AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ

ಗಿಲ್ಲಿ ನಟ ಅವರು ಕ್ಯಾಪ್ಟನ್ ಆದರೆ ಬಿಗ್ ಬಾಸ್ ಮನೆ ಹೇಗಿರುತ್ತದೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದರು. ಈಗ ಗಿಲ್ಲಿ ಕ್ಯಾಪ್ಟನ್ ಆಗಿದ್ದು, ಅಶ್ವಿನಿ ಗೌಡ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ಆಗಿದೆ. ಜಗಳ ಮಾಡುವಾಗ ಏಕವಚನದಲ್ಲಿ ಮಾತನಾಡಿಸಿದ್ದಕ್ಕೆ ಗಿಲ್ಲಿ ಮೇಲೆ ಅಶ್ವಿನಿ ಗೌಡ ಅವರು ಕೋಪಗೊಂಡಿದ್ದಾರೆ.

ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ
Gilli Nata, Ashwini Gowda
ಮದನ್​ ಕುಮಾರ್​
|

Updated on: Dec 29, 2025 | 10:55 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಈ ಮೊದಲು ಬೇರೆ ಸ್ಪರ್ಧಿಗಳು ಕ್ಯಾಪ್ಟನ್ ಆದಾಗ ಗಿಲ್ಲಿ ನಟ (Gilli Nata) ಅವರು ಕೆಲಸ ಮಾಡಲು ಸೋಮಾರಿತನ ತೋರಿದ್ದರು. ಆದರೆ ಈಗ ಅವರೇ ಕ್ಯಾಪ್ಟನ್ ಆಗಿದ್ದು, ಬೇರೆಯವರು ಅಸಹಕಾರ ತೋರಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಜಗಳ ಆಗಿದೆ. ಅಶ್ವಿನಿ ಗೌಡ (Ashwini Gowda) ಅವರನ್ನು ಗಿಲ್ಲಿ ನಟ ಏಕವಚನದಲ್ಲಿ ಮಾತನಾಡಿಸಿದ್ದಾರೆ. ಇದರಿಂದ ಅಶ್ವಿನಿ ಗೌಡ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ.

ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ ಅವರಿಗೆ ಬಿಗ್ ಬಾಸ್ ಒಂದು ವಿಶೇಷ ಅಧಿಕಾರ ನೀಡಿದರು. ಈ ವಾರ ನಾಮಿನೇಟ್ ಮಾಡುವ ಅವಕಾಶವನ್ನು ಒಬ್ಬರಿಂದ ಕಿತ್ತುಕೊಳ್ಳಬೇಕು ಮತ್ತು ಅದಕ್ಕೆ ಸೂಕ್ತ ಕಾರಣಗಳನ್ನು ನೀಡಬೇಕು ಎಂದು ಬಿಗ್ ಬಾಸ್ ಸೂಚಿಸಿದರು. ಆಗ ಗಿಲ್ಲಿ ನಟ ಅವರು ಈ ಅಧಿಕಾರವನ್ನು ಬಳಸಿ ಅಶ್ವಿನಿ ಗೌಡ ಅವರ ಅವಕಾಶವನ್ನು ಕಿತ್ತುಕೊಂಡರು.

‘ನಾನು ಕ್ಯಾಪ್ಟನ್ ಆಗಿ ಕಿಚನ್ ಕೆಲಸ ಹೇಳಿದರೆ ಅಶ್ವಿನಿ ಗೌಡ ಅವರು ಪ್ರತಿಕ್ರಿಯೆ ಕೂಡ ನೀಡಿಲ್ಲ. ಇತ್ತೀಚೆಗೆ ಅವರು ಮಾತಿನಲ್ಲಿ ಬಹಳ ಶುಗರ್ ಕೋಟಿಂಗ್ ಮಾಡುತ್ತಾರೆ. ಆಣೆ ಮಾಡಿಸಿಕೊಳ್ಳುವಂತಿಲ್ಲ ಎಂಬುದು ರೂಲ್​ ಬುಕ್​​ನಲ್ಲಿ ಇದೆ. ಆದರೂ ಹಾಗೆಯೇ ಮಾಡುತ್ತಿದ್ದಾರೆ. ಹಾಗಾಗಿ ನಾಮಿನೇಷನ್ ಮಾಡುವ ಅಧಿಕಾರವನ್ನು ಅವರಿಂದ ಕಸಿದುಕೊಳ್ಳುತ್ತೇನೆ’ ಎಂದು ಗಿಲ್ಲಿ ನಟ ಹೇಳಿದರು.

ಇದಕ್ಕೆ ಅಶ್ವಿನಿ ಗೌಡ ಅವರು ಪ್ರತಿಕ್ರಿಯೆ ನೀಡುವಂತೆ ಬಿಗ್ ಬಾಸ್ ಸೂಚಿಸಿದರು. ಈ ವೇಳೆ ಮಾತಿಗೆ ಮಾತು ಬೆಳೆಯಿತು. ‘ಮೂರ್ಖರ ಜೊತೆ ಮಾತಾಡೋದಕ್ಕಿಂತ ಮೌನವೇ ಲೇಸು. ಹಾಗಾಗಿ ನಿನ್ನ ಜೊತೆ ಮಾತನಾಡಿ ನಾನು ನನ್ನ ವ್ಯಕ್ತಿತ್ವವನ್ನು ಕೆಳಗೆ ಇಡಲು ಇಷ್ಟಪಡಲ್ಲ. ಕ್ಯಾಪ್ಟನ್ ಆದವರಿಗೆ 2 ಕೊಂಬು ಇರಲ್ಲ. ಈ ಮನೆಯ ಜವಾಬ್ದಾರಿಯನ್ನು ಎಲ್ಲರೂ ಮಾಡಬೇಕು. ನೀನು ಮೊದಲು ಕೆಲಸ ಮಾಡೋದು ಕಲಿ’ ಎಂದು ಅಶ್ವಿನಿ ಗೌಡ ಕೂಗಾಡಿದರು.

ಇದನ್ನೂ ಓದಿ: ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್

‘ನಿನ್ನಂತವನು ಕ್ಯಾಪ್ಟನ್ ಆದರೆ ಇದೇ ಆಗೋದು. ನಾಮಿನೇಷನ್ ಅಧಿಕಾರ ಕಿತ್ತುಕೊಂಡಿದ್ದಕ್ಕೆ ನಾನು ಉತ್ತರ ಕೊಡುತ್ತೇನೆ. ನೀನು ಅಧಿಕಾರಿಂದ ಹೀಗೆ ಮಾಡಿಲ್ಲ. ಇದು ನಿನ್ನ ದುರಹಂಕಾರ. ಇದು ವ್ಯಕ್ತಿತ್ವದ ಆಟ, ದುರಹಂಕಾರದ ಆಟ ಅಲ್ಲ. ನನ್ನನ್ನು 2.0 ರೀತಿ ಇರಲು ಬಿಡು. ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ’ ಎಂದು ಅಶ್ವಿನಿ ಗೌಡ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!