AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ

BBK9: ‘ಸರ್ಕಾರದ ದಾಖಲೆಯಲ್ಲಿ ನಿಮ್ಮ ಹೆಸರು ಆರ್ಯವರ್ಧನ್​ ಅಂತ ಇಲ್ಲ. ನಿಜವಾದ ಹೆಸರು ಬೇರೆ ಇದೆ’ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
ಪ್ರಶಾಂತ್ ಸಂಬರ್ಗಿ, ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on: Sep 25, 2022 | 10:22 PM

Share

ಬಿಗ್​ ಬಾಸ್​ ಮನೆಯಲ್ಲಿ ಮೊದಲ ದಿನವೇ ಜಗಳ ನಡೆದಿದೆ. ಇದೆಲ್ಲ ದೊಡ್ಮನೆಯಲ್ಲಿ ಕಾಮನ್​. ಒಬ್ಬರನ್ನು ಇನ್ನೊಬ್ಬರು ಟಾರ್ಗೆಟ್​ ಮಾಡುವುದು ತೀರಾ ಸಹಜ. ಆದರೆ ಅದೆಲ್ಲವೂ ಬಿಗ್​ ಬಾಸ್​ ಮನೆಯೊಳಗಿನ ವಿಷಯಕ್ಕೆ ಸೀಮಿತವಾಗಿದ್ದರೆ ಚೆನ್ನ. ಆದರೆ ಪ್ರಶಾಂತ್​ ಸಂಬರ್ಗಿ (Prashanth Sambargi) ಅವರು ಪ್ರತಿಸ್ಪರ್ಧಿಗಳನ್ನು ಪರ್ಸನಲ್ ಆಗಿ ಟಾರ್ಗೆಟ್​ ಮಾಡುತ್ತಾರೆ. ಕಳೆದ ಸೀಸನ್​ನಲ್ಲಿಯೂ ಅವರು ಇದೇ ರೀತಿ ವರ್ತಿಸಿದ್ದರು. ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಆರಂಭ ಆಗಿದ್ದು, ಆರ್ಯರ್ವಧನ್​ ಗುರೂಜಿ (Aryavardhan Guruji) ಬಗ್ಗೆ ಪ್ರಶಾಂತ್​ ಸಂಬರ್ಗಿ ಮಾತನಾಡಿದ್ದಾರೆ. ಅವರ ಪ್ರಕಾರ ಗುರೂಜಿಯ ನಿಜವಾದ ಹೆಸರು ಆರ್ಯವರ್ಧನ್​ ಅಲ್ಲವೇ ಅಲ್ಲವಂತೆ!

ಬಿಗ್​ ಬಾಸ್​ ಮನೆಗೆ ಬರುವುದಕ್ಕೂ ಮುನ್ನ ಸಂಖ್ಯಾಶಾಸ್ತ್ರ ಹೇಳುವ ಮೂಲಕ ಆರ್ಯವರ್ಧನ್​ ಗುರೂಜಿ ಫೇಮಸ್​ ಆಗಿದ್ದರು. ಕೆಲವೊಮ್ಮೆ ಟ್ರೋಲ್​ ಆಗಿದ್ದು ಕೂಡ ಉಂಟು. ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಮೂಲಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ಟಿವಿ ಸೀಸನ್​ಗೂ ಕಾಲಿಟ್ಟಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅವರನ್ನು ಮೊದಲ ದಿನವೇ ಪ್ರಶಾಂತ್ ಸಂಬರ್ಗಿ ಟಾರ್ಗೆಟ್​ ಮಾಡಿದ್ದಾರೆ.

ಮಾತಿನ ಮಧ್ಯದಲ್ಲಿ ಸಂಬರ್ಗಿ ಎನ್ನುವ ಬದಲು ಸಂಪಗಿ ಎಂದರು ಆರ್ಯವರ್ಧನ್​. ಅಲ್ಲಿಂದ ಹೊಸ ಚರ್ಚೆಯೇ ಶುರುವಾಯಿತು. ‘ಹಾಗಾದ್ರೆ ನಿಮ್ಮ ನಿಜವಾದ ಹೆಸರು ಏನು ಅಂತ ನಾನು ಹೇಳ್ಲಾ? ನೀವು ವಿಷ್ಣುವರ್ಧನ್​ ರೀತಿ ವರ್ಧನ್​ ಅಂತ ಸೇರಿಸಿಕೊಂಡಿದ್ದೀರಿ. ಸರ್ಕಾರದ ದಾಖಲೆಯಲ್ಲಿ ನಿಮ್ಮ ಹೆಸರು ಆರ್ಯವರ್ಧನ್​ ಅಂತ ಇಲ್ಲ. ನಿಜವಾದ ಹೆಸರು ಏನು ಅನ್ನೋದನ್ನು ಸುದೀಪ್​ ಎದುರು ಹೇಳ್ತೀನಿ’ ಎಂದಿದ್ದಾರೆ ಪ್ರಶಾಂತ್​ ಸಂಬರ್ಗಿ. ಈ ವಿಚಾರದಲ್ಲಿ ಚರ್ಚೆ ಮುಂದುವರಿಯಿತು. ಆಗ ತಮ್ಮ ಹೆಸರು ಸುಬ್ರಹ್ಮಣ್ಯ ಎಂದು ಆರ್ಯವರ್ಧನ್​ ಗುರೂಜಿ ಹೇಳಿದರು.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ಮೊದಲ ದಿನವೇ ಬಿಗ್​ ಬಾಸ್​ನಲ್ಲಿ ನಾಮಿನೇಷನ್​ ಪ್ರಕ್ರಿಯೆ ಆರಂಭ ಆಗಿದೆ. ಪ್ರವೀಣರು ಮತ್ತು ನವೀನರು ಜೋಡಿಯಾಗಿ ಆಟ ಆಡಬೇಕಿದೆ. ನಾಮಿನೇಷನ್​ ಪ್ರಕ್ರಿಯೆ ಕೂಡ ಜೋಡಿಯಾಗಿಯೇ ನಡೆದಿದೆ. 18 ಜನರು ಸದ್ಯ ಬಿಗ್​ ಬಾಸ್​ ಮನೆಯಲ್ಲಿ ಇದ್ದಾರೆ. ಸುಮಾರು ನೂರು ದಿನಗಳ ಕಾಲ ನಡೆಯುವ ಈ ಶೋನಲ್ಲಿ ಕೊನೆವರೆಗೂ ಉಳಿದುಕೊಳ್ಳಬೇಕು ಎಂಬ ಆಸೆಯೊಂದಿಗೆ ಎಲ್ಲರೂ ಪೈಪೋಟಿ ಆರಂಭಿಸಿದ್ದಾರೆ.

ಹೊಸಬರು ಮತ್ತು ಹಳಬರು ಇರುವ ಈ ಶೋ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಬೇರೆ ರೀತಿಯ ಫೀಲ್​ ನೀಡುತ್ತಿದೆ. ಮೊದಲ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ