AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಇವರೇ: ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ

Bigg Boss: ಬಿಗ್​ಬಾಸ್ ಕನ್ನಡ ಸೀಸನ್ 10 ಪ್ರಾರಂಭವಾಗಿ ತಿಂಗಳು ಕಳೆದಿದ್ದು, ಆಟ ಈಗ ತುಸು ಹೆಚ್ಚೇ ರಂಗೇರಿದೆ. ಸ್ಪರ್ಧಿಗಳ ನಡುವೆ ಟಾಸ್ಕ್​ಗಳ ವಿಷಯದಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಬಿಗ್​ಬಾಸ್ ವಿನ್ನರ್ ಯಾರಾಗಲಿದ್ದಾರೆ ಎಂಬ ಊಹೆ ಈಗ ಸುಲಭವಿಲ್ಲ. ಆದರೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಈ ಬಾರಿ ಬಿಗ್​ಬಾಸ್ ಯಾರು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಇವರೇ: ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ
ಆರ್ಯವರ್ಧನ್ ಗುರೂಜಿ
ಮಂಜುನಾಥ ಸಿ.
|

Updated on: Nov 08, 2023 | 8:39 PM

Share

ಬಿಗ್​ಬಾಸ್ (Bigg Boss) ಕನ್ನಡ ಸೀಸನ್ 10 ಶುರುವಾಗಿ ತಿಂಗಳು ಕಳೆಯುತ್ತಾ ಬಂದಿದೆ. ಸ್ಪರ್ಧಿಗಳ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಮನೆಯಲ್ಲಿ ಎರಡು ಗುಂಪುಗಳಾಗಿದ್ದು ಪರಸ್ಪರರ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಸ್ಪರ್ಧಿಗಳು. ಪ್ರತಿ ಟಾಸ್ಕ್​ನಲ್ಲಿಯೂ ಗೆಲ್ಲಲೇ ಬೇಕೆಂಬ ಛಲವನ್ನು ಇತ್ತಂಡಗಳ ಸದಸ್ಯರೂ ತೋರಿಸುತ್ತಿದ್ದಾರೆ. ಬಿಗ್​ಬಾಸ್ ಫೈನಲಿಸ್ಟ್​ಗಳಾಗಲು ಅರ್ಹತೆಯುಳ್ಳ ಹಲವು ಸ್ಪರ್ಧಿಗಳು ಬಿಗ್​ಬಾಸ್ ಮನೆಯಲ್ಲಿದ್ದು ಯಾರು ಗೆಲ್ಲಬಹುದೆಂಬ ಊಹೆ ಈ ಹಂತದಲ್ಲಿ ಸುಲಭವಾಗಿಲ್ಲ. ಈ ನಡುವೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಈ ಬಾರಿ ಬಿಗ್​ಬಾಸ್ ಗೆಲ್ಲುವ ಸ್ಪರ್ಧಿ ಯಾರೆಂದು ಭವಿಷ್ಯ ನುಡಿದಿದ್ದಾರೆ.

ಆರ್ಯವರ್ಧನ್ ಗುರೂಜಿ ಭವಿಷ್ಯದಂತೆ ಈ ಬಾರಿ ವರ್ತೂರು ಸಂತೋಷ್ ಅವರು ಬಿಗ್​ಬಾಸ್ ಗೆಲ್ಲುತ್ತಾರಂತೆ. ”ವರ್ತೂರು ಸಂತೋಷ್ ಅವರದ್ದು ಮೀನ ರಾಶಿ ಅವರಿಗೆ ಅನುಕೂಲಕರ ವಾತಾವರಣ ಇದೆ. ಅವರು ಒಳ್ಳೆಯ ವ್ಯಕ್ತಿ, ರೈತನ ಮಗ. ಬಿಗ್​ಬಾಸ್ ಮನೆಯಲ್ಲಿ ಬಹುತೇಕರು ಸಿನಿಮಾ ಹಾಗೂ ಟಿವಿ ಸೀರಿಯಲ್​ನವರೇ ಇದ್ದಾರೆ. ಅವರು ಪರಸ್ಪರರ ಬಗ್ಗೆ ತಿಳಿದಿರುವವರು, ಜನರಿಗೂ ಅವರ ಬಗ್ಗೆ ತಿಳಿದಿದೆ. ಆದರೆ ವರ್ತೂರು ಸಂತೋಷ್​ಗೆ ಅದೆಲ್ಲ ಗೊತ್ತಿಲ್ಲ. ಮನೆಯ ಒಳಗೆ ಅವರನ್ನು ಕುಗ್ಗಿಸಲಾಗಿದೆ, ಹೊರಗೆ ಕಾನೂನು ರೀತಿಯಾಗಿಯೂ ಅವರನ್ನು ಕುಗ್ಗಿಸಲಾಗಿದೆ. ಜನ ಅವರನ್ನು ಬೆಂಬಲಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​

”ನನ್ನ ಶಿಷ್ಯರೊಬ್ಬರಿಗೆ ವರ್ತೂರು ಸಂತೋಷ್ ಬಹಳ ಆತ್ಮೀಯರು. ನಮಗೂ ಬೇಕಾದವರು. ಜನ ವರ್ತೂರು ಸಂತೋಷ್​ಗೆ ಬೆಂಬಲ ನೀಡಬೇಕು, ಎಲ್ಲರೂ ವರ್ತೂರು ಸಂತೋಷ್ ಅವರ ಚಿತ್ರ, ವಿಡಿಯೋಗಳನ್ನು ಫೇಸ್​ಬುಕ್, ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಬೇಕು. ನನಗೆ ತಿಳಿದಂತೆ ವರ್ತೂರು ಸಂತೋಷ್ ಚೆನ್ನಾಗಿ ಮನೊರಂಜನೆ ನೀಡುವ ವ್ಯಕ್ತಿ, ಆದರೆ ಹೊರಗೆ ಆಗಿರುವ ಘಟನೆಯಿಂದ ಅವರು ಸ್ವಲ್ಪ ವೀಕ್ ಆಗಿರಬಹುದು. ಈ ಹಂತದಲ್ಲಿ ಜನರ ಬೆಂಬಲ ಅವರಿಗೆ ಬೇಕು, ಒಬ್ಬ ಬ್ಯಾಟ್ಸ್​ಮ್ಯಾನ್ 100 ಹೊಡೆಯಬೇಕೆಂದರೆ ಆರಂಭದ ಕೆಲವು ಬಾಲ್​ಗಳನ್ನು ರಕ್ಷಣಾತ್ಮಕವಾಗಿ ಆಡಲೇ ಬೇಕಾಗುತ್ತದೆ” ಎಂದಿದ್ದಾರೆ ಆರ್ಯವರ್ಧನ್ ಗುರೂಜಿ.

ಆರ್ಯವರ್ಧನ್ ಗುರೂಜಿ ತಮ್ಮ ಭಿನ್ನ ಶೈಲಿಯ ಭವಿಷ್ಯ ನುಡಿಯುವಿಕೆಯಿಂದ ಜನಪ್ರಿಯತೆ ಗಳಿಸಿದ್ದರು. ಆ ಬಳಿಕ ಅವರನ್ನು ಮೊದಲ ಬಿಗ್​ಬಾಸ್ ಒಟಿಟಿ ಸೀಸನ್​ಗೆ ಸ್ಪರ್ಧಿಯಾಗಿ ಆಯ್ಕೆ ಮಾಡಲಾಯ್ತು. ಅಲ್ಲಿ ತಮ್ಮ ಮಾತು, ಟಾಸ್ಕ್​ನಿಂದ ಗಮನ ಸೆಳೆದ ಆರ್ಯವರ್ಧನ್ ಗುರೂಜಿ ಪ್ರೇಕ್ಷಕರ ಮನ ಗೆದ್ದರು. ಮಾತ್ರವಲ್ಲದೆ ಅಂತಿಮ ನಾಲ್ಕು ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದು, ಬಿಗ್​ಬಾಸ್ ಸೀಸನ್ 9ರಲ್ಲಿಯೂ ಪಾಲ್ಗೊಂಡು ಹಲವು ದಿನ ಬಿಗ್​ಬಾಸ್ ಮನೆಯಲ್ಲಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ