ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಇವರೇ: ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

Bigg Boss: ಬಿಗ್​ಬಾಸ್ ಕನ್ನಡ ಸೀಸನ್ 10 ಪ್ರಾರಂಭವಾಗಿ ತಿಂಗಳು ಕಳೆದಿದ್ದು, ಆಟ ಈಗ ತುಸು ಹೆಚ್ಚೇ ರಂಗೇರಿದೆ. ಸ್ಪರ್ಧಿಗಳ ನಡುವೆ ಟಾಸ್ಕ್​ಗಳ ವಿಷಯದಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಬಿಗ್​ಬಾಸ್ ವಿನ್ನರ್ ಯಾರಾಗಲಿದ್ದಾರೆ ಎಂಬ ಊಹೆ ಈಗ ಸುಲಭವಿಲ್ಲ. ಆದರೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಈ ಬಾರಿ ಬಿಗ್​ಬಾಸ್ ಯಾರು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಇವರೇ: ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ
ಆರ್ಯವರ್ಧನ್ ಗುರೂಜಿ
Follow us
|

Updated on: Nov 08, 2023 | 8:39 PM

ಬಿಗ್​ಬಾಸ್ (Bigg Boss) ಕನ್ನಡ ಸೀಸನ್ 10 ಶುರುವಾಗಿ ತಿಂಗಳು ಕಳೆಯುತ್ತಾ ಬಂದಿದೆ. ಸ್ಪರ್ಧಿಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಮನೆಯಲ್ಲಿ ಎರಡು ಗುಂಪುಗಳಾಗಿದ್ದು ಪರಸ್ಪರರ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಸ್ಪರ್ಧಿಗಳು. ಪ್ರತಿ ಟಾಸ್ಕ್​ನಲ್ಲಿಯೂ ಗೆಲ್ಲಲೇ ಬೇಕೆಂಬ ಛಲವನ್ನು ಇತ್ತಂಡಗಳ ಸದಸ್ಯರೂ ತೋರಿಸುತ್ತಿದ್ದಾರೆ. ಬಿಗ್​ಬಾಸ್ ಫೈನಲಿಸ್ಟ್​ಗಳಾಗಲು ಅರ್ಹತೆಯುಳ್ಳ ಹಲವು ಸ್ಪರ್ಧಿಗಳು ಬಿಗ್​ಬಾಸ್ ಮನೆಯಲ್ಲಿದ್ದು ಯಾರು ಗೆಲ್ಲಬಹುದೆಂಬ ಊಹೆ ಈ ಹಂತದಲ್ಲಿ ಸುಲಭವಾಗಿಲ್ಲ. ಈ ನಡುವೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಈ ಬಾರಿ ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಯಾರೆಂದು ಭವಿಷ್ಯ ನುಡಿದಿದ್ದಾರೆ.

ಆರ್ಯವರ್ಧನ್ ಗುರೂಜಿ ಭವಿಷ್ಯದಂತೆ ಈ ಬಾರಿ ವರ್ತೂರು ಸಂತೋಷ್ ಅವರು ಬಿಗ್​ಬಾಸ್ ಗೆಲ್ಲುತ್ತಾರಂತೆ. ”ವರ್ತೂರು ಸಂತೋಷ್ ಅವರದ್ದು ಮೀನ ರಾಶಿ ಅವರಿಗೆ ಅನುಕೂಲಕರ ವಾತಾವರಣ ಇದೆ. ಅವರು ಒಳ್ಳೆಯ ವ್ಯಕ್ತಿ, ರೈತನ ಮಗ. ಬಿಗ್​ಬಾಸ್ ಮನೆಯಲ್ಲಿ ಬಹುತೇಕರು ಸಿನಿಮಾ ಹಾಗೂ ಟಿವಿ ಸೀರಿಯಲ್​ನವರೇ ಇದ್ದಾರೆ. ಅವರು ಪರಸ್ಪರರ ಬಗ್ಗೆ ತಿಳಿದಿರುವವರು, ಜನರಿಗೂ ಅವರ ಬಗ್ಗೆ ತಿಳಿದಿದೆ. ಆದರೆ ವರ್ತೂರು ಸಂತೋಷ್​ಗೆ ಅದೆಲ್ಲ ಗೊತ್ತಿಲ್ಲ. ಮನೆಯ ಒಳಗೆ ಅವರನ್ನು ಕುಗ್ಗಿಸಲಾಗಿದೆ, ಹೊರಗೆ ಕಾನೂನು ರೀತಿಯಾಗಿಯೂ ಅವರನ್ನು ಕುಗ್ಗಿಸಲಾಗಿದೆ. ಜನ ಅವರನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​

”ನನ್ನ ಶಿಷ್ಯರೊಬ್ಬರಿಗೆ ವರ್ತೂರು ಸಂತೋಷ್ ಬಹಳ ಆತ್ಮೀಯರು. ನಮಗೂ ಬೇಕಾದವರು. ಜನ ವರ್ತೂರು ಸಂತೋಷ್​ಗೆ ಬೆಂಬಲ ನೀಡಬೇಕು, ಎಲ್ಲರೂ ವರ್ತೂರು ಸಂತೋಷ್ ಅವರ ಚಿತ್ರ, ವಿಡಿಯೋಗಳನ್ನು ಫೇಸ್​ಬುಕ್, ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಬೇಕು. ನನಗೆ ತಿಳಿದಂತೆ ವರ್ತೂರು ಸಂತೋಷ್ ಚೆನ್ನಾಗಿ ಮನೊರಂಜನೆ ನೀಡುವ ವ್ಯಕ್ತಿ, ಆದರೆ ಹೊರಗೆ ಆಗಿರುವ ಘಟನೆಯಿಂದ ಅವರು ಸ್ವಲ್ಪ ವೀಕ್ ಆಗಿರಬಹುದು. ಈ ಹಂತದಲ್ಲಿ ಜನರ ಬೆಂಬಲ ಅವರಿಗೆ ಬೇಕು, ಒಬ್ಬ ಬ್ಯಾಟ್ಸ್​ಮ್ಯಾನ್ 100 ಹೊಡೆಯಬೇಕೆಂದರೆ ಆರಂಭದ ಕೆಲವು ಬಾಲ್​ಗಳನ್ನು ರಕ್ಷಣಾತ್ಮಕವಾಗಿ ಆಡಲೇ ಬೇಕಾಗುತ್ತದೆ” ಎಂದಿದ್ದಾರೆ ಆರ್ಯವರ್ಧನ್ ಗುರೂಜಿ.

ಆರ್ಯವರ್ಧನ್ ಗುರೂಜಿ ತಮ್ಮ ಭಿನ್ನ ಶೈಲಿಯ ಭವಿಷ್ಯ ನುಡಿಯುವಿಕೆಯಿಂದ ಜನಪ್ರಿಯತೆ ಗಳಿಸಿದ್ದರು. ಆ ಬಳಿಕ ಅವರನ್ನು ಮೊದಲ ಬಿಗ್​ಬಾಸ್ ಒಟಿಟಿ ಸೀಸನ್​ಗೆ ಸ್ಪರ್ಧಿಯಾಗಿ ಆಯ್ಕೆ ಮಾಡಲಾಯ್ತು. ಅಲ್ಲಿ ತಮ್ಮ ಮಾತು, ಟಾಸ್ಕ್​ನಿಂದ ಗಮನ ಸೆಳೆದ ಆರ್ಯವರ್ಧನ್ ಗುರೂಜಿ ಪ್ರೇಕ್ಷಕರ ಮನ ಗೆದ್ದರು. ಮಾತ್ರವಲ್ಲದೆ ಅಂತಿಮ ನಾಲ್ಕು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದು, ಬಿಗ್​ಬಾಸ್ ಸೀಸನ್ 9ರಲ್ಲಿಯೂ ಪಾಲ್ಗೊಂಡು ಹಲವು ದಿನ ಬಿಗ್​ಬಾಸ್ ಮನೆಯಲ್ಲಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್