AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುತಂತ್ರದಿಂದ ಜಗಳ ಮಾಡಲು ಬಂದ ಅಶ್ವಿನಿ ಗೌಡ, ಜಾಹ್ನವಿ ಬಾಯಿ ಮುಚ್ಚಿಸಿದ ರಕ್ಷಿತಾ ಶೆಟ್ಟಿ

ಚಿಕ್ಕ ಹುಡುಗಿ ಎಂಬ ಕಾರಣಕ್ಕೆ ರಕ್ಷಿತಾ ಶೆಟ್ಟಿ ಮೇಲೆ ಜಾಹ್ನವಿ, ಅಶ್ವಿನಿ ಗೌಡ ಮುಗಿ ಬಿದ್ದಿದ್ದಾರೆ. ಸುಳ್ಳು ಆರೋಪ ಮಾಡಿ ಜಗಳಕ್ಕೆ ಮುಂದಾಗಿದ್ದಾರೆ. ಆದರೆ ರಕ್ಷಿತಾ ಶೆಟ್ಟಿ ಅವರು ಸ್ವಲ್ಪವೂ ಜಗ್ಗಿಲ್ಲ. ರಕ್ಷಿತಾ ಅವರು ಕಿಂಚಿತ್ತೂ ಹೆದರದೇ ಮಾತಿಗೆ ಮಾತು ಕೊಟ್ಟಿದ್ದಾರೆ. ಅವರ ಧೈರ್ಯಕ್ಕೆ ಇನ್ನುಳಿದವರು ಭೇಷ್ ಎಂದಿದ್ದಾರೆ.

ಕುತಂತ್ರದಿಂದ ಜಗಳ ಮಾಡಲು ಬಂದ ಅಶ್ವಿನಿ ಗೌಡ, ಜಾಹ್ನವಿ ಬಾಯಿ ಮುಚ್ಚಿಸಿದ ರಕ್ಷಿತಾ ಶೆಟ್ಟಿ
Ashwini Gowda, Janhavi, Rakshitha Shetty
ಮದನ್​ ಕುಮಾರ್​
|

Updated on: Oct 17, 2025 | 10:51 PM

Share

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಮತ್ತು ಜಾಹ್ನವಿ ಅವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಇಬ್ಬರೂ ಸೇರಿ ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡಿದ್ದಾರೆ. ಅದಕ್ಕಾಗಿ ಅವರು ಸುಳ್ಳಿನ ದಾರಿ ತುಳಿದಿದ್ದಾರೆ. ತಾವೇ ಮಧ್ಯರಾತ್ರಿಯಲ್ಲಿ ಗೆಜ್ಜೆ ಶಬ್ದ ಮಾಡಿ ಅದನ್ನು ರಕ್ಷಿತಾ ಶೆಟ್ಟಿ (Rakshitha Shetty) ಮೇಲೆ ಹಾಕಲು ಅವರು ಪ್ರಯತ್ನಿಸಿದ್ದಾರೆ. ಆದರೆ ಅದನ್ನು ರಕ್ಷಿತಾ ಶೆಟ್ಟಿ ಒಪ್ಪಿಕೊಂಡಿಲ್ಲ. ತಮ್ಮ ಮೇಲೆ ಬಂದಿರುವ ಆರೋಪವನ್ನು ತಳ್ಳಿ ಹಾಕಿದ್ದಾರೆ. ಅಲ್ಲದೇ, ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಗ್ ಬಾಸ್ (Bigg Boss Kannada Season 12) ಮನೆಯ ಬಹುತೇಕರು ರಕ್ಷಿತಾ ಶೆಟ್ಟಿಯ ಪರ ವಹಿಸಿದ್ದಾರೆ.

ರಕ್ಷಿತಾ ಶೆಟ್ಟಿ ಅವರಿಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಆದರೆ ಕನ್ನಡದ ವಿಚಾರದಲ್ಲಿ ಅಶ್ವಿನಿ ಗೌಡ, ಜಾಹ್ನವಿ ಮೇಲುಗೈ ಹೊಂದಿದ್ದಾರೆ. ಹಾಗಿದ್ದರೂ ಕೂಡ ಜಗಳ ಮಾಡುವಾಗ ರಕ್ಷಿತಾ ಶೆಟ್ಟಿ ಅವರು ಕಿಂಚಿತ್ತೂ ಜಗ್ಗಲಿಲ್ಲ. ತಮ್ಮ ಮೇಲೆ ಒಟ್ಟಿಗೆ ಮುಗಿಬಿದ್ದ ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರಿಗೆ ಸರಿಯಾಗಿ ತಿರುಗೇಟು ಕೊಟ್ಟಿದ್ದಾರೆ.

ಜಗಳ ಆಡುವಾಗ ರಕ್ಷಿತಾ ಶೆಟ್ಟಿ ಅವರು ಸರಿಯಾದ ರೀತಿಯಲ್ಲಿ ವಾದ ಮಾಡಿದ್ದಾರೆ. ಆದರೆ ಜಾಹ್ನವಿ ಮತ್ತು ಅಶ್ವಿನಿ ಗೌಡ ಅವರು ತಲೆ ಬುಡ ಇಲ್ಲದೇ ಜಗಳ ಮಾಡಿದ್ದಾರೆ. ಈ ವಿಚಾರದಲ್ಲಿ ಯಾರು ಸರಿ, ಯಾರು ತಪ್ಪು ಎಂಬುದನ್ನು ತೀರ್ಮಾನ ಮಾಡಲು ಬಂದ ಕಾವ್ಯಾ ಶೈವ ಅವರನ್ನು ವಾಪಸ್ ಕಳಿಸಿದರು. ಹಾಗಾಗಿ ಜಗಳದ ಸಂದರ್ಭದಲ್ಲಿ ರಕ್ಷಿತಾ ಪರವಾಗಿ ಯಾರೂ ಮಾತನಾಡಲು ಸಾಧ್ಯವಾಗಲಿಲ್ಲ. ಒಬ್ಬಂಟಿ ಆದರೂ ಕೂಡ ರಕ್ಷಿತಾ ಶೆಟ್ಟಿ ಅವರು ಖಡಕ್ ಆಗಿಯೇ ಜಗಳ ಮಾಡಿದ್ದಾರೆ.

ಜಾಹ್ನವಿ ಮತ್ತು ಅಶ್ವಿನಿ ಗೌಡ ಅವರು ಕುತಂತ್ರ ನಡೆಸಿ ಗೆಜ್ಜೆ ಸದ್ದು ಮಾಡಿದ್ದು ಗುಟ್ಟಾಗಿ ಉಳಿದಿಲ್ಲ. ಗಿಲ್ಲಿ ನಟ ಮತ್ತು ಚಂದ್ರಪ್ರಭ ಮುಂತಾದವರಿಗೆ ಸತ್ಯ ಗೊತ್ತಾಗಿದೆ. ಅಲ್ಲದೇ ಕ್ಯಾಮೆರಾದಲ್ಲಿ ಕೂಡ ಸೆರೆಯಾಗಿದೆ. ತಮಗಿಂತ ತುಂಬ ಚಿಕ್ಕವಳಾದ ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡಿದ್ದು ಅನೇಕರು ಸರಿ ಎನಿಸಿಲ್ಲ. ಗಿಲ್ಲಿ ನಟ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುದೀಪ್ ಎದುರಲ್ಲಿ ಅಶ್ವಿನಿ ಗೌಡಗೆ ಡವ್ ರಾಣಿ ಎಂದ ಬಿಗ್ ಬಾಸ್ ಸ್ಪರ್ಧಿಗಳು

ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರು ಕಂಟೆಂಟ್ ಕೊಡಬೇಕು ಎಂಬ ಕಾರಣಕ್ಕೆ ಹೀಗೆಲ್ಲ ಮಾಡುತ್ತಿದ್ದಾರೆ. ಆದರೆ ಅವರು ಆಯ್ಕೆ ಮಾಡಿಕೊಂಡಿರುವ ದಾರಿ ಸರಿ ಎನಿಸುತ್ತಿಲ್ಲ. ‘ಇನ್ಮೇಲೆ ನಾನು ಅಶ್ವಿನಿ ಗೌಡಗೆ ಗೌರವ ಕೊಡಲ್ಲ’ ಎಂದು ಗಿಲ್ಲ ನಟ ಹೇಳಿದ್ದಾರೆ. ಅಲ್ಲದೇ, ವಾರಾಂತ್ಯದ ಸಂಚಿಕೆಯಲ್ಲಿ ಈ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ. ಸುದೀಪ್ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ