್ನದ ಗಣಿ ಟಾಸ್ಕ್​; ವೀಕ್ಷಕರಿಗೆ ನೆನಪಾಯ್ತು ‘ಕೆಜಿಎಫ್’ ಸಿನಿಮಾ

ಸದ್ಯ ಆರ್ಯವರ್ಧನ್ ಅವರ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ವೀಕೆಂಡ್ ಎಲಿಮಿನೇಷ​ನ್​ನಲ್ಲಿ ಸುದೀಪ್ ಬಳಿ ಆರ್ಯವರ್ಧನ್ ಈ ವಿಚಾರ ಪ್ರಸ್ತಾಪ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್