AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ’; ‘ಹಳ್ಳಿ ಪವರ್​’ ಶೋನಿಂದ ಹೊರ ಬಂದು ಗಂಭೀರ ಆರೋಪ ಮಾಡಿದ ‘ಭೀಮ’ ನಟಿ ಆ್ಯಶ್

‘ಹಳ್ಳಿ ಪವರ್’ ಶೋನಿಂದ ಆಶ್ ಮೆಲೋ ಸ್ಕೈಲರ್ ಹಾಗೂ ಇತರ ಸ್ಪರ್ಧಿಗಳು ನಿರ್ಗಮಿಸಿದ್ದಾರೆ. ಆಶ್ ಮೆಲೋ ಸ್ಕೈಲರ್ ಅವರು ತಮ್ಮ ಮಾತುಗಳನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಶೋನಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದಾಗಿ ಅವರು ಹೇಳಿದ್ದಾರೆ. ಆ ಬಗ್ಗೆ ಚರ್ಚೆ ನಡೆಯುತ್ತಿದೆ.

‘ನನ್ನನ್ನು ಕೆಟ್ಟದಾಗಿ ತೋರಿಸಲಾಗಿದೆ’; ‘ಹಳ್ಳಿ ಪವರ್​’ ಶೋನಿಂದ ಹೊರ ಬಂದು ಗಂಭೀರ ಆರೋಪ ಮಾಡಿದ ‘ಭೀಮ’ ನಟಿ ಆ್ಯಶ್
ಆ್ಯಶ್
ರಾಜೇಶ್ ದುಗ್ಗುಮನೆ
|

Updated on:Sep 10, 2025 | 11:28 AM

Share

ನಗರ ಮಂದಿ ಹಳ್ಳಿಗೆ ಹೋಗಿ ಜೀವನ ನಡೆಸೋದು ಎಂದರೆ ಅದು ಸುಲಭ ಅಲ್ಲವೇ ಅಲ್ಲ. ಹಳ್ಳಿ ಜೀವನದಲ್ಲಿ ಸಾಕಷ್ಟು ಚಾಲೆಂಜ್​ಗಳು ಇರುತ್ತವೆ. ‘ಹಳ್ಳಿ’ ಪವರ್​ನಲ್ಲಿ 12 ಸ್ಪರ್ಧಿಗಳು ತೆರಳಿದ್ದರು. ಈ ಪೈಕಿ ನಾಲ್ವರು ಶೋನಿಂದ ಹೊರ ನಡೆದಿದ್ದಾರೆ. ಒಬ್ಬರು ಎಲಿಮಿನೇಟ್, ಒಬ್ಬರು ಗಾಯಾಳು ಹಾಗೂ ಮತ್ತಿಬ್ಬರು ವೈಯಕ್ತಿಕ ಕಾರಣ ನೀಡಿ ಈ ಆಟದಿಂದ ಹಿಂದೆ ಸರಿದಿದ್ದಾರೆ. ಈ ಮಧ್ಯೆ ಶೋನಿಂದ ಹೊರ ಬಂದ ಆ್ಯಶ್ ಮೆಲೋ ಸ್ಕೈಲರ್ (Ash Melo Skyler) ಒಂದು ಗಂಭೀರ ಆರೋಪ ಮಾಡಿದ್ದಾರೆ.

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿದ ‘ಭೀಮ’ ಸಿನಿಮಾದಲ್ಲಿ ಆ್ಯಶ್ ಮೆಲೋ ಸ್ಕೈಲರ್ ಅವರು ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರೀಲ್ಸ್ ಮಾಡಿಸಿಕೊಂಡು ಫೇಮಸ್ ಆಗಿದ್ದ ಅವರಿಗೆ ಸಿನಿಮಾದಿಂದ ಜನಪ್ರಿಯತೆ ಸಿಕ್ಕಿತು. ಅವರನ್ನು ಬರೋಬ್ಬರಿ 10 ಲಕ್ಷ ಜನರು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದಾರೆ. ಅವರು ಹಳ್ಳಿ ಪವರ್ ಶೋನಲ್ಲಿ ಮಿಂಚಬಹುದು ಎಂದು ಎಲ್ಲರೂ ಊಹಿಸಿದ್ದರು. ಆದರೆ, ಏಳೇ ದಿನಕ್ಕೆ ಅವರು ಸುಸ್ತಾಗಿದ್ದಾರೆ.

ಇದನ್ನೂ ಓದಿ: ‘ಹಳ್ಳಿ ಪವರ್​’ಗೆ ಸುಸ್ತಾದ ಪ್ಯಾಟೆ ಹುಡ್ಗೀರು; ಏಳೇ ದಿನಕ್ಕೆ ನಾಲ್ವರು ಔಟ್

ಇದನ್ನೂ ಓದಿ
Image
Video: ‘ತಡ ಮಾಡದೇ ಮಗು ಮಾಡಿಕೊಳ್ಳಿ’ ಎಂದು ಸಲಹೆ; ಓಕೆ ಎಂದ ಅನುಶ್ರೀ
Image
ರಜನಿಕಾಂತ್ ಉದಾಹರಣೆ ನೀಡಿ ಅಮಿತಾಭ್ ಬಚ್ಚನ್​​ಗೆ ಪಾಠ ಮಾಡಿದ ನೆಟ್ಟಿಗರು
Image
‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್
Image
ಸುಧಾರಾಣಿ ಬಿಗ್ ಬಾಸ್​ಗೆ ಬರ್ತಾರೆ ಎಂದವರಿಗೆ ಉತ್ತರಿಸಿದ ನಟಿ

‘ಹಳ್ಳಿ ಪವರ್’ ಶೋನಲ್ಲಿ ವೈಯಕ್ತಿಕ ಕಾರಣ ನೀಡಿ ಮಂಗಳೂರಿನ ಸ್ನೇಹಾ ಶೆಟ್ಟಿ ಹೊರ ಹೋಗೋದಾಗಿ ಅಕುಲ್ ಬಾಲಾಜಿ ಎದುರು ಹೇಳಿದರು. ಮತ್ತೆ ಯಾರಾದರೂ ಶೋನಿಂದ ಹೊರ ಹೋಗ್ತೀರಿ ಎಂದಾದರೆ ಕೈ ಎತ್ತಿ ಎಂದು ಅಕುಲ್ ಕೇಳಿದರು. ಆಗ, ಆ್ಯಶ್ ಕೈ ಎತ್ತಿದರು. ಈ ವೇಳೆ ಅವರು, ವೈಯಕ್ತಿಕ ಕಾರಣ ಎಂದಷ್ಟೇ ಹೇಳಿದ್ದರು.

ಆ್ಯಶ್ ಪೋಸ್ಟ್

ಆ್ಯಶ್ ಪೋಸ್ಟ್

 

ಶೋನಿಂದ ಹೊರ ಬಂದು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಶ್ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ವಿವರವಾಗಿ ಬರೆದುಕೊಂಡಿದ್ದಾರೆ. ‘ನಾನು ನನ್ನ ಎಲ್ಲಾ ಪ್ರೇಕ್ಷಕರನ್ನು ಮತ್ತು ಕಾರ್ಯಕ್ರಮದ ವೀಕ್ಷಕರನ್ನು ನಿಜವಾಗಿಯೂ ಗೌರವಿಸುತ್ತೇನೆ. ನನ್ನನ್ನು ಕೆಟ್ಟ ರೀತಿಯಲ್ಲಿ ತೋರಿಸಿದ್ದರಿಂದ ಕಾರ್ಯಕ್ರಮವನ್ನು ತೊರೆದಿದ್ದೇನೆ. ನಾನು ಮಾತನಾಡಿದ ಎಲ್ಲಾ ಮಾತುಗಳನ್ನು ನೀವು ನೋಡಿರಬಹುದು. ಅದರಲ್ಲಿ ನಾನು ನನ್ನ ಎಲ್ಲಾ ಪ್ರೇಕ್ಷಕರನ್ನು ಮತ್ತು ಹಳ್ಳಿ ಪವರ್ ಶೋನ ಗೌರವಿಸಿದೆ. ಆದರೆ ನನ್ನ ಮಾತುಗಳನ್ನು ತಪ್ಪಾಗಿ ಚಿತ್ರಿಸಿ, ಕೆಳಕ್ಕೆ ಹಾಕುವ ರೀತಿಯಲ್ಲಿ ತೋರಿಸಲಾಯಿತು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:26 am, Wed, 10 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ